AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕಾಡುಪ್ರಾಣಿ ದಾಳಿಗೆ 3 ವರ್ಷದ ಮಗು ಸಾವು ಆರೋಪ: ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

Chamarajanagar News: ಕಾಡುಪ್ರಾಣಿ ದಾಳಿಯಿಂದ 3 ವರ್ಷದ ಮಗು ಸಾವು ಆರೋಪಿಸಿ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ಮಾಡಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ವಲಯ ಅರಣ್ಯಾಧಿಕಾರಿ ಕಚೇರಿ ಎದುರು ನಡೆದಿದೆ.

ಕಾಡುಪ್ರಾಣಿ ದಾಳಿಗೆ 3 ವರ್ಷದ ಮಗು ಸಾವು ಆರೋಪ: ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ
ಪ್ರತಿಭಟನೆ ಮಾಡುತ್ತಿರುವ ಜನರು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 24, 2023 | 5:10 PM

Share

ಚಾಮರಾಜನಗರ, ಆಗಸ್ಟ್​ 24: ಕಾಡುಪ್ರಾಣಿ (wild animals) ದಾಳಿಯಿಂದ 3 ವರ್ಷದ ಮಗು ಸಾವು ಆರೋಪಿಸಿ ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ ಮಾಡಿರುವಂತಹ ಘಟನೆ ಜಿಲ್ಲೆಯ ಯಳಂದೂರು ಕಚೇರಿ ಎದುರು ನಡೆದಿದೆ. ಕಳೆದ ವಾರ ಯರಿಯೂರಲ್ಲಿ ಪ್ರಾಣಿ ದಾಳಿಯಿಂದ ಗಂಭೀರ ಗಾಯಗೊಂಡಿದ್ದ ರುಕ್ಮಿಣಿ(3) ಮೈಸೂರಿನ ಕೆ.ಆರ್.ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಬಾಲಕಿ ಚಿರತೆ ದಾಳಿಗೆ ಬಲಿಯಾಗಿದ್ದಾಳೆಂದು ಗ್ರಾಮಸ್ಥರು ಆರೋಪಿಸಿದ್ದು, ಬಾಲಕಿ ರುಕ್ಮಿಣಿ ಕುಟುಂಬಕ್ಕೆ ಪರಿಹಾರ ನೀಡುವಂತೆ ಆಗ್ರಹಿಸಿ ಧರಣಿ ಮಾಡಲಾಗಿದೆ. ಸ್ಥಳಕ್ಕೆ ಚಾಮರಾಜನಗರ ಕ್ಷೇತ್ರದ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿದ್ದಾರೆ.

ಬಹಿರ್ದೆಸೆಗೆ ತೆರಳಿದ ಆದಿವಾಸಿ ಯುವಕ ಮೇಲೆ ಒಂಟಿ ಸಲಗ ದಾಳಿ

ಬಹಿರ್ದೆಸೆಗೆ ಆಚೆ ಹೋದಾಗ ಯುವಕನ ಮೇಲೆ ಒಂಟಿ ಸಲಗ ದಾಳಿ ಮಾಡಿದ್ದು, ಆತ ಶಾಶ್ವತ ಅಂಗವಿಕಲನಾಗಿರುವಂತಹ ಘಟನೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಮೇಲುಕಾಮನಹಳ್ಳಿಯಲ್ಲಿ ಇತ್ತೀಚೆಗೆ ನಡೆದಿದೆ. ನಾಗೇಶ್ ಕಾಡಾನೆ ದಾಳಿಗೆ ಒಳಗಾದ ಯುವಕ. ಇಷ್ಟೆಲ್ಲಾ ಆದರೂ ಸೂಕ್ತ ಪರಿಹಾರ ನೀಡದೆ ಅರಣ್ಯಾಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಆರೋಪಿಸಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಕಾಡಂಚಿನ ಜನರಿಗೆ ಉಪಟಳ ನೀಡುತ್ತಿದ್ದ ಪುಂಡಾನೆ ಸೆರೆ ಹಿಡಿದ ಕೂಂಬಿಂಗ್ ಕಿಂಗ್ ಬಲರಾಮ ತಂಡ

ತಡ ರಾತ್ರಿ ಬಹಿರ್ದೆಸೆಗೆ ತೆರಳಿದ ಆದಿವಾಸಿ ಯುವಕನ ಮೇಲೆ ಕಾಡಾನೆ ದಾಳಿ ನಡೆಸಿದೆ. ತನ್ನ ಸೊಂಡಲಿನಿಂದ ಎತ್ತಿ ಎಸೆದಿದೆ ಪರಿಣಾಮ ಯುವಕ ನಾಗೇಶ್​ನ ಬೆನ್ನುಮೂಳೆ ಪುಡಿ ಪುಡಿಯಾಗಿದ್ದು ರಾತ್ರಿಯಿಡಿ ಕಾಡನಲ್ಲೇ ನರಳಾಡಿದ್ದಾನೆ. ಬೆಳಗ್ಗೆ ಎದ್ದು ಗ್ರಾಮಸ್ಥರು ಬಹಿರ್ದೆಸೆಗೆ ಹೋದಾಗ ಘಟನೆ ಬೆಳಕಿಗೆ ಬಂದಿದೆ.

ಇದನ್ನೂ ಓದಿ: ಬೆಂಗಳೂರಿಗೂ ಕಾಲಿಟ್ಟ ಗಾಂಜಾ ಚಾಕೊಲೇಟ್ ಮಾರಾಟ ಜಾಲ; ಓರ್ವ ಆರೋಪಿ ಬಂಧನ

ನಾಗೇಶ್ ಕಾಡಿನಲ್ಲಿ ಬೆಂಕಿ ಬಿದ್ದಂತ ಸಮಯದಲ್ಲಿ ನಂದಿಸುವ ಕೆಲಸವನ್ನ ಮಾಡುತ್ತಿದ್ದ. ಪೌಚಿಂಗ್ ಕ್ಯಾಂಪ್ ಗಳಲ್ಲಿ ಸಣ್ಣ ಪುಟ್ಟ ಕೆಲಸ ಮಾಡಿಕೊಂಡು ಕಾರ್ಯ ನಿರ್ವಹಿಸುತ್ತಿದ್ದ. ಆದರೆ ಅತನಿಗೆ ಇಂತ ದುಸ್ಥಿತಿ ಎದುರಾದರೂ ಅರಣ್ಯಾಧಿಕಾರಿಗಳು ಮಾತ್ರ ಸ್ಪಂದಿಸಿಯೇ ಇಲ್ಲ. ಸೂಕ್ತ ಚಿಕಿತ್ಸೆ ನೀಡದೆ ಅತ್ತ ಪರಿಹಾರವನ್ನ ನೀಡದೆ ನಿರ್ಲಕ್ಷ್ಯ ವಹಿಸಿದ್ದಾರೆ.

ಹೊಲಕ್ಕೆ ಹೋದ ಮಹಿಳೆ ಮೇಲೆ ಚಿರತೆ ದಾಳಿ: ಸಾವು

ಶಿವಮೊಗ್ಗ: ಹೊಲಕ್ಕೆ ಹೋದ ಮಹಿಳೆ ಮೇಲೆ ಚಿರತೆ ದಾಳಿ ಮಾಡಿರುವಂತಹ ಘಟನೆ ಶಿವಮೊಗ್ಗ ತಾಲೂಕಿನ ಬಿಕ್ಕೋನ ಹಳ್ಳಿಯ ಹೊಲದಲ್ಲಿ ಇತ್ತೀಚೆಗೆ ನಡೆದಿತ್ತು. ಯಶೋದಮ್ಮ (45) ಮೃತ ಮಹಿಳೆ. ಹೊಲದಲ್ಲಿ ಕಳೆ ತೆಗೆಯುವಾಗ ದಾಳಿ ನಡೆಸಿದೆ. ಚಿರತೆಯ ದಾಳಿಗೆ ಯಶೋದಮ್ಮ ಬಲಿಯಾಗಿದ್ದರು. ಶಿವಮೊಗ್ಗದ ಬಿಕ್ಕೋನ ಹಳ್ಳಿ ಸರ್ವೆ ನಂಬರ್ 9 ರಲ್ಲಿ ಈ ದಾಳಿ ನಡೆದಿತ್ತು. ಅರಣ್ಯ ಇಲಾಖೆಯ ಅಧಿಕಾರಿಗಳ ಮಾಹಿತಿಯ ಪ್ರಕಾರ ಈ ದಾಳಿ ಕಾಡು ಪ್ರಾಣಿಗಳ ದಾಳಿ ನಡೆದಿರುವುದು ಖಚಿತ ಪಡಿಸಿದ್ದರು. ಘಟನಾ ಸ್ಥಳಕ್ಕೆ ಶಿವಮೊಗ್ಗ ಗ್ರಾಮಾಂತರ ಪೊಲೀಸರು ಮತ್ತು ಶಂಕರವಲಯ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ಮಾಡಿದ್ದರು.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More