ಗೊರುಕಾನ ರೆಸಾರ್ಟ್​ಗೆ ಬಂದಿದ್ದ ಪ್ರವಾಸಿಗರ ಕಾರು ಡಿಕ್ಕಿ, ವ್ಯಕ್ತಿ ಸಾವು

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದಲ್ಲಿ ರೆಸಾರ್ಟ್‌ ನಡೆಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಷೇಧಿಸಿದ್ದರೂ, ಕದ್ದುಮುಚ್ಚಿ ಗೊರುಕಾನ ಆಡಳಿತ ಮಂಡಳಿ ರೆಸಾರ್ಟ್ ನಡೆಸುತ್ತಿದೆ. ಶನಿವಾರ ತಡರಾತ್ರಿ ಗೊರುಕಾನ ರೆಸಾರ್ಟ್​ಗೆ ಬಂದಿದ್ದ ಪ್ರವಾಸಿಗರ ಕಾರು ಡಿಕ್ಕಿಯಾಗಿ ಬುಡಕಟ್ಟು ಸೋಲಿಗ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ. ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿರುವ ಗೊರುಕಾನ ರೆಸಾರ್ಟ್​ಗೆ ತಡರಾತ್ರಿ ಪ್ರವಾಸಿಗರು ಆಗಮಿಸಿದ್ದರು. ಪ್ರವಾಸಿಗರ ಕಾರು ಡಿಕ್ಕಿಯಾಗಿ ಯರಕನಗದ್ದೆ ಪೋಡು ನಿವಾಸಿ ನಂಜೇಗೌಡ(38) ಸಾವಿಗೀಡಾಗಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶಕ್ಕೂ ಕ್ಯಾರೆ ಎನ್ನದೆ ರೆಸಾರ್ಟ್​ ನಡೆಸುತ್ತಿರುವ ಗೊರುಕಾನ ಆಡಳಿತ ಮಂಡಳಿ […]

ಗೊರುಕಾನ ರೆಸಾರ್ಟ್​ಗೆ ಬಂದಿದ್ದ ಪ್ರವಾಸಿಗರ ಕಾರು ಡಿಕ್ಕಿ, ವ್ಯಕ್ತಿ ಸಾವು
ಸಾಧು ಶ್ರೀನಾಥ್​

Updated on: Jan 05, 2020 | 4:20 PM

ಚಾಮರಾಜನಗರ: ಬಿಳಿಗಿರಿರಂಗನ ಬೆಟ್ಟದಲ್ಲಿ ರೆಸಾರ್ಟ್‌ ನಡೆಸಲು ಜಿಲ್ಲಾ ಮ್ಯಾಜಿಸ್ಟ್ರೇಟ್ ನಿಷೇಧಿಸಿದ್ದರೂ, ಕದ್ದುಮುಚ್ಚಿ ಗೊರುಕಾನ ಆಡಳಿತ ಮಂಡಳಿ ರೆಸಾರ್ಟ್ ನಡೆಸುತ್ತಿದೆ. ಶನಿವಾರ ತಡರಾತ್ರಿ ಗೊರುಕಾನ ರೆಸಾರ್ಟ್​ಗೆ ಬಂದಿದ್ದ ಪ್ರವಾಸಿಗರ ಕಾರು ಡಿಕ್ಕಿಯಾಗಿ ಬುಡಕಟ್ಟು ಸೋಲಿಗ ವ್ಯಕ್ತಿ ಮೃತಪಟ್ಟಿರುವ ಘಟನೆ ನಡೆದಿದೆ.

ಯಳಂದೂರು ತಾಲೂಕಿನ ಬಿಳಿಗಿರಿರಂಗನ ಬೆಟ್ಟದಲ್ಲಿರುವ ಗೊರುಕಾನ ರೆಸಾರ್ಟ್​ಗೆ ತಡರಾತ್ರಿ ಪ್ರವಾಸಿಗರು ಆಗಮಿಸಿದ್ದರು. ಪ್ರವಾಸಿಗರ ಕಾರು ಡಿಕ್ಕಿಯಾಗಿ ಯರಕನಗದ್ದೆ ಪೋಡು ನಿವಾಸಿ ನಂಜೇಗೌಡ(38) ಸಾವಿಗೀಡಾಗಿದ್ದಾರೆ. ಜಿಲ್ಲಾ ಮ್ಯಾಜಿಸ್ಟ್ರೇಟ್ ಆದೇಶಕ್ಕೂ ಕ್ಯಾರೆ ಎನ್ನದೆ ರೆಸಾರ್ಟ್​ ನಡೆಸುತ್ತಿರುವ ಗೊರುಕಾನ ಆಡಳಿತ ಮಂಡಳಿ ವಿರುದ್ಧ ಸೋಲಿಗರು ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈಟ್ ಲೈವ್ಲಿಹುಡ್ ಪ್ರಶಸ್ತಿ ಪುರಸ್ಕೃತ ಡಾ.ಸುದರ್ಶನ್ ಮಾಲೀಕತ್ವದಲ್ಲಿ ಪರಿಸರ ಶಿಕ್ಷಣ ಮತ್ತು ಆಯುರ್ವೇದ ಕೇಂದ್ರದ ಹೆಸರಿನಲ್ಲಿ ರೆಸಾರ್ಟ್ ನಡೆಯುತ್ತಿದೆ. ಭೂ ಪರಿವರ್ತನೆ ಆದೇಶ ಉಲ್ಲಂಘನೆ ಹಿನ್ನೆಲೆಯಲ್ಲಿ ಇತ್ತೀಚೆಗೆ ಜಿಲ್ಲಾ ಮ್ಯಾಜಿಸ್ಟ್ರೇಟ್ ಭೂ ಪರಿವರ್ತನೆ ರದ್ದುಪಡಿಸಿ ಆದೇಶ ನೀಡಿತ್ತು.

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us