AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತಾಯಿಯ ಹೊಟ್ಟೆಯಲ್ಲಿರುವ ಪ್ರತಿ ಭ್ರೂಣಕ್ಕೂ ಡಿಜಿಟಲ್ ಕೋಡ್! ಕನ್ಯಾಕುಮಾರಿಯಿಂದ ದೆಹಲಿವರೆಗೂ ಜಾಗೃತಿ ಪಾದಯಾತ್ರೆ

ಸರ್ಕಾರಗಳು ಅದೆಷ್ಟೇ ಬೊಬ್ಬೆ ಹೊಡೆದರೂ ನಮ್ಮ ಜನಗಳಿಗೆ ಮಾತ್ರ ಬುದ್ದಿ ಬರುವ ಹಾಗೆ ಕಾಣುತ್ತಿಲ್ಲ. ಹೆಣ್ಣು ಭ್ರೂಣ ಪತ್ತೆ ಹಚ್ಚುವುದು ಮತ್ತು ಹತ್ಯೆ ಮಾಡುವುದು ನಿಷೇಧ ಎಂದು ಕಾನೂನು ತಂದರೂ ಜನ ಮಾತ್ರ ಕ್ಯಾರೆ ಎನ್ನುತ್ತಿಲ್ಲ. ಭ್ರೂಣ ಹತ್ಯೆಗೆ ಕಡಿವಾಣ ಹಾಕಬೇಕೆಂದು ಹೊನ್ನಾಳಿಯ ಯುವಕನೊರ್ವ ಹೊಸ ಸಾಹಸಕ್ಕೆ ಕೈ ಹಾಕಿದ್ದಾನೆ.

ತಾಯಿಯ ಹೊಟ್ಟೆಯಲ್ಲಿರುವ ಪ್ರತಿ ಭ್ರೂಣಕ್ಕೂ ಡಿಜಿಟಲ್ ಕೋಡ್! ಕನ್ಯಾಕುಮಾರಿಯಿಂದ ದೆಹಲಿವರೆಗೂ ಜಾಗೃತಿ ಪಾದಯಾತ್ರೆ
ಹೆಣ್ಣು ಭ್ರೂಣ ಹತ್ಯೆ ತಡೆಯುವಂತೆ ಜಾಗೃತಿ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Oct 08, 2023 | 6:46 PM

Share

ಚಾಮರಾಜನಗರ, ಅ.08: ದಾವಣಗೆರೆ(Davanagere) ಜಿಲ್ಲೆಯ ಹೊನ್ನಾಳಿ ನ್ಯಾಮತಿ ಅವಳಿ ತಾಲೂಕಿನ ಈ ಜಕ್ಕಳ್ಳಿ ಎಂಬ ಯುವಕ, ಹೊಸತೊಂದು ಕ್ರಾಂತಿಗೆ ಮುಂದಾಗಿದ್ದಾರೆ. ಹೆಣ್ಣು ಭ್ರೂಣ ಹತ್ಯೆ (Fetusicide) ಹಾಗೂ ಪತ್ತೆ ಹಚ್ಚುವುದನ್ನ ತಪ್ಪಿಸಲು ಹೊಸ ಪ್ರಯೋಗಕ್ಕೆ ಮುಂದಾಗಿದ್ದಾನೆ. ತಾಯಿಯ ಹೊಟ್ಟೆಯಲ್ಲಿರುವ ಭ್ರೂಣಕ್ಕೂ ಡಿಜಿಟಲ್ ಕೋಡ್ ನೀಡಬೇಕೆಂದು ಕೇಂದ್ರ ಸರ್ಕಾರದ ಗಮನ ಸೆಳೆಯಲು ಕನ್ಯಾಕುಮಾರಿಯಿಂದ ದೆಹಲಿಯವರೆಗೆ ಪಾದ ಯಾತ್ರೆಯನ್ನ ಕೈಗೊಂಡಿದ್ದಾರೆ.

ಹೌದು, ನೆರೆಯ ರಾಜ್ಯ ಕೇರಳಕ್ಕೆ ಹೊಲಿಕೆ ಮಾಡಿಕೊಂಡು ನಮ್ಮ ರಾಜ್ಯದ ಗಂಡು-ಹೆಣ್ಣು ಸಮಪಾತವನ್ನು ಕಲೆ ಹಾಕಿದರೆ, ನೂರು ಜನಕ್ಕೆ ಶೇಕಡ 92 ರಷ್ಟು ಮಾತ್ರ ಹೆಣ್ಣುಗಳ ಸಂಖ್ಯೆಯಿದೆ. ಹೆಣ್ಣು ಭ್ರೂಣವನ್ನು ಪತ್ತೆ ಹಚ್ಚುವುದು ತಾಯಿಯ ಹೊಟ್ಟೆಯಲ್ಲೇ ಹತ್ಯೆ ಮಾಡುವ ಪ್ರಕರಣಗಳು ಹೆಚ್ಚಿವೆ. ಹಾಗಾಗಿ ಗರ್ಭಧಾರಣೆ ಮಾಡಿದ ತಾಯಿಯ ಹೊಟ್ಟೆಯಲ್ಲಿರುವ ಭ್ರೂಣಕ್ಕೂ ಒಂದು ಡಿಜಿಟಲ್ ಕೋಡ್ ನೀಡಿದ್ರೆ, ಹೆಣ್ಣು ಭ್ರೂಣ ಹತ್ಯೆ ತಡೆಯಬಹುದಾಗಿದೆ.

ಇದನ್ನೂ ಓದಿ:ಮಂಡ್ಯ: ಜೀವಂತವಿದೆ ಭ್ರೂಣ ಹತ್ಯೆ; ಭ್ರೂಣ ಲಿಂಗ ಪತ್ತೆ, ಹತ್ಯೆಗೆ ಬಂದಿದ್ದ ದಂಪತಿ ಪೊಲೀಸರ ವಶ

ಈ ಹಿನ್ನಲೆ ಪ್ರಧಾನಿ ಮೋದಿಯವರ ಡಿಜಿಟಲ್ ಕೋಡ್ ವಿಚಾರವನ್ನು ಪ್ರಸ್ಥಾಪಿಸಲು ಹಾಗೂ ದೇಶಾದ್ಯಂತ ಈ ಕಾನೂನು ತಂದರೆ, ಹೆಣ್ಣು ಭ್ರೂಣ ಹತ್ಯೆಗೆ ಬ್ರೇಕ್ ಹಾಕಬಹುದಾಗಿದೆ. ಹಾಗಾಗಿ ಕನ್ಯಾಕುಮಾರಿಯಿಂದ ದೆಹಲಿಯವರೆಗೂ ಜಕ್ಕಳ್ಳಿಯವರು ಪಾದಯಾತ್ರೆ ನಡೆಸುವ ಮೂಲಕ ಕೇಂದ್ರ ಹಾಗೂ ರಾಜ್ಯ ಸರ್ಕಾರ ಗಮನ ಸೆಳೆಯಲು ಮುಂದಾಗಿದ್ದಾರೆ.

ಅದೇನೆ ಹೇಳಿ ಇನ್ನು ಕೂಡ ಸ್ಕ್ಯಾನಿಂಗ್ ನಡೆಸುವ ವೇಳೆ ಲಿಂಗ ಪತ್ತೆ ಹಚ್ಚುವುದು ಒಂದು ವೇಳೆ ಹೆಣ್ಣಾಗಿದ್ರೆ, ಅದನ್ನು ಅಭಾಷನ್ ಮಾಡಿಸುವ ಕೆಲಸ ಎಗ್ಗಿಲ್ಲದೆ ಸಾಗುತ್ತಿದೆ. ಇದೆಲ್ಲದಕ್ಕೂ ರಾಜ್ಯ ಹಾಗೂ ಕೇಂದ್ರ ಸರ್ಕಾರ ಬ್ರೇಕ್ ಹಾಕಲೇ ಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 6:45 pm, Sun, 8 October 23

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್