AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

karimani malika ninalla: ಸೋಷಿಯಲ್​ ಮೀಡಿಯಾದಲ್ಲಿ ಎಲ್ಲಿ ನೋಡಿದರೂ ಉಪೇಂದ್ರ ಸಿನಿಮಾದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡಿನ ರೀಲ್ಸ್,​ ವಿಡಿಯೋಗಳು ವೈರಲ್​ ಆಗುತ್ತಲೇ ಇದೆ. ಇದೀಗ ಮಹಿಳೆಯೋರ್ವಳು ಈ ರೀಲ್ಸ್​ ಚಟಕ್ಕೆ ಬಿದ್ದಿದ್ದು, ಇದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ
ರೂಪ ರೀಲ್ಸ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 15, 2024 | 5:20 PM

Share

ಚಾಮರಾಜನಗರ, (ಫೆಬ್ರವರಿ 15): ರಿಯಲ್‌ ಸ್ಟಾರ್‌ ಉಪೇಂದ್ರ (Upendra) ನಟನೆಯ “ಉಪೇಂದ್ರʼʼ ಸಿನಿಮಾದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು(karimani malika ninalla song) ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದೆ. ಎಲ್ಲರೂ ಹಾಡಿನ ರೀಲ್ಸ್, ಮಾಡಿದ್ದೇ ಮಾಡಿದ್ದು. ಅದರಂತೆ ಮಹಿಳೆಯೋರ್ವಳು ಇದೇ ಹಾಡಿಗೆ ರೀಲ್ಸ್​ ಮಾಡಿದ್ದು, ಇದರಿಂದ ಮನನೊಂದ ಪತಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಚಾಮರಾಜನಗರ( Chamarajnagar) ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿ.ಜಿ‌.ಪಾಳ್ಯ ಗ್ರಾಮದ ಕುಮಾರ್ (33) ನೇಣಿಗೆ ಶರಣಾದ ಪತಿ.

ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ ಎಂಬ ಸಾಂಗ್‌ಗೆ ರೀಲ್ಸ್‌ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಳು. ಈ ರೀಲ್ಸ್‌ ವಿಚಾರಕ್ಕೆ ಊರಲ್ಲಿ ಕುಮಾರ್‌ನನ್ನು ಕೆಲವರು ಕಾಲೆಳೆದು ಯಾರಪ್ಪಾ ಕರಿಮಣಿ ಮಾಲೀಕ ಎಂದು ಹೀಯಾಳಿಸಿದ್ದರಿಂದ ಮನನೊಂದು ಕುಮಾರ್‌ ಆತ್ಮಹತ್ಯೆ ಶರಣಾಗಿದ್ದಾನೆ.

ಪತ್ನಿಯ ಈ ರೀಲ್ಸ್ ನೋಡಿ ಕುಮಾರ್​ನನ್ನು ಗೆಳೆಯರು ರೇಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಕುಮಾರ್, ರೀಲ್ಸ್​ ಮಾಡಿರುವುದನ್ನು ಪ್ರಶ್ನಿಸಿ ರೂಪ ಜೊತೆ ಗಲಾಟೆ ಮಾಡಿದ್ದಾರೆ.​ ಬಳಿಕ ಅದೇನಾಯ್ತೋ ಏನು ಮನನೊಂದ ರೂಪಳ ಪತಿ ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More