AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

karimani malika ninalla: ಸೋಷಿಯಲ್​ ಮೀಡಿಯಾದಲ್ಲಿ ಎಲ್ಲಿ ನೋಡಿದರೂ ಉಪೇಂದ್ರ ಸಿನಿಮಾದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡಿನ ರೀಲ್ಸ್,​ ವಿಡಿಯೋಗಳು ವೈರಲ್​ ಆಗುತ್ತಲೇ ಇದೆ. ಇದೀಗ ಮಹಿಳೆಯೋರ್ವಳು ಈ ರೀಲ್ಸ್​ ಚಟಕ್ಕೆ ಬಿದ್ದಿದ್ದು, ಇದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ
ರೂಪ ರೀಲ್ಸ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 15, 2024 | 5:20 PM

Share

ಚಾಮರಾಜನಗರ, (ಫೆಬ್ರವರಿ 15): ರಿಯಲ್‌ ಸ್ಟಾರ್‌ ಉಪೇಂದ್ರ (Upendra) ನಟನೆಯ “ಉಪೇಂದ್ರʼʼ ಸಿನಿಮಾದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು(karimani malika ninalla song) ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದೆ. ಎಲ್ಲರೂ ಹಾಡಿನ ರೀಲ್ಸ್, ಮಾಡಿದ್ದೇ ಮಾಡಿದ್ದು. ಅದರಂತೆ ಮಹಿಳೆಯೋರ್ವಳು ಇದೇ ಹಾಡಿಗೆ ರೀಲ್ಸ್​ ಮಾಡಿದ್ದು, ಇದರಿಂದ ಮನನೊಂದ ಪತಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಚಾಮರಾಜನಗರ( Chamarajnagar) ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿ.ಜಿ‌.ಪಾಳ್ಯ ಗ್ರಾಮದ ಕುಮಾರ್ (33) ನೇಣಿಗೆ ಶರಣಾದ ಪತಿ.

ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ ಎಂಬ ಸಾಂಗ್‌ಗೆ ರೀಲ್ಸ್‌ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಳು. ಈ ರೀಲ್ಸ್‌ ವಿಚಾರಕ್ಕೆ ಊರಲ್ಲಿ ಕುಮಾರ್‌ನನ್ನು ಕೆಲವರು ಕಾಲೆಳೆದು ಯಾರಪ್ಪಾ ಕರಿಮಣಿ ಮಾಲೀಕ ಎಂದು ಹೀಯಾಳಿಸಿದ್ದರಿಂದ ಮನನೊಂದು ಕುಮಾರ್‌ ಆತ್ಮಹತ್ಯೆ ಶರಣಾಗಿದ್ದಾನೆ.

ಪತ್ನಿಯ ಈ ರೀಲ್ಸ್ ನೋಡಿ ಕುಮಾರ್​ನನ್ನು ಗೆಳೆಯರು ರೇಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಕುಮಾರ್, ರೀಲ್ಸ್​ ಮಾಡಿರುವುದನ್ನು ಪ್ರಶ್ನಿಸಿ ರೂಪ ಜೊತೆ ಗಲಾಟೆ ಮಾಡಿದ್ದಾರೆ.​ ಬಳಿಕ ಅದೇನಾಯ್ತೋ ಏನು ಮನನೊಂದ ರೂಪಳ ಪತಿ ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಗಂಗಾ ನದಿಯ ಥೀಮ್​ನಲ್ಲಿ ಮಹಾಶಿವರಾತ್ರಿಗೆ ಸಜ್ಜಾಗಿದೆ ಇಶಾ ಫೌಂಡೇಷನ್
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಎತ್ತಿನ ಬಂಡಿಯಲ್ಲಿ ದುನಿಯಾ ವಿಜಯ್ ಪುತ್ರಿಯ ಮೆರವಣಿಗೆ: ವಿಡಿಯೋ
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಟಿವಿ9 ನವನಕ್ಷತ್ರ ಪ್ರಶಸ್ತಿ ಸ್ವೀಕರಿಸಿದ ರಿಷಬ್ ಶೆಟ್ಟಿ ಭಾವುಕ ಮಾತು
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಮದುವೆಗೆ ಬಂದಿದ್ದ ಮಹಿಳೆ ನಿಗೂಢ ನಾಪತ್ತೆ; ಸ್ಫೋಟಕ ಮಾಹಿತಿ ನೀಡಿದ ಎಸ್​​ಪಿ
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಸರ್ಕಾರಿ ಮಕ್ಕಳಿಗೆ'ಸರ್ಪ್ರೈಸ್' ಕೊಟ್ಟ ಸಚಿವ ಜಮೀರ್
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಗುವಾಹಟಿಯಲ್ಲಿ 3,030 ಕೋಟಿ ರೂ. ವೆಚ್ಚದ ಸೇತುವೆ ಉದ್ಘಾಟಿಸಿದ ಪ್ರಧಾನಿ ಮೋದಿ
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಕತ್ತೆಗಳಿಗೆ ಮದುವೆ ಮಾಡಿಸಿದ ವಾಟಾಳ್ ನಾಗರಾಜ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ಚಲಿಸುತ್ತಿದ್ದ ವಾಹನಗಳ ಮೇಲೆ ಬಿದ್ದ ಕಾಂಕ್ರೀಟ್ ಸ್ಲ್ಯಾಬ್
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ವಿದ್ಯಾರ್ಥಿಗಳ ಕೈಯಲ್ಲಿ ಗಾರೆ ಕೆಲಸ ಮಾಡಿಸಿದ ಶಿಕ್ಷಕರು, ವ್ಯಾಪಕ ಆಕ್ರೋಶ
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್
ಎಣ್ಣೆ ಪಾರ್ಟಿ ಜತೆಗೇ ಕಡತ ನಿರ್ವಹಣೆ! ಬೆಸ್ಕಾಂ ಅಧಿಕಾರಿಗಳ ವಿಡಿಯೋ ವೈರಲ್