AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

karimani malika ninalla: ಸೋಷಿಯಲ್​ ಮೀಡಿಯಾದಲ್ಲಿ ಎಲ್ಲಿ ನೋಡಿದರೂ ಉಪೇಂದ್ರ ಸಿನಿಮಾದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡಿನ ರೀಲ್ಸ್,​ ವಿಡಿಯೋಗಳು ವೈರಲ್​ ಆಗುತ್ತಲೇ ಇದೆ. ಇದೀಗ ಮಹಿಳೆಯೋರ್ವಳು ಈ ರೀಲ್ಸ್​ ಚಟಕ್ಕೆ ಬಿದ್ದಿದ್ದು, ಇದರಿಂದ ಮನನೊಂದ ಪತಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದೆ.

ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ
ರೂಪ ರೀಲ್ಸ್​
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 15, 2024 | 5:20 PM

Share

ಚಾಮರಾಜನಗರ, (ಫೆಬ್ರವರಿ 15): ರಿಯಲ್‌ ಸ್ಟಾರ್‌ ಉಪೇಂದ್ರ (Upendra) ನಟನೆಯ “ಉಪೇಂದ್ರʼʼ ಸಿನಿಮಾದ ಓ ನಲ್ಲ.. ನೀನಲ್ಲ, ಕರಿಮಣಿ ಮಾಲೀಕ ನೀನಲ್ಲ ಹಾಡು(karimani malika ninalla song) ಸೋಷಿಯಲ್‌ ಮೀಡಿಯಾದಲ್ಲಿ ಸಖತ್‌ ಟ್ರೆಂಡಿಂಗ್‌ನಲ್ಲಿದೆ. ಎಲ್ಲರೂ ಹಾಡಿನ ರೀಲ್ಸ್, ಮಾಡಿದ್ದೇ ಮಾಡಿದ್ದು. ಅದರಂತೆ ಮಹಿಳೆಯೋರ್ವಳು ಇದೇ ಹಾಡಿಗೆ ರೀಲ್ಸ್​ ಮಾಡಿದ್ದು, ಇದರಿಂದ ಮನನೊಂದ ಪತಿ ಆತ್ಮಹತ್ಯೆ(Suicide) ಮಾಡಿಕೊಂಡಿದ್ದಾರೆ. ಚಾಮರಾಜನಗರ( Chamarajnagar) ಜಿಲ್ಲೆಯ ಹನೂರು ತಾಲೂಕಿನ ಪಿ.ಜಿ.ಪಾಳ್ಯ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಪಿ.ಜಿ‌.ಪಾಳ್ಯ ಗ್ರಾಮದ ಕುಮಾರ್ (33) ನೇಣಿಗೆ ಶರಣಾದ ಪತಿ.

ಕುಮಾರ್‌ ಪತ್ನಿ ರೂಪಾ ಎಂಬಾಕೆ ತನ್ನ ಸೋದರಮಾವ ಹಾಗೂ ಸಹೋದರಿ ಜತೆಗೆ ಸೇರಿ ಓ ನಲ್ಲ, ನೀನಲ್ಲ.. ಕರಿಮಣಿ ಮಾಲೀಕ ನೀನಲ್ಲ ಎಂಬ ಸಾಂಗ್‌ಗೆ ರೀಲ್ಸ್‌ ಮಾಡಿ, ಸೋಶಿಯಲ್‌ ಮೀಡಿಯಾದಲ್ಲಿ ಅಪ್ಲೋಡ್‌ ಮಾಡಿದ್ದಳು. ಈ ರೀಲ್ಸ್‌ ವಿಚಾರಕ್ಕೆ ಊರಲ್ಲಿ ಕುಮಾರ್‌ನನ್ನು ಕೆಲವರು ಕಾಲೆಳೆದು ಯಾರಪ್ಪಾ ಕರಿಮಣಿ ಮಾಲೀಕ ಎಂದು ಹೀಯಾಳಿಸಿದ್ದರಿಂದ ಮನನೊಂದು ಕುಮಾರ್‌ ಆತ್ಮಹತ್ಯೆ ಶರಣಾಗಿದ್ದಾನೆ.

ಪತ್ನಿಯ ಈ ರೀಲ್ಸ್ ನೋಡಿ ಕುಮಾರ್​ನನ್ನು ಗೆಳೆಯರು ರೇಗಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಕೋಪಗೊಂಡ ಕುಮಾರ್, ರೀಲ್ಸ್​ ಮಾಡಿರುವುದನ್ನು ಪ್ರಶ್ನಿಸಿ ರೂಪ ಜೊತೆ ಗಲಾಟೆ ಮಾಡಿದ್ದಾರೆ.​ ಬಳಿಕ ಅದೇನಾಯ್ತೋ ಏನು ಮನನೊಂದ ರೂಪಳ ಪತಿ ಕುಮಾರ್ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿದುಬಂದಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ವಿಮಾನಯಾನ ಕ್ಷೇತ್ರದ ಪ್ರಗತಿ ಒತ್ತಿಹೇಳಿದ ಪ್ರಧಾನಿ ಮೋದಿ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಮೈಸೂರಲ್ಲಿ ಸಿಎಂ ಡಿ.ಕೆ ಶಿವಕುಮಾರ್ ಭರ್ಜರಿ ರೋಡ್ ಶೋ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ಶಿರಸಿ ನಗರದ ಹಲವು ಬಡಾವಣೆಗಳು ಮುಳುಗಡೆ, ನಿವಾಸಿಗಳ ಪರದಾಟ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ರಾಜ್ಯದಲ್ಲಿ ನಾಳೆ ನಡೆಯುವ ನೇಮಕಾತಿ ಪರೀಕ್ಷೆಗಳಿಗೆ ಬಿಗಿ ಭದ್ರತೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಸರ್ಕಾರಿ ಹುದ್ದೆಗಳ ನೇಮಕಾತಿಗೆ ಕಟ್ಟುನಿಟ್ಟಿನ ಕ್ರಮ; ಖರ್ಗೆ ಘೋಷಣೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
ಖಾಲಿ ಸೈಟ್​ಗಳಲ್ಲಿ 5 ವರ್ಷದ ಒಳಗೆ ಕಟ್ಟಡ ಕಟ್ಟಲೇಬೇಕು: ಸಿಎಂ ಖಡಕ್ ಸೂಚನೆ
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
‘ಪ್ರಜ್ವಲ್​​ಗೆ ಜಿಮ್ ಟ್ರೇನರ್ ಕೊಟ್ಟಿದ್ವಿ, ಆದರೂ ಅಚಿವ್​ ಮಾಡಿಲ್ಲ’
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
'ತಮಿಳುನಾಡಿಗೆ ಇನ್ನೂ ನೀರು ಹರಿಸಿಲ್ಲ': ಡಿಕೆ ಶಿವಕುಮಾರ್
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಮೋದಿ ಭೇಟಿ ಹಿನ್ನೆಲೆ ಮೈಸೂರಿನಲ್ಲಿ ಬಿಗಿ ಬಂದೋಬಸ್ತ್: ಭದ್ರತೆ ಹೇಗಿದೆ ನೋಡಿ
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್
ಎಲ್ಲರೂ ಸೇರಿದ್ರೆ ಸಿನಿಮಾ, ನಿರ್ದೇಶಕರಿಗೆ ಹಲವು ಆಯ್ಕೆ ಇರುತ್ತೆ; ಗುರುದತ್