ಚಾಮರಾನಗರ: ಅಜ್ಜನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ದುರಂತ ಅಂತ್ಯ

ತಾತಾನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟಿದ್ದಾನೆ. ಎರಡನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿತೀಶ್ ಪೂಜಾರಿ, ತಾತನ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳಲು ಹೋಗುತ್ತಿದ್ದಾ ಬೈಕ್ ನಿಯಂತ್ರಣ ತಪ್ಪಿ ಬಿದ್ದು ಮೃತಪಟ್ಟಿದ್ದಾನೆ.

ಚಾಮರಾನಗರ: ಅಜ್ಜನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ದುರಂತ ಅಂತ್ಯ
Edited By:

Updated on: Nov 27, 2023 | 2:16 PM

ಚಾಮರಾನಗರ, (ನವೆಂಬರ್ , 27): ತಾತಾನ ಅಂತ್ಯಕ್ರಿಯೆಗೆ ತೆರಳುತ್ತಿದ್ದ ಮೆಡಿಕಲ್ ವಿದ್ಯಾರ್ಥಿ ಅಪಘಾತದಲ್ಲಿ ಮೃತಪಟ್ಟಿರುವ ಘಟನೆ ಚಾಮರಾಜನಗರ (Chamarajnagar ) ತಾಲೋಕು ಪಣ್ಯದಹುಂಡಿ ಬಳಿ ನಡೆದಿದೆ. ನಿತೀಶ್ ಪೂಜಾರಿ ((23) ಮೃತ ವಿದ್ಯಾರ್ಥಿ. ಚಾಮರಾಜನಗರ ಸರ್ಕಾರಿ ಮೆಡಿಕಲ್ ಕಾಲೇಜಿನ ಎರಡನೇ ವರ್ಷದ ಎಂಬಿಬಿಎಸ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ನಿತೀಶ್ ಪೂಜಾರಿ, ತಾತನ ಅಂತ್ಯಕ್ರಿಯೆಯಲ್ಲಿ ಬೈಕ್​ನಲ್ಲಿ ಹೋಗುತ್ತಿದ್ದಾಗ ಅಪಘಾತವಾಗಿದೆ. ಪಣ್ಯದಹುಂಡಿ ಬಳಿ ರೋಡ್ ಹಂಪ್ಸ್‌ನಲ್ಲಿ ನಿಯಂತ್ರಣ ತಪ್ಪಿ ಬಿದ್ದಿರಬಹುದು ಎನ್ನಲಾಗಿದ್ದು, ಈ ಬಗ್ಗೆ ಚಾಮರಾಜನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಸ್‌ನಿಂದ ಬಿದ್ದ ವಿದ್ಯಾರ್ಥಿನಿ ತಲೆಗೆ ಗಂಭೀರ ಗಾಯ

ಚಲಿಸುತ್ತಿದ್ದ ಬಸ್‌ನಿಂದ ಕೆಳಗೆ ಇಳಿಯಲು ಹೋಗಿ ವಿದ್ಯಾರ್ಥನಿ ರಸ್ತೆಗೆ ಬಿದ್ದಿದ್ದಾಳೆ. ಪರಿಣಾಮ ವಿದ್ಯಾರ್ಥಿನಿ ತಲೆಗೆ ಗಂಭೀರ ಗಾಯವಾಗಿದೆ. ಬೆಳಗಾವಿ ಜಿಲ್ಲೆ ಚಿಕ್ಕೋಡಿಯ ಅಂಬೇಡ್ಕರ್ ವೃತ್ತದ ಬಳಿ ಈ ಘಟನೆ ನಡೆದಿದೆ. ರಾಯಬಾಗದಿಂದ ಚಿಕ್ಕೋಡಿಗೆ ಆಗಮಿಸುತ್ತಿದ್ದ ಬಸ್​​ನಿಂದ ನಂದಿಕುರಳಿ ನಿವಾಸಿ ಸಂಜನಾ ದತ್ತವಾಡೆ(17)ಗೆ ಬಿದ್ದಿದ್ದಾಳೆ. ಇನ್ನು ಬಸ್‌ನಿಂದ ಕೆಳಗೆ ಬಿಳುವ ದೃಶ್ಯ ಸಿಸಿ ಕ್ಯಾಮರಾದಲ್ಲಿ ಸೆರೆಯಾಗಿದೆ. ಚಿಕ್ಕೋಡಿ ತಾಲೂಕು ಆಸ್ಪತ್ರೆಯಲ್ಲಿ ವಿದ್ಯಾರ್ಥಿನಿಗೆ ಪ್ರಾಥಮಿಕ ಚಿಕಿತ್ಸೆ ನೀಡಲಾಗಿದೆ. ಆದ್ರೆ, ಗಂಭೀರ ಗಾಯವಾಗಿದ್ದರಿಂದ ಹೆಚ್ಚಿನ ಚಿಕಿತ್ಸೆಗಾಗಿ ಬೆಳಗಾವಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us