AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಪ್ಪನ ಕ್ರಷರ್‌ಗೆ ಹೋಗಲು ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ

ಅವರೆಲ್ಲರೂ ಇದ್ದ ಚೂರು ಪಾರು ಭೂಮಿಯಲ್ಲಿ ಉತ್ತು ಬಿತ್ತು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಬಡ ರೈತರು. ಹೀಗಿದ್ದ ಆ ಬಡ ರೈತರ ಜೀವನ ಈಗ ಮೂರಾಬಟ್ಟೆಯಾಗಿದೆ. ತಮ್ಮ ಸ್ವಾರ್ಥ ಸಾಧನೆಗಾಗಿ ಕೈ ಶಾಸಕ ಅನ್ನದಾತರ ಅನ್ನವನ್ನೆ ಕಿತ್ತು ಕೊಳ್ಳುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹಾಗಾದರೆ, ಆ ಶಾಸಕರು ಯಾರು? ಅವರು ಮಾಡಿಕೊಂಡ ಎಡವಟ್ಟಾದರೂ ಏನು ಅಂತೀರಾ? ಈ ಸ್ಟೋರಿ ಓದಿ.

ಚಿಕ್ಕಪ್ಪನ ಕ್ರಷರ್‌ಗೆ ಹೋಗಲು ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ
ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Sep 19, 2024 | 8:42 PM

Share

ಚಾಮರಾಜನಗರ, ಸೆ.19: ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್(MLA Ganesh Prasad) ನಡೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೊಡ್ಡಹುಂಡಿ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಚಿಕ್ಕಪ್ಪನ ಕ್ರಷರ್​ಗೆ ಹೋಗಲು ರಸ್ತೆ ಮಾಡುವ ಉದ್ದೇಶದಿಂದ ಜಮೀನಿನಲ್ಲಿ ಫಸಲು ನಾಶ ಮಾಡಿ ರಸ್ತೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ರಸ್ತೆಯಿಂದ ಜಮೀನುಗಳಲ್ಲಿ ಬೆಳೆದಿದ್ದ ಹುರುಳಿ, ಸೂರ್ಯಕಾಂತಿ, ಜೋಳ ಮತ್ತಿತ್ತರ ಬೆಳೆ ನಾಶವಾಗಿದೆ. ಬಂಡೀದಾರಿ ಹೆಸರಿನಲ್ಲಿ ಸುಮಾರು 2 ಕಿಮೀ ರಸ್ತೆ ನಿರ್ಮಿಸಲಾಗಿದೆ. ನಾವ್ಯಾರು ಬಂಡೀ ದಾರಿ ನಿರ್ಮಿಸಿ ಎಂದು ಕೇಳಿಲ್ಲ. ಆದರೂ ಕೂಡ ಶಾಸಕರ ಚಿಕ್ಕಪ್ಪ ನಂಜುಂಡ ಪ್ರಸಾದ್​ಗೆ ಸೇರಿದ ಕ್ರಷರ್​ಗೆ ದಾರಿ ಮಾಡಿಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ನಡೆಸಿ ರಸ್ತೆ ನಿರ್ಮಿಸಲು ಹೊರಟಿದ್ದಾರೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ರಸ್ತೆ ನಿರ್ಮಿಸುವ ಸ್ಥಳಕ್ಕೆ ಗುಂಡ್ಲುಪೇಟೆ ತಹಶೀಲ್ದಾರ್ ಭೇಟಿ ಕೊಟ್ಟಿದ್ದರು. ಈ ವೇಳೆ ರೈತರು ತಹಶೀಲ್ದಾರ್​ಗೆ ತರಾಟೆ ತೆಗೆದುಕೊಂಡರು. ನಮಗೆ ಇಲ್ಲಿರುವುದೇ ಅರ್ಧ, ಒಂದು ಎಕರೆ ಜಮೀನು. ರಸ್ತೆ ನಿರ್ಮಾಣ ಮಾಡಿದರೆ ನಮಗೆ ಜಮೀನು ಉಳಿಯಲ್ಲ. ಅಲ್ಲದೇ ಕ್ರಷರ್ ಲಾರಿಗಳ ಸಂಚಾರದಿಂದ ಧೂಳಿನಿಂದ ಬೆಳೆಗಳಿಗೆ ಹಾನಿಯಾಗುತ್ತದೆ. ಹಿಂದೆ 2018 ರಲ್ಲೂ ಕೂಡ ರಸ್ತೆ ನಿರ್ಮಿಸಲು ಹೊರಟಾಗ ರೈತರು ತಡೆಗಟ್ಟಿದ್ದರು.ಇದೀಗ ಕಾಂಗ್ರೆಸ್ ಸರ್ಕಾರ ಇರುವುದರಿಂದ ಅಧಿಕಾರದ ಬಲದಿಂದ ನಮ್ಮ ಮೇಲೆ ದೌರ್ಜನ್ಯ ಮಾಡ್ತಿದ್ದಾರೆಂದು ಸ್ಥಳೀಯ ರೈತರು ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿ:ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ

ಒಟ್ಟಿನಲ್ಲಿ ರೈತರ ಜಮೀನಿಗೆ ಹೋಗಿ ವ್ಯವಸಾಯ ಮಾಡಲು ಎಷ್ಟೋ ಕಡೆ ರಸ್ತೆಗಳಿಲ್ಲ. ಆದ್ರೆ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಅಧಿಕಾರದ ಬಲದಿಂದ ತಮ್ಮ ಚಿಕ್ಕಪ್ಪ ನಂಜುಂಡ ಪ್ರಸಾದ್ ಕ್ರಷರ್​ಗೆ ದಾರಿ ಮಾಡಿಕೊಡಲೂ ರಸ್ತೆ ನಿರ್ಮಿಸಲು ಹೊರಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಇದಕ್ಕೆ ಅಧಿಕಾರಿಗಳು ಸಾಥ್ ಕೊಟ್ಟಿದ್ದರಿಂದ ಸ್ಥಳೀಯರು ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಬಿಗ್ ಬಾಸ್: ಬಂಗಾರದ ಅಂಗಡಿಯಲ್ಲಿ ಕಾವ್ಯಾ ಜೊತೆ ಸೆಲ್ಫಿಗೆ ಮುಗಿಬಿದ್ದ ಜನ
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಕೂದಲೆಳೆ ಅಂತರದಲ್ಲಿ ಪ್ರಾಣಾಪಾಯದಿಂದ ಪಾರಾದ ಅಫ್ಘಾನ್ ಬ್ಯಾಟರ್
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
ಅಪರೂಪದ ವಸ್ತು ಪತ್ತೆ:ಲಕ್ಕುಂಡಿ ನೈಜ ಗತವೈಭವ ಈಗ ಆರಂಭ!
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
‘ಈ ಬಂಗಾರದ ಚೈನ್ ನನಗೆ ಅಲ್ವಾ ಸರ್’: ಶಾಕ್ ಆದ ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ರಕ್ಷಿತಾ ಶೆಟ್ಟಿ ಕಣ್ಣಲ್ಲಿ ನನ್ನ ಗೆಲುವಿನ ಖುಷಿ ಕಾಣಿಸಿತು: ಗಿಲ್ಲಿ ನಟ
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ಬಾಬರ್ ಆಝಂ ತಂಡದಿಂದ ಹೊರಬಿದ್ದ ಬೆನ್ನಲ್ಲೇ ಫೈನಲ್​ಗೇರಿದ ಸಿಡ್ನಿ ಸಿಕ್ಸರ್ಸ್
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ರಾಹುಲ್​​ ನೀಡಿದ್ದ ಭರವಸೆ ಬಗ್ಗೆ ಬೈಕ್​​ ಟ್ಯಾಕ್ಸಿ ರೈಡರ್​​ಗಳು ಏನಂದ್ರು?
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಮತ್ತೊಂದು ಕೆಟ್ಟ ದಾಖಲೆಯೊಂದಿಗೆ ವಿಶ್ವ ಮಟ್ಟದಲ್ಲಿ ಸುದ್ದಿಯಾದ ಬೆಂಗಳೂರು
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಸಾಲು ಸಾಲು ರಜೆ ಹಿನ್ನೆಲೆ ಊರಿನತ್ತ ಹೊರಟ ಜನರಿಗೆ ಶಾಕ್​​: ದುಪ್ಪಟ್ಟು ದರ
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್
ಗಿಲ್ಲಿಗೆ ಮನೆಯಲ್ಲೇ 10 ಲಕ್ಷ ರೂಪಾಯಿ ಕೊಟ್ಟ ಕಿಚ್ಚ ಸುದೀಪ್