AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಪ್ಪನ ಕ್ರಷರ್‌ಗೆ ಹೋಗಲು ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ

ಅವರೆಲ್ಲರೂ ಇದ್ದ ಚೂರು ಪಾರು ಭೂಮಿಯಲ್ಲಿ ಉತ್ತು ಬಿತ್ತು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಬಡ ರೈತರು. ಹೀಗಿದ್ದ ಆ ಬಡ ರೈತರ ಜೀವನ ಈಗ ಮೂರಾಬಟ್ಟೆಯಾಗಿದೆ. ತಮ್ಮ ಸ್ವಾರ್ಥ ಸಾಧನೆಗಾಗಿ ಕೈ ಶಾಸಕ ಅನ್ನದಾತರ ಅನ್ನವನ್ನೆ ಕಿತ್ತು ಕೊಳ್ಳುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹಾಗಾದರೆ, ಆ ಶಾಸಕರು ಯಾರು? ಅವರು ಮಾಡಿಕೊಂಡ ಎಡವಟ್ಟಾದರೂ ಏನು ಅಂತೀರಾ? ಈ ಸ್ಟೋರಿ ಓದಿ.

ಚಿಕ್ಕಪ್ಪನ ಕ್ರಷರ್‌ಗೆ ಹೋಗಲು ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ
ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: Sep 19, 2024 | 8:42 PM

Share

ಚಾಮರಾಜನಗರ, ಸೆ.19: ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್(MLA Ganesh Prasad) ನಡೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೊಡ್ಡಹುಂಡಿ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಚಿಕ್ಕಪ್ಪನ ಕ್ರಷರ್​ಗೆ ಹೋಗಲು ರಸ್ತೆ ಮಾಡುವ ಉದ್ದೇಶದಿಂದ ಜಮೀನಿನಲ್ಲಿ ಫಸಲು ನಾಶ ಮಾಡಿ ರಸ್ತೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ರಸ್ತೆಯಿಂದ ಜಮೀನುಗಳಲ್ಲಿ ಬೆಳೆದಿದ್ದ ಹುರುಳಿ, ಸೂರ್ಯಕಾಂತಿ, ಜೋಳ ಮತ್ತಿತ್ತರ ಬೆಳೆ ನಾಶವಾಗಿದೆ. ಬಂಡೀದಾರಿ ಹೆಸರಿನಲ್ಲಿ ಸುಮಾರು 2 ಕಿಮೀ ರಸ್ತೆ ನಿರ್ಮಿಸಲಾಗಿದೆ. ನಾವ್ಯಾರು ಬಂಡೀ ದಾರಿ ನಿರ್ಮಿಸಿ ಎಂದು ಕೇಳಿಲ್ಲ. ಆದರೂ ಕೂಡ ಶಾಸಕರ ಚಿಕ್ಕಪ್ಪ ನಂಜುಂಡ ಪ್ರಸಾದ್​ಗೆ ಸೇರಿದ ಕ್ರಷರ್​ಗೆ ದಾರಿ ಮಾಡಿಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ನಡೆಸಿ ರಸ್ತೆ ನಿರ್ಮಿಸಲು ಹೊರಟಿದ್ದಾರೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ರಸ್ತೆ ನಿರ್ಮಿಸುವ ಸ್ಥಳಕ್ಕೆ ಗುಂಡ್ಲುಪೇಟೆ ತಹಶೀಲ್ದಾರ್ ಭೇಟಿ ಕೊಟ್ಟಿದ್ದರು. ಈ ವೇಳೆ ರೈತರು ತಹಶೀಲ್ದಾರ್​ಗೆ ತರಾಟೆ ತೆಗೆದುಕೊಂಡರು. ನಮಗೆ ಇಲ್ಲಿರುವುದೇ ಅರ್ಧ, ಒಂದು ಎಕರೆ ಜಮೀನು. ರಸ್ತೆ ನಿರ್ಮಾಣ ಮಾಡಿದರೆ ನಮಗೆ ಜಮೀನು ಉಳಿಯಲ್ಲ. ಅಲ್ಲದೇ ಕ್ರಷರ್ ಲಾರಿಗಳ ಸಂಚಾರದಿಂದ ಧೂಳಿನಿಂದ ಬೆಳೆಗಳಿಗೆ ಹಾನಿಯಾಗುತ್ತದೆ. ಹಿಂದೆ 2018 ರಲ್ಲೂ ಕೂಡ ರಸ್ತೆ ನಿರ್ಮಿಸಲು ಹೊರಟಾಗ ರೈತರು ತಡೆಗಟ್ಟಿದ್ದರು.ಇದೀಗ ಕಾಂಗ್ರೆಸ್ ಸರ್ಕಾರ ಇರುವುದರಿಂದ ಅಧಿಕಾರದ ಬಲದಿಂದ ನಮ್ಮ ಮೇಲೆ ದೌರ್ಜನ್ಯ ಮಾಡ್ತಿದ್ದಾರೆಂದು ಸ್ಥಳೀಯ ರೈತರು ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿ:ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ

ಒಟ್ಟಿನಲ್ಲಿ ರೈತರ ಜಮೀನಿಗೆ ಹೋಗಿ ವ್ಯವಸಾಯ ಮಾಡಲು ಎಷ್ಟೋ ಕಡೆ ರಸ್ತೆಗಳಿಲ್ಲ. ಆದ್ರೆ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಅಧಿಕಾರದ ಬಲದಿಂದ ತಮ್ಮ ಚಿಕ್ಕಪ್ಪ ನಂಜುಂಡ ಪ್ರಸಾದ್ ಕ್ರಷರ್​ಗೆ ದಾರಿ ಮಾಡಿಕೊಡಲೂ ರಸ್ತೆ ನಿರ್ಮಿಸಲು ಹೊರಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಇದಕ್ಕೆ ಅಧಿಕಾರಿಗಳು ಸಾಥ್ ಕೊಟ್ಟಿದ್ದರಿಂದ ಸ್ಥಳೀಯರು ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಕ್ಯಾಮರೂನ್ ಗ್ರೀನ್‌ ವೇತನದಿಂದ 7.20 ಕೋಟಿ ರೂ. ಕಡಿತ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬಿಜೆಪಿಗೆ ಹೊಸ ಸಾರಥಿ ಬೆನ್ನಲ್ಲೇ ದಿಲ್ಲಿಗೆ ಹಾರಿದ ವಿಜಯೇಂದ್ರ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಬನ್ನೇರುಘಟ್ಟ ಝೂಗೆ ದಕ್ಷಿಣ ಆಫ್ರಿಕಾದ ಕ್ಯಾಪುಚಿನ್ ಕೋತಿಗಳ ಎಂಟ್ರಿ
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಮನೆ ಭೋಗ್ಯ ಸಂಬಂಧ ಇಬ್ಬರ ಗಲಾಟೆ,  ಮೂರನೆಯವರಿಗೆ ಬಿತ್ತು ಗೂಸಾ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಬರ್ತ್​ಡೇಗೆ ಕುಮಾರಸ್ವಾಮಿಗೆ ಅಭಿಮಾನಿ ಕೊಟ್ಟ ಚಿನ್ನದ ಚೈನ್ ಹೇಗಿದೆ ನೋಡಿ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಚಾಮರಾಜನಗರದಲ್ಲಿ ಬೃಹದಾಕಾರದ ಹುಲಿ ಪ್ರತ್ಯಕ್ಷ!
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಸದನದಲ್ಲಿ ಸಿಎಂ ಸಿದ್ದರಾಮಯ್ಯ ಕಾಲೆಳೆದ ಸುರೇಶ್ ಕುಮಾರ್: ಸ್ವಾರಸ್ಯಕರ ಚರ್ಚೆ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಮಾಗಡಿ ಯುವಕ- ಉಡುಪಿ ಯುವತಿ, ಆನ್​​ಲೈನ್​​ನಲ್ಲೇ ನಿಶ್ಚಿತಾರ್ಥ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಲೇಡಿ ಗೆಟಪ್ ವಿಷಯಕ್ಕೆ ಶಿವಣ್ಣನ ಕಾಲೆಳೆದ ಉಪೇಂದ್ರ; ಎಷ್ಟು ಕ್ಯೂಟ್ ನೋಡಿ
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?
ಬಿಗ್​​ಬಾಸ್ ಫಿನಾಲೆಗೆ ಕನ್ನಡತಿಯರ ಎಂಟ್ರಿ: ಗೆದ್ದವರಿಗೆ ಸಿಗುವ ಹಣವೆಷ್ಟು?