AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿಕ್ಕಪ್ಪನ ಕ್ರಷರ್‌ಗೆ ಹೋಗಲು ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ

ಅವರೆಲ್ಲರೂ ಇದ್ದ ಚೂರು ಪಾರು ಭೂಮಿಯಲ್ಲಿ ಉತ್ತು ಬಿತ್ತು ಹೊಟ್ಟೆ ತುಂಬಿಸಿಕೊಳ್ಳುತ್ತಿದ್ದ ಬಡ ರೈತರು. ಹೀಗಿದ್ದ ಆ ಬಡ ರೈತರ ಜೀವನ ಈಗ ಮೂರಾಬಟ್ಟೆಯಾಗಿದೆ. ತಮ್ಮ ಸ್ವಾರ್ಥ ಸಾಧನೆಗಾಗಿ ಕೈ ಶಾಸಕ ಅನ್ನದಾತರ ಅನ್ನವನ್ನೆ ಕಿತ್ತು ಕೊಳ್ಳುತ್ತಿದ್ದಾರೆಂಬ ಆರೋಪ ಕೇಳಿ ಬಂದಿದೆ. ಹಾಗಾದರೆ, ಆ ಶಾಸಕರು ಯಾರು? ಅವರು ಮಾಡಿಕೊಂಡ ಎಡವಟ್ಟಾದರೂ ಏನು ಅಂತೀರಾ? ಈ ಸ್ಟೋರಿ ಓದಿ.

ಚಿಕ್ಕಪ್ಪನ ಕ್ರಷರ್‌ಗೆ ಹೋಗಲು ಅಕ್ರಮವಾಗಿ ರಸ್ತೆ ನಿರ್ಮಾಣ: ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ
ಶಾಸಕ ಗಣೇಶ್ ಪ್ರಸಾದ್ ವಿರುದ್ದ ಗಂಭೀರ ಆರೋಪ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Sep 19, 2024 | 8:42 PM

Share

ಚಾಮರಾಜನಗರ, ಸೆ.19: ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್(MLA Ganesh Prasad) ನಡೆಗೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ದೊಡ್ಡಹುಂಡಿ ಗ್ರಾಮಸ್ಥರು ರೊಚ್ಚಿಗೆದ್ದಿದ್ದಾರೆ. ಚಿಕ್ಕಪ್ಪನ ಕ್ರಷರ್​ಗೆ ಹೋಗಲು ರಸ್ತೆ ಮಾಡುವ ಉದ್ದೇಶದಿಂದ ಜಮೀನಿನಲ್ಲಿ ಫಸಲು ನಾಶ ಮಾಡಿ ರಸ್ತೆ ಮಾಡುತ್ತಿರುವ ಆರೋಪ ಕೇಳಿಬಂದಿದೆ. ರಸ್ತೆಯಿಂದ ಜಮೀನುಗಳಲ್ಲಿ ಬೆಳೆದಿದ್ದ ಹುರುಳಿ, ಸೂರ್ಯಕಾಂತಿ, ಜೋಳ ಮತ್ತಿತ್ತರ ಬೆಳೆ ನಾಶವಾಗಿದೆ. ಬಂಡೀದಾರಿ ಹೆಸರಿನಲ್ಲಿ ಸುಮಾರು 2 ಕಿಮೀ ರಸ್ತೆ ನಿರ್ಮಿಸಲಾಗಿದೆ. ನಾವ್ಯಾರು ಬಂಡೀ ದಾರಿ ನಿರ್ಮಿಸಿ ಎಂದು ಕೇಳಿಲ್ಲ. ಆದರೂ ಕೂಡ ಶಾಸಕರ ಚಿಕ್ಕಪ್ಪ ನಂಜುಂಡ ಪ್ರಸಾದ್​ಗೆ ಸೇರಿದ ಕ್ರಷರ್​ಗೆ ದಾರಿ ಮಾಡಿಕೊಡಲು ಅಧಿಕಾರಿಗಳು ಮುಂದಾಗಿದ್ದಾರೆ. ನಮ್ಮ ಮೇಲೆ ದಬ್ಬಾಳಿಕೆ ನಡೆಸಿ ರಸ್ತೆ ನಿರ್ಮಿಸಲು ಹೊರಟಿದ್ದಾರೆಂದು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು ರಸ್ತೆ ನಿರ್ಮಿಸುವ ಸ್ಥಳಕ್ಕೆ ಗುಂಡ್ಲುಪೇಟೆ ತಹಶೀಲ್ದಾರ್ ಭೇಟಿ ಕೊಟ್ಟಿದ್ದರು. ಈ ವೇಳೆ ರೈತರು ತಹಶೀಲ್ದಾರ್​ಗೆ ತರಾಟೆ ತೆಗೆದುಕೊಂಡರು. ನಮಗೆ ಇಲ್ಲಿರುವುದೇ ಅರ್ಧ, ಒಂದು ಎಕರೆ ಜಮೀನು. ರಸ್ತೆ ನಿರ್ಮಾಣ ಮಾಡಿದರೆ ನಮಗೆ ಜಮೀನು ಉಳಿಯಲ್ಲ. ಅಲ್ಲದೇ ಕ್ರಷರ್ ಲಾರಿಗಳ ಸಂಚಾರದಿಂದ ಧೂಳಿನಿಂದ ಬೆಳೆಗಳಿಗೆ ಹಾನಿಯಾಗುತ್ತದೆ. ಹಿಂದೆ 2018 ರಲ್ಲೂ ಕೂಡ ರಸ್ತೆ ನಿರ್ಮಿಸಲು ಹೊರಟಾಗ ರೈತರು ತಡೆಗಟ್ಟಿದ್ದರು.ಇದೀಗ ಕಾಂಗ್ರೆಸ್ ಸರ್ಕಾರ ಇರುವುದರಿಂದ ಅಧಿಕಾರದ ಬಲದಿಂದ ನಮ್ಮ ಮೇಲೆ ದೌರ್ಜನ್ಯ ಮಾಡ್ತಿದ್ದಾರೆಂದು ಸ್ಥಳೀಯ ರೈತರು ಆರೋಪ ಮಾಡುತ್ತಿದ್ದಾರೆ.

ಇದನ್ನೂ ಓದಿ:ಚಾಮರಾಜನಗರ: ಮತ್ತೊಂದು ಆನೆಯ ಕಳೇಬರ ಪತ್ತೆ; ಅರಣ್ಯಾಧಿಕಾರಿಗಳಲ್ಲಿ ಮೂಡಿದ ಅನುಮಾನ

ಒಟ್ಟಿನಲ್ಲಿ ರೈತರ ಜಮೀನಿಗೆ ಹೋಗಿ ವ್ಯವಸಾಯ ಮಾಡಲು ಎಷ್ಟೋ ಕಡೆ ರಸ್ತೆಗಳಿಲ್ಲ. ಆದ್ರೆ, ಗುಂಡ್ಲುಪೇಟೆ ಶಾಸಕ ಗಣೇಶ್ ಪ್ರಸಾದ್ ಅಧಿಕಾರದ ಬಲದಿಂದ ತಮ್ಮ ಚಿಕ್ಕಪ್ಪ ನಂಜುಂಡ ಪ್ರಸಾದ್ ಕ್ರಷರ್​ಗೆ ದಾರಿ ಮಾಡಿಕೊಡಲೂ ರಸ್ತೆ ನಿರ್ಮಿಸಲು ಹೊರಟಿರುವುದು ವ್ಯಾಪಕ ಟೀಕೆಗೆ ಕಾರಣವಾಗಿದೆ. ಇದಕ್ಕೆ ಅಧಿಕಾರಿಗಳು ಸಾಥ್ ಕೊಟ್ಟಿದ್ದರಿಂದ ಸ್ಥಳೀಯರು ಅಧಿಕಾರಿಗಳ ವಿರುದ್ಧ ರೊಚ್ಚಿಗೆದ್ದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು