ಹೆಗ್ಗೋಠಾರದಲ್ಲಿ ಆಚರಿಸಲಾಯ್ತು ವಿಶೇಷ ಶಿವರಾತ್ರಿ ಉತ್ಸವ; 40 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಕಪಿಲಾ ತೀರ್ಥ ತಂದ ಭಕ್ತಗಣ

ಇಂದು ಶಿವರಾತ್ರಿ, ಎಲ್ಲೆಡೆ ಶಿವನಿಗೆ ನಾನಾ ರೀತಿಯ ಪೂಜೆ-ಪುನಸ್ಕಾರಗಳು ನಡೆಯುತ್ತವೆ. ಹಲವೆಡೆ ವಿಶಿಷ್ಟ ರೀತಿಯಲ್ಲಿ ಶಿವರಾತ್ರಿ ಆಚರಿಸಕಾಗುತ್ತದೆ. ಅದೇ ರೀತಿ ಗಡಿ ನಾಡು ಚಾಮರಾಜನಗರದಲ್ಲೂ ವಿಶೇಷವಾಗಿ ಶಿವರಾತ್ರಿ ಆಚರಿಸಲಾಯ್ತು. ಈ ಕುರಿತಾದ ಒಂದು ಸ್ಟೋರಿ ಇಲ್ಲಿದೆ.

ಹೆಗ್ಗೋಠಾರದಲ್ಲಿ ಆಚರಿಸಲಾಯ್ತು ವಿಶೇಷ ಶಿವರಾತ್ರಿ ಉತ್ಸವ; 40 ಕಿಲೋ ಮೀಟರ್ ಕಾಲ್ನಡಿಗೆಯಲ್ಲಿ ತೆರಳಿ ಕಪಿಲಾ ತೀರ್ಥ ತಂದ ಭಕ್ತಗಣ
ಚಾಮರಾಜನಗರ ಶಿವರಾತ್ರಿ
Edited By: ಕಿರಣ್ ಹನುಮಂತ್​ ಮಾದಾರ್

Updated on: Mar 08, 2024 | 9:45 PM

ಚಾಮರಾಜನಗರ, ಮಾ.08: ಇಂದು ದೇಶದೆಲ್ಲೆಡೆ ಸಡಗರ ಸಂಭ್ರಮದಿಂದ ಮಹಾ ಶಿವರಾತ್ರಿ(Maha Shivratri) ಹಬ್ಬವನ್ನ ಆಚರಿಸಲಾಗುತ್ತಿದೆ. ಅದೇ ರೀತಿ ಚಾಮರಾಜನಗರ ತಾಲೂಕಿನ ಹೆಗ್ಗೋಠಾರ ಗ್ರಾಮದ ಜನರು 40 ಕಿಲೋ ಮೀಟರ್ ನಡೆದುಕೊಂಡು ಹೋಗಿ ಕಪಿಲೆಯ ನೀರನ್ನ ಕಳಸದಲ್ಲಿ ತಂದು, ಬಳಿಕ ಅದನ್ನ ಗ್ರಾಮದ ಸಿದ್ದರಾಮೇಶ್ವರನ ದೆವಾಲಯದ ಶಿವಲಿಂಗಕ್ಕೆಅಭಿಷೇಕ ಮಾಡಿ ನಂತರ ಗ್ರಾಮದ ಜನತೆಗೆ ಆ ಅಭಿಷೇಕದ ನೀರನ್ನ ನೀಡಿ ವಿಶೇಷವಾಗಿ ಶಿವರಾತ್ರಿ ಹಬ್ಬವನ್ನ ಆಚರಿಸಿದ್ದಾರೆ.

ಚೋಳರ ಕಾಲದಲ್ಲಿ ನಿರ್ಮಾಣಗೊಂಡಿರುವ ಸಿದ್ದರಾಮೇಶ್ವರ ದೇವಾಲಯಕ್ಕೆ ಹೆಗ್ಗೋಠಾರ ಗ್ರಾಮದ ಐದು ಕುಟುಂಬಗಳು ತಲ-ತಲಾಂತರಗಳಿಂದ ಬರಿಗಾಲಲ್ಲಿ ಕಾಲ್ನಡಿಗೆ ಮೂಲಕ ಕಪಿಲಾಜಲ ಹೊತ್ತು ತರುವ ಕಾಯಕ ಮಾಡಿಕೊಂಡು ಬರುತ್ತಿವೆ. ಹೀಗೆ ತಂದ ಜಲದಿಂದಲೇ ಸಿದ್ದರಾಮೇಶ್ವರನಿಗೆ ವಿಶೇಷ ಜಲಾಭಿಷೇಕ ಮಾಡಿದ ಬಳಿಕವಷ್ಟೇ ಮಹಾ ಶಿವರಾತ್ರಿ ಹಬ್ಬ ಸಂಪೂರ್ಣಗೊಳ್ಳುತ್ತದೆ.

ಇದನ್ನೂ ಓದಿ:Maha Shivaratri 2024: ಮಹಾ ಶಿವರಾತ್ರಿ ಉಪವಾಸದ ನಿಯಮಗಳೇನು? ಏನು ಸೇವಿಸಬಹುದು, ಏನು ತಿನ್ನಬಾರದು?

ಒಟ್ಟಾರೆ ಒಂದೊಂದು ಊರಿನಲ್ಲಿ ಒಂದೊಂದು ರೀತಿ ಮಹಾಶಿವರಾತ್ರಿ ಹಬ್ಬವನ್ನ ಆಚರಿಸಲಾಗುತ್ತದೆ. ಅದೇ ರೀತಿ ಪೂರ್ವಿಕರು ನಡೆದು ಬಂದ ಹಾದಿ ಹಾಗೂ ಸಂಪ್ರದಾಯವನ್ನ ಬಿಡದೆ ಈಗಿನ ಪೀಳಿಗೆ ಆ ಸಂಸ್ಕೃತಿಯನ್ನ ಪಾಲನೆ ಮಾಡಿಕೊಂಡು ಹೋಗುತ್ತಿರುವುದು ನಿಜಕ್ಕೂ ಸಂತಸವೇ ಸರಿ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us