AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ʻಕರಿಮಣಿ ಮಾಲೀಕ ನೀನಲ್ಲʼ ಎಂದಿದಕ್ಕೆ ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​; ಸ್ಪಷ್ಟತೆ ನೀಡಿದ ಪತ್ನಿ

ʻಕರಿಮಣಿ ಮಾಲೀಕ ನೀನಲ್ಲʼ ಎಂದು ಪತ್ನಿ ಮಾಡಿದ ರೀಲ್ಸ್​ಗೆ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದ್ದು, ಪತ್ನಿ ರೀಲ್ಸ್ ಮಾಡಿದಕ್ಕೆ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತನ ಕುಟುಂಬಸ್ಥರು ವಾದ ಮಾಡ್ತಾಯಿದ್ರೆ, ಇತ್ತ ಪತ್ನಿ ರೂಪ ತನ್ನ ಪತಿಯ ಸಾವಿಗೆ ಸಾಲದ ಶೂಲವೇ ಕಾರಣ ಎಂದು ಹೇಳುತ್ತಿದ್ದಾಳೆ.

ʻಕರಿಮಣಿ ಮಾಲೀಕ ನೀನಲ್ಲʼ ಎಂದಿದಕ್ಕೆ ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​; ಸ್ಪಷ್ಟತೆ ನೀಡಿದ ಪತ್ನಿ
ಮೃತನ ಪತ್ನಿ ರೂಪಾ
ಸೂರಜ್ ಪ್ರಸಾದ್ ಎಸ್.ಎನ್
| Updated By: ಕಿರಣ್ ಹನುಮಂತ್​ ಮಾದಾರ್|

Updated on: Feb 16, 2024 | 3:30 PM

Share

ಚಾಮರಾಜನಗರ, ಫೆ.16: ಪತ್ನಿಯ ಕರಿಮಣಿ ಮಾಲೀಕ ರೀಲ್ಸ್​ಗೆ ಮನನೊಂದು ಪತಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ.ಈ ಕುರಿತು ಪ್ರತಿಕ್ರಿಯೆ ನೀಡಿದ ಮೃತ ಕುಮಾರ್​ ಪತ್ನಿ ರೂಪ, ‘ನಾನು ರೀಲ್ಸ್ ಮಾಡಿದಕ್ಕೆ ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿಲ್ಲ. ಈ ಹಿಂದಿನಿಂದಲು ನಾನು ರೀಲ್ಸ್ ಮಾಡಿದ್ದೇನೆ, ಅದು ನನ್ನ ಪತಿ ಕುಮಾರ್​ಗೂ ತಿಳಿದಿದೆ. ನನ್ನ ಮೇಲೆ ಅವರ ಕುಟುಂಬಸ್ಥರು ಸುಕಾ ಸುಮ್ಮನೆ ಆರೋಪಿಸುತ್ತಿದ್ದಾರೆ. ನಿಜವಾಗಿಯೂ ನನ್ನ ಪತಿ ಸಾವಿಗೆ ಮಾಡಿಕೊಂಡಿದ್ದ ಸಾಲವೇ ಕಾರಣ ಎಂದಿದ್ದಾರೆ.

ಈ ಸಾವಿಗೆ ನಾನು ಮಾಡಿದ್ದ ರೀಲ್ಸ್ ಕಾರಣವಲ್ಲವೆಂದ ಪತ್ನಿ ರೂಪ

ಇನ್ನು ಆತ್ಮಹತ್ಯೆ ಮಾಡಿಕೊಂಡ ಕುಮಾರ್ ‘ಪ್ರತಿನಿತ್ಯ ಕುಡಿಯುತ್ತಿದ್ದ, ಜೊತೆಗೆ ಇಸ್ಪಿಟ್ ಆಡುವ ಚಟ ಕೂಡ ಇತ್ತು. ಈ ಹಿನ್ನಲೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ನಾನು ಮಾಡಿದ್ದ ರೀಲ್ಸ್ ಕಾರಣವಲ್ಲ ಎಂದಿದ್ದಾರೆ. ಇದರ ಜೊತೆಗೆ ಆಸ್ತಿಯ ವಿಚಾರಕ್ಕೆ ಆಗಾಗ ಜಗಳವಾಗುತ್ತಿತ್ತಂತೆ. ಇದು ಒಮ್ಮೆ ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು ಮತ್ತು ಸಾಲ, ಈ ಎಲ್ಲ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ, ಇದೀಗ ನಾನು ಮಾಡಿದ ರೀಲ್ಸ್​ ಕಾರಣವೆಂದು ಅವರ ಕುಟುಂಬದವರು ಆರೋಪಿಸುತ್ತಿದ್ದಾರೆ ಎಂದು ಅಳಲನ್ನು ಮೃತನ ಪತ್ನಿ ತೋಡಿಕೊಂಡಿದ್ದಾಳೆ.

ಇದನ್ನೂ ಓದಿ:ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

ಈ ಆತ್ಮಹತ್ಯೆ ಮಾಡಿಕೊಂಡ ಕುಮಾರ್​, ಇದೆ ಚಾಮರಾಜನಗರದ ಪಿಜಿ ಪಾಳ್ಯದವ. ತಾಯಿ ಚಿಕ್ಕ ವಯಸ್ಸಿನಲ್ಲೇ ಅನಾರೋಗ್ಯದ ನಿಮಿತ್ತ ತೀರಿ ಹೋದ ಪರಿಣಾಮ ಚಿಕ್ಕವಯಸ್ಸಿನಿಂದಲೇ ಕುಮಾರನ ಮೇಲೆ ಜವಾಬ್ದಾರಿ ಬಿದ್ದಿತ್ತು. ಇದ್ದ ಎರೆಡುವರೆ ಎಕರೆಯಲ್ಲಿ ಮೂರು ಮಂದಿ ಅಣ್ಣ ತಮ್ಮಂದಿರು ಬೆಳೆ ಬೆಳೆದು ಕೂಲಿ ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ ಹತ್ತು ವರ್ಷಗಳ ಹಿಂದೆ ಗುಂಡೇಗಾಲ ಗ್ರಾಮದ ಯಶೋಧ ದಂಪತಿಯ ಮೊದಲ ಮಗಳಾದ ರೂಪ ಜೊತೆ ವಿವಾಹವಾಗಿತ್ತು. ಇವರಿಬ್ಬರ ಪ್ರೀತಿಯ ಸಂಕೇತವಾಗಿ ಇಬ್ಬರು ಹೆಣ್ಣು ಮಕ್ಕಳು ಸಹ ಜನಿಸಿತ್ತು. ಎಲ್ಲಾವು ಚೆನ್ನಾಗೆಯಿತ್ತು. ಆದ್ರೆ, ಇದೀಗ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅದೇನೆ ಹೇಳಿ ಪತ್ನಿ ರೀಲ್ಸ್ ಮಾಡಿದಕ್ಕೆ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತನ ಕುಟುಂಬಸ್ಥರು ವಾದ ಮಾಡ್ತಾಯಿದ್ರೆ ಇತ್ತ ಪತ್ನಿ ರೂಪ ತನ್ನ ಪತಿಯ ಸಾವಿಗೆ ಸಾಲದ ಶೂಲವೇ ಕಾರಣ ಅಂತ ಕಾರಣ ನೀಡುತ್ತಿದ್ದಾಳೆ. ಸದ್ಯ ಯುಡಿಆರ್ ಕೇಸ್ ರಿಜಿಸ್ಟರ್ ಮಾಡಿಕೊಂಡ ಹನೂರು ಪೊಲೀಸರು ಹೆಚ್ಚಿನ ವಿಚಾರಣೆಯನ್ನ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆಯಿಂದಷ್ಟೇ ಸತ್ಯಾಸತ್ಯತೆ ಆಚೆ ಬರಬೇಕಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸದ್ಯ ಯುಡಿಆರ್ ಕೇಸ್ ರಿಜಿಸ್ಟರ್ ಮಾಡಿಕೊಂಡ ಹನೂರು ಪೊಲೀಸರು ಹೆಚ್ಚಿನ ವಿಚಾರಣೆಯನ್ನ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆಯಿಂದಷ್ಟೇ ಸತ್ಯಾಸತ್ಯತೆ ಆಚೆ ಬರಬೇಕಿದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ