ʻಕರಿಮಣಿ ಮಾಲೀಕ ನೀನಲ್ಲʼ ಎಂದಿದಕ್ಕೆ ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​; ಸ್ಪಷ್ಟತೆ ನೀಡಿದ ಪತ್ನಿ

ʻಕರಿಮಣಿ ಮಾಲೀಕ ನೀನಲ್ಲʼ ಎಂದು ಪತ್ನಿ ಮಾಡಿದ ರೀಲ್ಸ್​ಗೆ ಮನನೊಂದು ಪತಿ ಆತ್ಮಹತ್ಯೆಗೆ ಶರಣಾದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದ್ದು, ಪತ್ನಿ ರೀಲ್ಸ್ ಮಾಡಿದಕ್ಕೆ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತನ ಕುಟುಂಬಸ್ಥರು ವಾದ ಮಾಡ್ತಾಯಿದ್ರೆ, ಇತ್ತ ಪತ್ನಿ ರೂಪ ತನ್ನ ಪತಿಯ ಸಾವಿಗೆ ಸಾಲದ ಶೂಲವೇ ಕಾರಣ ಎಂದು ಹೇಳುತ್ತಿದ್ದಾಳೆ.

ʻಕರಿಮಣಿ ಮಾಲೀಕ ನೀನಲ್ಲʼ ಎಂದಿದಕ್ಕೆ ಪತಿ ಆತ್ಮಹತ್ಯೆ ಪ್ರಕರಣಕ್ಕೆ ಟ್ವಿಸ್ಟ್​; ಸ್ಪಷ್ಟತೆ ನೀಡಿದ ಪತ್ನಿ
ಮೃತನ ಪತ್ನಿ ರೂಪಾ
Edited By: ಕಿರಣ್ ಹನುಮಂತ್​ ಮಾದಾರ್

Updated on: Feb 16, 2024 | 3:30 PM

ಚಾಮರಾಜನಗರ, ಫೆ.16: ಪತ್ನಿಯ ಕರಿಮಣಿ ಮಾಲೀಕ ರೀಲ್ಸ್​ಗೆ ಮನನೊಂದು ಪತಿ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣಕ್ಕೆ ಟ್ವಿಸ್ಟ್​ ಸಿಕ್ಕಿದೆ.ಈ ಕುರಿತು ಪ್ರತಿಕ್ರಿಯೆ ನೀಡಿದ ಮೃತ ಕುಮಾರ್​ ಪತ್ನಿ ರೂಪ, ‘ನಾನು ರೀಲ್ಸ್ ಮಾಡಿದಕ್ಕೆ ನನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿಲ್ಲ. ಈ ಹಿಂದಿನಿಂದಲು ನಾನು ರೀಲ್ಸ್ ಮಾಡಿದ್ದೇನೆ, ಅದು ನನ್ನ ಪತಿ ಕುಮಾರ್​ಗೂ ತಿಳಿದಿದೆ. ನನ್ನ ಮೇಲೆ ಅವರ ಕುಟುಂಬಸ್ಥರು ಸುಕಾ ಸುಮ್ಮನೆ ಆರೋಪಿಸುತ್ತಿದ್ದಾರೆ. ನಿಜವಾಗಿಯೂ ನನ್ನ ಪತಿ ಸಾವಿಗೆ ಮಾಡಿಕೊಂಡಿದ್ದ ಸಾಲವೇ ಕಾರಣ ಎಂದಿದ್ದಾರೆ.

ಈ ಸಾವಿಗೆ ನಾನು ಮಾಡಿದ್ದ ರೀಲ್ಸ್ ಕಾರಣವಲ್ಲವೆಂದ ಪತ್ನಿ ರೂಪ

ಇನ್ನು ಆತ್ಮಹತ್ಯೆ ಮಾಡಿಕೊಂಡ ಕುಮಾರ್ ‘ಪ್ರತಿನಿತ್ಯ ಕುಡಿಯುತ್ತಿದ್ದ, ಜೊತೆಗೆ ಇಸ್ಪಿಟ್ ಆಡುವ ಚಟ ಕೂಡ ಇತ್ತು. ಈ ಹಿನ್ನಲೆ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಾವಿಗೆ ನಾನು ಮಾಡಿದ್ದ ರೀಲ್ಸ್ ಕಾರಣವಲ್ಲ ಎಂದಿದ್ದಾರೆ. ಇದರ ಜೊತೆಗೆ ಆಸ್ತಿಯ ವಿಚಾರಕ್ಕೆ ಆಗಾಗ ಜಗಳವಾಗುತ್ತಿತ್ತಂತೆ. ಇದು ಒಮ್ಮೆ ಪೊಲೀಸ್​ ಠಾಣೆಯ ಮೆಟ್ಟಿಲೇರಿತ್ತು ಮತ್ತು ಸಾಲ, ಈ ಎಲ್ಲ ಕಾರಣಕ್ಕೆ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆದರೆ, ಇದೀಗ ನಾನು ಮಾಡಿದ ರೀಲ್ಸ್​ ಕಾರಣವೆಂದು ಅವರ ಕುಟುಂಬದವರು ಆರೋಪಿಸುತ್ತಿದ್ದಾರೆ ಎಂದು ಅಳಲನ್ನು ಮೃತನ ಪತ್ನಿ ತೋಡಿಕೊಂಡಿದ್ದಾಳೆ.

ಇದನ್ನೂ ಓದಿ:ʻಕರಿಮಣಿ ಮಾಲೀಕ ನೀನಲ್ಲʼ ಎಂದ ಪತ್ನಿ, ಮನನೊಂದು ಆತ್ಮಹತ್ಯೆಗೆ ಶರಣಾದ ಪತಿ

ಈ ಆತ್ಮಹತ್ಯೆ ಮಾಡಿಕೊಂಡ ಕುಮಾರ್​, ಇದೆ ಚಾಮರಾಜನಗರದ ಪಿಜಿ ಪಾಳ್ಯದವ. ತಾಯಿ ಚಿಕ್ಕ ವಯಸ್ಸಿನಲ್ಲೇ ಅನಾರೋಗ್ಯದ ನಿಮಿತ್ತ ತೀರಿ ಹೋದ ಪರಿಣಾಮ ಚಿಕ್ಕವಯಸ್ಸಿನಿಂದಲೇ ಕುಮಾರನ ಮೇಲೆ ಜವಾಬ್ದಾರಿ ಬಿದ್ದಿತ್ತು. ಇದ್ದ ಎರೆಡುವರೆ ಎಕರೆಯಲ್ಲಿ ಮೂರು ಮಂದಿ ಅಣ್ಣ ತಮ್ಮಂದಿರು ಬೆಳೆ ಬೆಳೆದು ಕೂಲಿ ನಾಲಿ ಮಾಡಿಕೊಂಡು ಜೀವನ ನಡೆಸುತ್ತಿದ್ದರು. ಕಳೆದ ಹತ್ತು ವರ್ಷಗಳ ಹಿಂದೆ ಗುಂಡೇಗಾಲ ಗ್ರಾಮದ ಯಶೋಧ ದಂಪತಿಯ ಮೊದಲ ಮಗಳಾದ ರೂಪ ಜೊತೆ ವಿವಾಹವಾಗಿತ್ತು. ಇವರಿಬ್ಬರ ಪ್ರೀತಿಯ ಸಂಕೇತವಾಗಿ ಇಬ್ಬರು ಹೆಣ್ಣು ಮಕ್ಕಳು ಸಹ ಜನಿಸಿತ್ತು. ಎಲ್ಲಾವು ಚೆನ್ನಾಗೆಯಿತ್ತು. ಆದ್ರೆ, ಇದೀಗ ಆತ ಆತ್ಮಹತ್ಯೆಗೆ ಶರಣಾಗಿದ್ದಾನೆ.

ಅದೇನೆ ಹೇಳಿ ಪತ್ನಿ ರೀಲ್ಸ್ ಮಾಡಿದಕ್ಕೆ ಕುಮಾರ್ ಆತ್ಮಹತ್ಯೆ ಮಾಡಿಕೊಂಡಿದ್ದಾನೆಂದು ಮೃತನ ಕುಟುಂಬಸ್ಥರು ವಾದ ಮಾಡ್ತಾಯಿದ್ರೆ ಇತ್ತ ಪತ್ನಿ ರೂಪ ತನ್ನ ಪತಿಯ ಸಾವಿಗೆ ಸಾಲದ ಶೂಲವೇ ಕಾರಣ ಅಂತ ಕಾರಣ ನೀಡುತ್ತಿದ್ದಾಳೆ. ಸದ್ಯ ಯುಡಿಆರ್ ಕೇಸ್ ರಿಜಿಸ್ಟರ್ ಮಾಡಿಕೊಂಡ ಹನೂರು ಪೊಲೀಸರು ಹೆಚ್ಚಿನ ವಿಚಾರಣೆಯನ್ನ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆಯಿಂದಷ್ಟೇ ಸತ್ಯಾಸತ್ಯತೆ ಆಚೆ ಬರಬೇಕಿದೆ.

ರಾಜ್ಯದ ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಸದ್ಯ ಯುಡಿಆರ್ ಕೇಸ್ ರಿಜಿಸ್ಟರ್ ಮಾಡಿಕೊಂಡ ಹನೂರು ಪೊಲೀಸರು ಹೆಚ್ಚಿನ ವಿಚಾರಣೆಯನ್ನ ನಡೆಸುತ್ತಿದ್ದಾರೆ. ಪೊಲೀಸರ ವಿಚಾರಣೆಯಿಂದಷ್ಟೇ ಸತ್ಯಾಸತ್ಯತೆ ಆಚೆ ಬರಬೇಕಿದೆ.

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us