AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು

ಕೆಎಸ್ಆರ್​ಟಿಸಿ ಬಸ್​ನಿಂದ ಮಹಿಳೆಯೊಬ್ಬರು ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮತ್ತೊಂದೆಡೆ ಫಾಲ್ಸ್​ನಲ್ಲಿ ಈಜಲು ಹೋಗಿದ್ದ ಮಂಡ್ಯ ಜಿಲ್ಲೆಯ ಯುವಕನ ಶವ ಪತ್ತೆಯಾಗಿದೆ. ಈ ಎರಡೂ ಪ್ರತ್ಯೇಕ ಘಟನೆಗಳ ವಿವರ ಇಲ್ಲಿದೆ.

ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು
ವಿನೋದಾ, ಮೃತ ಮಹಿಳೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Aug 29, 2023 | 12:50 PM

Share

ಚಾಮರಾಜನಗರ, (ಆಗಸ್ಟ್ 29): ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ (KSRTC Bus) ಮಹಿಳೆ ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯಲ್ಲಿ ನಡೆದಿದೆ. ವಿನೋದಾ ಎನ್ನುವ ಮಹಿಳೆ ಹನೂರು ತಾಲೂಕಿನ ಮಲೆಮಹಾದೇಶ್ವರ ಬೆಟ್ಟದಿಂದ ಹನೂರು ಕಡೆ ತೆರಳುತ್ತಿದ್ದ ಸಾರಿಗೆ ಬಸ್​ನಿಂದ ಬಿದ್ದು ಮೃತಪಟ್ಟಿದ್ದಾಳೆ. ನಿನ್ನೆ(ಆಗಸ್ಟ್ 28) ಮಾಧ್ಯಾಹ್ನ ಮಾದಪ್ಪನ ದರ್ಶನ ಪಡೆದು ಮನೆ ಹಿಂದಿರುಗುವಾಗ, ಬಸ್​ನ ಹಿಂಬಾಗದ ಬಾಗಿಲಲ್ಲಿ ನಿಂತಿದ್ದ ವಿನೋದಾ ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿನೋದಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕರಡಿಗೆರೆ ಗ್ರಾಮದ ವಿನೋದಾ ನಿನ್ನೆ(ಆಗಸ್ಟ್ 28) ಮಾಧ್ಯಾಹ್ನ ಮಾದಪ್ಪನ ದರ್ಶನ ಪಡೆದು ವಾಪಸ್​ ಮನೆಗೆ ಹಿಂದುರುವಾಗ ಈ ದುರ್ಘಟನೆ ಸಂಭವಿಸಿದೆ. ಬಸ್​ ಫುಲ್ ಗದ್ದಲ ಇದ್ದಿದ್ದರಿಂದ ಹಿಂಬಾಗದ ಬಾಗಿಲಲ್ಲಿ ನಿಂತಿದ್ದಳು. ಆ ವೇಳೆ ಕಾಲು ಜಾರಿ ಬಸ್​ನಿಂದ ಕೆಳಗೆ ಬಿದ್ದಿದ್ದಾರೆ. ಸದ್ಯ ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೊತ್ತರ ಪರೀಕ್ಷೆ ನಡೆದಿದ್ದು, ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಈ ಕುರಿತು ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನ: ಶುಂಠಿಗೆ ಕಳೆನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು, ರಕ್ತ ಪರೀಕ್ಷೆಯಲ್ಲಿ ವಿಷ ಇರೋದು ದೃಢ

ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವು

ಮಂಡ್ಯ: ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕನೋರ್ವ ಜೀವ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನ ಗಾಣಾಳು ಪಾಲ್ಸ್ ನಲ್ಲಿ ನಡೆದಿದೆ. ಮನುಕುಮಾರ್(27)ಮೃತ ಯುವಕ. ಖಾಸಗಿ ಬಸ್ ನ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮನುಕುಮಾರ್, ಸ್ನೇಹಿತರೊಂದಿಗೆ ಪಾಲ್ಸ್ ನೋಡಲು ಹೋಗಿದ್ದ. ಈ ವೇಳೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ಕಳೆದೆರಡೂ ದಿನಗಳಿಂದ ಮೃತ ಯುವಕನ ಶವಕ್ಕಾಗಿ ಹುಡುಕಾಟ ನಡೆಸಿದ್ದು, ಆದ್ರೆ, ಇಂದು ಯುವಕನ ಶವ ನೀರಿನಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:47 pm, Tue, 29 August 23

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!