ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು

| Updated By: ರಮೇಶ್ ಬಿ. ಜವಳಗೇರಾ

Updated on: Aug 29, 2023 | 12:50 PM

ಕೆಎಸ್ಆರ್​ಟಿಸಿ ಬಸ್​ನಿಂದ ಮಹಿಳೆಯೊಬ್ಬರು ಬಿದ್ದು ಮೃತಪಟ್ಟಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ. ಮತ್ತೊಂದೆಡೆ ಫಾಲ್ಸ್​ನಲ್ಲಿ ಈಜಲು ಹೋಗಿದ್ದ ಮಂಡ್ಯ ಜಿಲ್ಲೆಯ ಯುವಕನ ಶವ ಪತ್ತೆಯಾಗಿದೆ. ಈ ಎರಡೂ ಪ್ರತ್ಯೇಕ ಘಟನೆಗಳ ವಿವರ ಇಲ್ಲಿದೆ.

ಚಾಮರಾಜನಗರ: ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ ಬಿದ್ದು ಮಹಿಳೆ ಸಾವು
ವಿನೋದಾ, ಮೃತ ಮಹಿಳೆ
Follow us on

ಚಾಮರಾಜನಗರ, (ಆಗಸ್ಟ್ 29): ಚಲಿಸುತ್ತಿದ್ದ ಕೆಎಸ್​ಆರ್​ಟಿಸಿ ಬಸ್​ನಿಂದ (KSRTC Bus) ಮಹಿಳೆ ಬಿದ್ದು ಸಾವನ್ನಪ್ಪಿರುವ ಘಟನೆ ಚಾಮರಾಜನಗರ (Chamarajanagar) ಜಿಲ್ಲೆಯಲ್ಲಿ ನಡೆದಿದೆ. ವಿನೋದಾ ಎನ್ನುವ ಮಹಿಳೆ ಹನೂರು ತಾಲೂಕಿನ ಮಲೆಮಹಾದೇಶ್ವರ ಬೆಟ್ಟದಿಂದ ಹನೂರು ಕಡೆ ತೆರಳುತ್ತಿದ್ದ ಸಾರಿಗೆ ಬಸ್​ನಿಂದ ಬಿದ್ದು ಮೃತಪಟ್ಟಿದ್ದಾಳೆ. ನಿನ್ನೆ(ಆಗಸ್ಟ್ 28) ಮಾಧ್ಯಾಹ್ನ ಮಾದಪ್ಪನ ದರ್ಶನ ಪಡೆದು ಮನೆ ಹಿಂದಿರುಗುವಾಗ, ಬಸ್​ನ ಹಿಂಬಾಗದ ಬಾಗಿಲಲ್ಲಿ ನಿಂತಿದ್ದ ವಿನೋದಾ ಕಾಲು ಜಾರಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ವಿನೋದಾ ಮಂಡ್ಯ ಜಿಲ್ಲೆಯ ಮದ್ದೂರು ತಾಲೂಕಿನ ಕರಡಿಗೆರೆ ಗ್ರಾಮದ ವಿನೋದಾ ನಿನ್ನೆ(ಆಗಸ್ಟ್ 28) ಮಾಧ್ಯಾಹ್ನ ಮಾದಪ್ಪನ ದರ್ಶನ ಪಡೆದು ವಾಪಸ್​ ಮನೆಗೆ ಹಿಂದುರುವಾಗ ಈ ದುರ್ಘಟನೆ ಸಂಭವಿಸಿದೆ. ಬಸ್​ ಫುಲ್ ಗದ್ದಲ ಇದ್ದಿದ್ದರಿಂದ ಹಿಂಬಾಗದ ಬಾಗಿಲಲ್ಲಿ ನಿಂತಿದ್ದಳು. ಆ ವೇಳೆ ಕಾಲು ಜಾರಿ ಬಸ್​ನಿಂದ ಕೆಳಗೆ ಬಿದ್ದಿದ್ದಾರೆ. ಸದ್ಯ ಹನೂರು ಸರ್ಕಾರಿ ಆಸ್ಪತ್ರೆಯಲ್ಲಿ ಮರಣೊತ್ತರ ಪರೀಕ್ಷೆ ನಡೆದಿದ್ದು, ಕುಟುಂಬಕ್ಕೆ ಹಸ್ತಾಂತರಿಸಲಾಗಿದ್ದು, ಈ ಕುರಿತು ಮಲೆ ಮಹದೇಶ್ವರ ಬೆಟ್ಟದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ: ಹಾಸನ: ಶುಂಠಿಗೆ ಕಳೆನಾಶಕ ಸಿಂಪಡಿಸಿ ಅಸ್ವಸ್ಥಗೊಂಡಿದ್ದ ಯುವಕ ಸಾವು, ರಕ್ತ ಪರೀಕ್ಷೆಯಲ್ಲಿ ವಿಷ ಇರೋದು ದೃಢ

ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕ ಸಾವು

ಮಂಡ್ಯ: ಈಜಲು ಹೋಗಿ ನೀರಿನಲ್ಲಿ ಮುಳುಗಿ ಯುವಕನೋರ್ವ ಜೀವ ಕಳೆದುಕೊಂಡಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ಹಲಗೂರಿನ ಗಾಣಾಳು ಪಾಲ್ಸ್ ನಲ್ಲಿ ನಡೆದಿದೆ. ಮನುಕುಮಾರ್(27)ಮೃತ ಯುವಕ. ಖಾಸಗಿ ಬಸ್ ನ ಡ್ರೈವರ್ ಆಗಿ ಕೆಲಸ ಮಾಡುತ್ತಿದ್ದ ಮನುಕುಮಾರ್, ಸ್ನೇಹಿತರೊಂದಿಗೆ ಪಾಲ್ಸ್ ನೋಡಲು ಹೋಗಿದ್ದ. ಈ ವೇಳೆ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ. ಸ್ಥಳಕ್ಕೆ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿ ಭೇಟಿ ಕಳೆದೆರಡೂ ದಿನಗಳಿಂದ ಮೃತ ಯುವಕನ ಶವಕ್ಕಾಗಿ ಹುಡುಕಾಟ ನಡೆಸಿದ್ದು, ಆದ್ರೆ, ಇಂದು ಯುವಕನ ಶವ ನೀರಿನಲ್ಲಿ ಪತ್ತೆಯಾಗಿದೆ. ಈ ಬಗ್ಗೆ ಹಲಗೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:47 pm, Tue, 29 August 23