ಸಾವಿನಲ್ಲೂ ಸಾರ್ಥಕತೆ ಮೆರೆದ ಚಾಮರಾಜನಗರದ ಯುವಕ; ಮೃತನ ಆಸೆಯಂತೆ ಕುಟುಂಬಸ್ಥರಿಂದ ನೇತ್ರದಾನ

ಹನೂರು ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಅಂಬರೀಶ್(27) ಎಂಬಾತ ಅಪಘಾತದಲ್ಲಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಯುವಕ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ.

ಸಾವಿನಲ್ಲೂ ಸಾರ್ಥಕತೆ ಮೆರೆದ ಚಾಮರಾಜನಗರದ ಯುವಕ; ಮೃತನ ಆಸೆಯಂತೆ ಕುಟುಂಬಸ್ಥರಿಂದ ನೇತ್ರದಾನ
ಸಾರ್ಥಕತೆ ಮೆರೆದ ಚಾಮರಾಜನಗರದ ಯುವಕ
Edited By: ಕಿರಣ್ ಹನುಮಂತ್​ ಮಾದಾರ್

Updated on: Jul 12, 2023 | 12:18 PM

ಚಾಮರಾಜನಗರ: ಹನೂರು(Hanur) ತಾಲೂಕಿನ ಕುರಟ್ಟಿ ಹೊಸೂರು ಗ್ರಾಮದ ಅಂಬರೀಶ್(27) ಎಂಬಾತ ಅಪಘಾತದಲ್ಲಿ ಗಂಭೀರ ಗಾಯಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ದಾಖಲಾಗಿದ್ದ. ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದಾನೆ. ಹೌದು ಮೃತ ಯುವಕ ಅಂಬರೀಶ್ ತನ್ನ ಸಾವಿನ ನಂತರ ನೇತ್ರದಾನ ಮಾಡಬೇಕೆಂಬ ಆಸೆಯನ್ನ ಹೊಂದಿದ್ದನಂತೆ. ಇದೀಗ ಯುವಕನ ಆಸೆಯಂತೆ ಆತನ ಕುಟುಂಬಸ್ಥರು ನೇತ್ರದಾನ ಮಾಡಿ ಮಾನವೀಯತೆ ಮೆರೆದಿದ್ದಾರೆ.

ಇನ್ನು ಕಳೆದ ತಿಂಗಳ ಜೂ.5 ರಂದು ಬೆಂಗಳೂರಿನ ರಾಜಾಜಿನಗರದ ನಿವಾಸಿ ಫರ್ದೀನ್ ಖಾನ್ (23)ಎಂಬುವವರ ಮೆದುಳು ನಿಷ್ಕ್ರಯಗೊಂಡಿತ್ತು. ಬಳಿಕ ಅವರ ಕುಟುಂಬದವರು ಅಂಗಾಂಗಳನ್ನು ದಾನ ಮಾಡುವ ಮೂಲಕ ಫರ್ದೀನ್ ಸಾವಿನಲ್ಲೂ ಸಾರ್ಥಕತೆ ಮೆರೆದಿದ್ದರು. ಫರ್ದೀನ್ ಇತ್ತೀಚೆಗೆ ಕುಟುಂಬದೊಂದಿಗೆ ಬೆಂಗಳೂರಿಗೆ ಪ್ರಯಾಣಿಸುತ್ತಿದ್ದಾಗ ರಸ್ತೆ ಅಪಘಾತವಾಗಿತ್ತು. ಬಲವಾಗಿ ಪಟ್ಟು ಬಿದ್ದಿದ್ದರಿಂದ ಗಾಯಗಳಾಗಿದ್ದು, ಸ್ಥಿತಿ ಚಿಂತಾಜನಕವಾಗಿತ್ತು. ಬಳಿಕ ಅವರನ್ನ ಬೆಂಗಳೂರಿನ ಸ್ಪರ್ಶ್ ಆಸ್ಪತ್ರೆಗೆ ಸೇರಿಸಲಾಯಿತು. ಆದರೆ, ಜೂ.11ರಂದು ಮೆದುಳು ನಿಷ್ಕ್ರೀಯಗೊಂಡಿದೆ ಎಂದು ವೈದ್ಯರು ಘೋಷಿಸಿದರು. ಇದಾದ ಬಳಿಕ ಅಂಗಾಂಗಳನ್ನು ದಾನ ಮಾಡಿದ್ದರು.

ಇದನ್ನೂ ಓದಿ:ಸದನದಲ್ಲಿ ಬೆಂಗಳೂರು-ಮೈಸೂರು ಹೆದ್ದಾರಿ ಅಪಘಾತ ಸಂಬಂಧ ಚರ್ಚೆ; ಪರಿಸ್ಥಿತಿ ವಿವರಿಸಿದ ಗೃಹ ಸಚಿವ ಪರಮೇಶ್ವರ್

ಆ ಮೂಲಕ 6 ಜನರಿಗೆ ಮರು ಜನ್ಮ ನೀಡಿದ್ದರು. ಸ್ಪರ್ಶ ಆಸ್ಪತ್ರೆಯಲ್ಲಿ ಫರ್ದೀನ್ ಅವರ ಬಲ ಮೂತ್ರಪಿಂಡ ಮತ್ತು ಯಕೃತ್ತನ್ನು ಯಶಸ್ವಿಯಾಗಿ ರೋಗಿಗಳಿಗೆ ಕಸಿ ಮಾಡಲಾಗಿತ್ತು. ಬಳಿಕ ಅವರ ಹೃದಯವನ್ನು ನಾರಾಯಣ ಹೃದಯಾಲಯಕ್ಕೆ ಕಳುಹಿಸಲಾಗಿತ್ತು, ಅವರ ಎಡ ಮೂತ್ರಪಿಂಡ ಮತ್ತು ಮೇದೋಜ್ಜೀರಕ ಗ್ರಂಥಿಯನ್ನು ಬನ್ನೇರುಘಟ್ಟ ರಸ್ತೆಯ ಅಪೋಲೋ ಆಸ್ಪತ್ರೆಗೆ ಕಳುಹಿಸಿ ಕೊಡಲಾಗಿತ್ತು. ಇನ್ನು ಘಟನೆ ಕುರಿತು ಸ್ಪರ್ಶ ಆಸ್ಪತ್ರೆಯ ಗ್ರೂಪ್ ಸಿಒಒ ಜೋಸೆಫ್ ಪಸಂಗ ಅವರು ಈ ನಿರ್ಧಾರಕ್ಕೆ ಶ್ಲಾಘನೆ ವ್ಯಕ್ತಪಡಿಸಿದ್ದರು. ಅಂಗಾಂಗ ದಾನ ಮಾಡುವ ಮೂಲಕ ಮತ್ತೊಬ್ಬರಿಗೆ ಮರು ಜನ್ಮ ನೀಡಿದಂತಾಗುತ್ತದೆ ಎಂದು ಹೇಳಿದ್ದರು.

ಇನ್ನಷ್ಟು ಅಪಘಾತ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us