AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೊಲೀಸ್​ರಿಂದ ತಪ್ಪಿಸಿಕೊಳ್ಳಲು ಹೋಗಿ ಜೀಪ್​​ನಿಂದ ಜಿಗಿದು ಬಿದ್ದು ಆರೋಪಿ ಸಾವು

ಆರೋಪಿ ಪೋಲಿಸರಿಂದ ತಪ್ಪಿಸಿಕೊಳ್ಳಲು ಹೋಗಿ ಜೀಪ್​​ನಿಂದ ಜಿಗಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಪೊಲೀಸ್​ರಿಂದ ತಪ್ಪಿಸಿಕೊಳ್ಳಲು ಹೋಗಿ ಜೀಪ್​​ನಿಂದ ಜಿಗಿದು ಬಿದ್ದು ಆರೋಪಿ ಸಾವು
ಸಾಂಧರ್ಬಿಕ ಚಿತ್ರ
TV9 Web
| Edited By: |

Updated on:Nov 29, 2022 | 6:34 PM

Share

ಚಾಮರಾಜನಗರ: ಆರೋಪಿ ಪೋಲಿಸರಿಂದ (Police) ತಪ್ಪಿಸಿಕೊಳ್ಳಲು ಹೋಗಿ ಜೀಪ್​​ನಿಂದ ಜಿಗಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮಾಂಬಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಕುಂತೂರು ಮೋಳೆ ಗ್ರಾಮದ ನಿಂಗರಾಜು (24) ಮೃತ ಆರೋಪಿ. ಆರೋಪಿ ನಿಂಗರಾಜುವನ್ನು ಅಪ್ರಾಪ್ತ ಬಾಲಕಿ ಅಪಹರಣ ಪ್ರಕರಣದಲ್ಲಿ ಪೋಲಿಸರು ಬಂಧಿಸಿದ್ದರು. ಬಳಿಕ ಆರೋಪಿ ನಿಂಗರಾಜುವನ್ನು ವಿಚಾರಣೆಗೆಂದು ಪೊಲೀಸ್ ಠಾಣೆಗೆ ಕರೆತರುತ್ತಿದ್ದಾಗ ಜೀಪ್​​ನಿಂದ ನೆಗೆದು ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ.

ಇನ್ನು ಆರೋಪಿ ಮರಣಹೊಂದುತ್ತಿದ್ದಂತೆ, ಜೀಪ್​ನಲ್ಲಿದ್ದ ಪೊಲೀಸ್ ಸಿಬ್ಬಂದಿಗಳನ್ನು ಅಮಾನತು ಮಾಡುವುದಾಗಿ ಚಾಮರಾಜನಗರ ಎಸ್ಪಿ ಶಿವಕುಮಾರ್ ಹೇಳಿದ್ದಾರೆ. ಪ್ರಕರಣಕ್ಕೆ ಪೊಲೀಸರ ನಿರ್ಲಕ್ಷ್ಯ ಕಾರಣವೆಂದು ಯಳಂದೂರು ಪೊಲೀಸ್ ಠಾಣೆಗೆ ಕುಂತೂರು ಮೋಳೆ ಗ್ರಾಮಸ್ಥರು ಮುತ್ತಿಗೆ ಹಾಕಿದರು. ಈ ಸಾವಿನ ಬಗ್ಗೆ ಸಂಶಯವಿದ್ದು ಸೂಕ್ತ ತನಿಖೆಯಾಗಬೇಕೆಂದು ಒತ್ತಾಯಿಸಿದರು. ಹೀಗಾಗಿ ಪ್ರಕರಣ ತನಿಖೆ ನಡೆಸಲಾಗುವದು ಎಂದರು.

BMTC ಬಸ್, ಬೈಕ್ ನಡುವೆ ಅಪಘಾತ; ಸವಾರರಿಬ್ಬರು ಸಾವು

ಬಿಎಂಟಿಸಿ ಬಸ್ ಮತ್ತು ಬೈಕ್ ನಡುವೆ ಅಪಘಾತ ಸಂಭವಿಸಿ ಬೈಕ್​ ಸವಾರರಿಬ್ಬರು ಸಾವನ್ನಪ್ಪಿರುವ ಘಟನೆ ನಗರದ ಮಾಗಡಿ ರಸ್ತೆ ಜಂಕ್ಷನ್ ಬಳಿ ನಡೆದಿದೆ. ಮಂಜುನಾಥ್(25), ಶಿವರಾಜ್(29) ಮೃತ ದುರ್ದೈವಿಗಳು. ಮೃತರು ಗೊಲ್ಲರಹಟ್ಟಿಯ ಇಂದಿರಾ ಕಾಲೋನಿ ನಿವಾಸಿಗಳು ಎಂದು ತಿಳಿಬಂದಿದೆ. ತಾವರೆಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 4:52 pm, Tue, 29 November 22

ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?
ಸಚಿವ ಸ್ಥಾನಕ್ಕೆ ರಾಜೀನಾಮೆ ಸುದ್ದಿ: ಈ ಬಗ್ಗೆ ಕೆಜೆ ಜಾರ್ಜ್ ಹೇಳಿದ್ದೇನು?