AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ

ಚಾಮರಾಜನಗರ ಜಿಲ್ಲೆಯಲ್ಲಿ ವನ್ಯ ಪ್ರಾಣಿಗಳ ಸಾವಿನ ಸರಣಿ ಮುಂದುವರಿದಿದೆ. ಹುಲಿಗಳ ಹತ್ಯಾಕಾಂಡ, ಮಂಗಗಳ ಸಾವಿನ ಬೆನ್ನಲ್ಲೇ ಇದೀಗ ಚಿರತೆಯೊಂದರ ಶವ ಅರ್ಧ ಕೊಳೆತ ಸ್ಥಿತಿಯಲ್ಲಿ ಕೊತ್ತಲವಾಡಿ ಬಳಿ ಪತ್ತೆಯಾಗಿದೆ. ಜತೆಗೆ ನಾಯಿ, ಹಾಗೂ ಕರುವಿನ ಶವಗಳೂ ಅರ್ಧ ಕೊಳೆತ ಸ್ಥಿತಿಯಲ್ಲಿ ಕಂಡುಬಂದಿದ್ದು, ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಹುಲಿ, ಮಂಗ ಆಯ್ತು ಈಗ ಚಿರತೆ ಸರದಿ: ಚಾಮರಾಜನಗರ ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ
ಕೊತ್ತಲವಾಡಿ ಬಳಿ ಚಿರತೆ ಶವ ಪತ್ತೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 11, 2025 | 2:49 PM

Share

ಚಾಮರಾಜನಗರ, ಜುಲೈ 11: ಮಲೆ ಮಹದೇಶ್ವರ ವನ್ಯಧಾಮ ವ್ಯಾಪ್ತಿಯ ಮೀಣ್ಯಂ ಅರಣ್ಯ ಪ್ರದೇಶದಲ್ಲಿ ಐದು ಹುಲಿಗಳು ವಿಶಪ್ರಾಷನದಿಂದ ಮೃತಪಟ್ಟ ಕೆಲವೇ ದಿನಗಳ ನಂತರ ಗುಂಡ್ಲುಪೇಟೆ ತಾಲೂಕಿನ ಕಂದೇಗಾಲ-ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಶವ ಪತ್ತೆಯಾಗಿತ್ತು. ಅವುಗಳನ್ನೂ ವಿಷವಿಕ್ಕಿ ಕೊಂದಿರುವುದು ತಿಳಿದುಬಂದಿತ್ತು. ಇದೀಗ ಚಿರತೆಯ ಸರದಿ. ಚಾಮರಾಜನಗರ  (Chamarajanagar) ತಾಲೂಕಿನ ಕೊತ್ತಲವಾಡಿ ಬಳಿ ಚಿರತೆ ಶವ ಶುಕ್ರವಾರ ಪತ್ತೆಯಾಗಿದೆ. ಗಣಿ ತ್ಯಾಜ್ಯದ‌ ಕಲ್ಲು ಸಂಗ್ರಹಿಸಿರುವ ಜಮೀನಿನಲ್ಲಿ ಕೊಳೆತ ಸ್ಥಿತಿಯಲ್ಲಿ ಚಿರತೆಯ ಕಳೇಬರ ಪತ್ತೆಯಾಗಿದೆ. 5 ವರ್ಷದ ಗಂಡು ಚಿರತೆ ಕಳೇಬರದ ಬಳಿ ನಾಯಿ ಮತ್ತು ಕರುವಿನ ಶವವೂ ಪತ್ತೆಯಾಗಿರುವುದು ಅನುಮಾನಗಳಿಗೆ ಎಡೆಮಾಡಿಕೊಟ್ಟಿದೆ.

ಸ್ಥಳಕ್ಕೆ ಬಿಆರ್​​ಟಿ ಅರಣ್ಯಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಮೆಟಲ್ ಡಿಟೆಕ್ಟರ್ ಜೊತೆಗೆ ಶ್ವಾನದಳವೂ ಆಗಮಿಸಿ ತಪಾಸಣೆ ನಡೆಸಿದೆ. ಸದ್ಯ ಬಿಆರ್​​ಟಿ ಡಿಸಿಎಫ್ ಶ್ರೀಪತಿ ಹಾಗೂ ಸಿಸಿಎಫ್ ಹೀರಾಲಾಲ್ ಸ್ಥಳದಲ್ಲೇ ಬೀಡುಬಿಟ್ಟಿದ್ದಾರೆ.

ಚಿರತೆ ಕಳೇಬರದ ಸುತ್ತಮುತ್ತ ಮೆಟಲ್ ಡಿಟೆಕ್ಟರ್​​​ನಿಂದಲೂ ಶೋಧ ಮಾಡಲಾಗಿದ್ದು, ಯಾರಾದರೂ ಗುಂಡು ಹೊಡೆದು ಕೊಂದಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಚಿರತೆ ಕಳೇಬರದ ಪಕ್ಕದಲ್ಲೇ ಕರು ಹಾಗೂ ಒಂದು ಶ್ವಾನದ ಶವವೂ ಬಿದ್ದಿರುವುದು ಕಂಡುಬಂದಿದೆ. ಹೀಗಾಗಿ ಯಾರಾದರೂ ವಿಷ ಹಾಕಿ ಕೊಂದಿದ್ದಾರೆಯೇ ಎಂಬ ಆಯಾಮದಲ್ಲೂ ತನಿಖೆ ನಡೆಯುತ್ತಿದೆ. ಕಲ್ಲು ಕ್ವಾರಿ ಪಕ್ಕದಲ್ಲೇ ಚಿರತೆ ಮೃತಪಟ್ಟಿರುವ ಹಿನ್ನಲೆ ಕಲ್ಲು ಕ್ವಾರಿ ಮಾಲೀಕನ ಮೇಲೆಯೂ ಅನುಮಾನ ವ್ಯಕ್ತವಾಗಿದೆ.

ಇದನ್ನೂ ಓದಿ
Image
5 ಹುಲಿಗಳ ಸಾವು ಪ್ರಕರಣ: ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಅಂಶ ಬಯಲಿಗೆ
Image
ಚಾಮರಾಜನಗರ: ಕೊಡಸೋಗೆ ರಸ್ತೆಯಲ್ಲಿ 18 ಕೋತಿಗಳ ಶವ ಪತ್ತೆ
Image
ಚಾಮರಾಜನಗರದಲ್ಲಿ ಐದು ಹುಲಿಗಳ ಸಾವು ಕೇಸ್​: ಕೊನೆಗೂ ಮೂವರ ಬಂಧನ​
Image
ಐದು ಹುಲಿಗಳ ನಿಗೂಢ ಸಾವು ಬೆನ್ನಲ್ಲೇ ಬಂಡೀಪುರದಲ್ಲಿ ಮತ್ತೊಂದು ಹುಲಿ ಸಾವು

ವಿಷ ಹಾಕಿ ಕೊಂದಿರುವ ಶಂಕೆ: ಬಿಆರ್​​ಟಿ ಅರಣ್ಯಾಧಿಕಾರಿ ಶ್ರೀಪತಿ ಮಾಹಿತಿ

ಚಿರತೆಯನ್ನು ವಿಷ ಹಾಕಿ ಕೊಲೆ ಮಾಡಿರಬಹುದು ಎಂಬ ಅನುಮಾನ ಮೇಲ್ನೋಟಕ್ಕೆ ವ್ಯಕ್ತವಾಗಿದೆ ಎಂದು ಬಿಆರ್​​ಟಿ ಡಿಸಿಎಫ್ ಶ್ರೀಪತಿ ‘ಟಿವಿ9’ಗೆ ತಿಳಿಸಿದ್ದಾರೆ. ಚಿರತೆ ಕಳೇಬರದ ಪಕ್ಕದಲ್ಲೇ ನಾಯಿ, ಕರುವಿನ ಕಳೇಬರ ಪತ್ತೆಯಾಗಿದೆ. ಹಾಗಾಗಿ ಚಿರತೆಗೆ ವಿಷ ಹಾಕಿ ಕೊಂದಿರುವ ಶಂಕೆ ವ್ಯಕ್ತವಾಗಿದೆ ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 5 ಹುಲಿಗಳ ಸಾವು ಪ್ರಕರಣ: ಉನ್ನತ ಸಮಿತಿಯ ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಅಂಶ ಬಯಲಿಗೆ

ಪಶು ವೈದ್ಯರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ, ನಾಯಿ, ಕರುವಿನ ಕಳೇಬರದ ಸ್ಯಾಂಪಲ್ ಸಂಗ್ರಹಿಸಲಾಗಿದ್ದು, ಲ್ಯಾಬ್​ಗೆ ಕಳುಹಿಸಲಾಗುತ್ತದೆ. ಎಫ್​ಎಸ್​ಎಲ್​​​ ವರದಿ ಬಳಿಕ ಸಾವಿಗೆ ಕಾರಣ ತಿಳಿಯಲಿದೆ ಎಂದು ಅವರು ಹೇಳಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಮದ್ಯದ ಅಮಲಿನಲ್ಲಿ ಲಾರಿ ಚಾಲಕ 20ಕ್ಕೂ ಹೆಚ್ಚು ವಾಹನಗಳಿಗೆ ಡಿಕ್ಕಿ
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಗಿಲ್ಲಿಯನ್ನೇ ಹೊರಗೆ ಕಳಿಸುವ ಭ್ರಮೆಯಲ್ಲಿ ರಕ್ಷಿತಾ: ಕಾವ್ಯಾ ಖಡಕ್ ತಿರುಗೇಟು
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಟೀಮ್ ಇಂಡಿಯಾ ವಿರುದ್ಧ ಭರ್ಜರಿ ಸೆಂಚುರಿ ಸಿಡಿಸಿದ ಸಮೀರ್
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
ಮನ್ರೇಗಾ ಯೋಜನೆ ಹೆಸ್ರು ಬದಲಾವಣೆ: ಕೇಂದ್ರದ ಕ್ರಮಕ್ಕೆ AICC ಅಧ್ಯಕ್ಷ ಕಿಡಿ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
2026 ಸಿಂಹ ರಾಶಿಯವರಿಗೆ ಹಲವು ಮಹತ್ವದ ಬದಲಾವಣೆಗಳನ್ನು ತರುವ ವರ್ಷ
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
Pulse Polio Campaign: ಮಕ್ಕಳಿಗೆ ಪೋಲಿಯೋ ಲಸಿಕೆ ಹಾಕಿದ ಡಿಕೆ ಶಿವಕುಮಾರ್
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
ಡಿಕೆ ಶಿವಕುಮಾರ್​​​ ಭೇಟಿ ಬಗ್ಗೆ ಕೆಎನ್​ ರಾಜಣ್ಣ ಸ್ಫೋಟಕ ಹೇಳಿಕೆ
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
Ashes 2025: ಮೂರಕ್ಕೆ ಮೂರು... ಆಸ್ಟ್ರೇಲಿಯಾ ಪಾಲಾದ ಆ್ಯಶಸ್
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ಶೆಟ್ಟಿ ಗ್ಯಾಂಗ್ ಬಿರುಕು? ಮೊದಲ ಬಾರಿಗೆ ಮೌನ ಮುರಿದ ಪ್ರಮೋದ್ ಶೆಟ್ಟಿ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ
ನಾಯಕತ್ವ ಬದಲಾವಣೆ ಗೊಂದಲ ಬಗೆಹರಿಸಿ: ಖರ್ಗೆಗೆ VR ಸುದರ್ಶನ್ ಪತ್ರ