AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಅಂಬೇಡ್ಕರ್​ಗೆ ಅವಮಾನ ಆರೋಪ; ಅಂಬೇಡ್ಕರ್ ಅಭಿಮಾನಿಗಳಿಂದ ಮೆಡಿಕಲ್ ಕಾಲೇಜು ಡೀನ್​ಗೆ ಕಪ್ಪು ಮಸಿ

ಡಾ. ಬಿ.ಆರ್​ ಅಂಬೇಡ್ಕರ್​​ರವರಿಗೆ ಅವಮಾನ ಆರೋಪ ಕೇಳಿಬಂದಿದ್ದು, ಅಂಬೇಡ್ಕರ್ ಅಭಿಮಾನಿಗಳು ಸೇರಿ ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ: ಅಂಬೇಡ್ಕರ್​ಗೆ ಅವಮಾನ ಆರೋಪ; ಅಂಬೇಡ್ಕರ್ ಅಭಿಮಾನಿಗಳಿಂದ ಮೆಡಿಕಲ್ ಕಾಲೇಜು ಡೀನ್​ಗೆ ಕಪ್ಪು ಮಸಿ
ಅಂಬೇಡ್ಕರ್​ಗೆ ಅವಮಾನ, ಡೀನ್​ ಮುಖಕ್ಕೆ ಮಸಿ
ಕಿರಣ್ ಹನುಮಂತ್​ ಮಾದಾರ್
|

Updated on: May 19, 2023 | 6:46 PM

Share

ಚಾಮರಾಜನಗರ: ಡಾ.ಬಿ.ಆರ್​ ಅಂಬೇಡ್ಕರ್(Dr BR Ambedkar)​​ರವರಿಗೆ ಅವಮಾನ ಆರೋಪ ಕೇಳಿಬಂದಿದ್ದು, ಅಂಬೇಡ್ಕರ್ ಅಭಿಮಾನಿಗಳು ಸೇರಿ ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿರುವ ಘಟನೆ ಚಾಮರಾಜನಗರ (Chamarajanagar)ದಲ್ಲಿ ನಡೆದಿದೆ. ಬಳಿಕ ಡಾ. ಸಂಜೀವ್ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ. ನಿನ್ನೆ(ಮೇ.18) ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಜೈನ್ ವಿವಿಯಲ್ಲಿ ಅಂಬೇಡ್ಕರ್‌ಗೆ ಅವಮಾನ

ಬೆಂಗಳೂರು: ಇದೊಂದೆ ಅಲ್ಲ, ಕಳೆದ ಪೆಬ್ರವರಿಯಲ್ಲಿ ಜೈನ್ ವಿಶ್ವ ವಿದ್ಯಾನಿಲಯದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ನಾಟಕದಲ್ಲಿ ಅವಮಾನ ಮಾಡಲಾಗಿದೆ ಎಂಬ ವಿಚಾರ ವಿಧಾನಸಭೆಯಲ್ಲಿ ಗದ್ದಲಕ್ಕೆ ಕಾರಣವಾಗಿತ್ತು. ಹೌದು ವಿಧಾನಸಭೆಯಲ್ಲಿ ಹಲವಾರು ಶಾಸಕರುಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.

ಅಂಬೇಡ್ಕರ್‌ ಅವರಿಗೆ ಜೈನ್‌ ವಿವಿ ಮಾಡಿದ್ದ ಅಪಮಾನ ಏನು?

ಜೈನ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವಿ ಉತ್ಸವ ಸಮಾರಂಭದಲ್ಲಿ ದಿ ಡೆಲ್ರಾಯ್ಸ್ ಬಾಯ್ಸ್ ತಂಡ ಪ್ರದರ್ಶಿಸಿದ ಕಿರು ನಾಟಕದಲ್ಲಿ ಭಾರತೀಯ ಸಂವಿಧಾನದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಿತ್ತು. ಮ್ಯಾಡ್ ಆಡ್ಸ್ ಎಂಬ ಕಾರ್ಯಕ್ರಮದಲ್ಲಿ ಅವಹೇಳನಕಾರಿ ರೀತಿಯಲ್ಲಿ ಅಂಬೇಡ್ಕರ್‌ ಹೆಸರನ್ನ ಬರೆಯಲಾಗಿತ್ತು. ಈ ಬಗ್ಗೆ ದಲಿತ ಸಂಘಟನೆಗಳ ಸದಸ್ಯರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ವಿವಿ ಆಡಳಿತ ಮಂಡಳಿ ಮತ್ತು ಕಾರ್ಯಕ್ರಮ ಮಾಡಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದರು.

ಇದನ್ನೂ ಓದಿ:ದೇವನಹಳ್ಳಿ: ಯನಗುಂಟೆ ಗ್ರಾಮದಲ್ಲಿ ತಡರಾತ್ರಿ ಕಿಡಿಗೇಡಿಗಳಿಂದ ಅಂಬೇಡ್ಕರ್ ಪ್ರತಿಮೆ ಧ್ವಂಸ

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Kiran Hanumant Madar
Kiran Hanumant Madar

ಹುಟ್ಟೂರು- ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಮಾವಿನಕಟ್ಟ, ಶಿರಸಿಯಲ್ಲಿ ಬಿ.ಎ ಪತ್ರಿಕೋಧ್ಯಮ ಮುಗಿಸಿ, ವಾರ್ತಾ ಇಲಾಖೆಯಲ್ಲಿ ಒಂದು ವರ್ಷದ ತರಭೇತಿ ಪಡೆದು, ಟಿವಿ9 ಡಿಜಿಟಲ್​ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದೇನೆ.

Read More
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!