AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಅಂಬೇಡ್ಕರ್​ಗೆ ಅವಮಾನ ಆರೋಪ; ಅಂಬೇಡ್ಕರ್ ಅಭಿಮಾನಿಗಳಿಂದ ಮೆಡಿಕಲ್ ಕಾಲೇಜು ಡೀನ್​ಗೆ ಕಪ್ಪು ಮಸಿ

ಡಾ. ಬಿ.ಆರ್​ ಅಂಬೇಡ್ಕರ್​​ರವರಿಗೆ ಅವಮಾನ ಆರೋಪ ಕೇಳಿಬಂದಿದ್ದು, ಅಂಬೇಡ್ಕರ್ ಅಭಿಮಾನಿಗಳು ಸೇರಿ ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿರುವ ಘಟನೆ ಚಾಮರಾಜನಗರದಲ್ಲಿ ನಡೆದಿದೆ.

ಚಾಮರಾಜನಗರ: ಅಂಬೇಡ್ಕರ್​ಗೆ ಅವಮಾನ ಆರೋಪ; ಅಂಬೇಡ್ಕರ್ ಅಭಿಮಾನಿಗಳಿಂದ ಮೆಡಿಕಲ್ ಕಾಲೇಜು ಡೀನ್​ಗೆ ಕಪ್ಪು ಮಸಿ
ಅಂಬೇಡ್ಕರ್​ಗೆ ಅವಮಾನ, ಡೀನ್​ ಮುಖಕ್ಕೆ ಮಸಿ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on: May 19, 2023 | 6:46 PM

Share

ಚಾಮರಾಜನಗರ: ಡಾ.ಬಿ.ಆರ್​ ಅಂಬೇಡ್ಕರ್(Dr BR Ambedkar)​​ರವರಿಗೆ ಅವಮಾನ ಆರೋಪ ಕೇಳಿಬಂದಿದ್ದು, ಅಂಬೇಡ್ಕರ್ ಅಭಿಮಾನಿಗಳು ಸೇರಿ ಮೆಡಿಕಲ್ ಕಾಲೇಜು ಡೀನ್ ಡಾ.ಸಂಜೀವ್ ಮೇಲೆ ಕಪ್ಪು ಮಸಿ ಎರಚಿರುವ ಘಟನೆ ಚಾಮರಾಜನಗರ (Chamarajanagar)ದಲ್ಲಿ ನಡೆದಿದೆ. ಬಳಿಕ ಡಾ. ಸಂಜೀವ್ ಕಾರಿಗೆ ಕಲ್ಲೆಸೆದು ಗಾಜು ಪುಡಿಗೊಳಿಸುವ ಮೂಲಕ ಪ್ರತಿಭಟಿಸಿದ್ದಾರೆ. ನಿನ್ನೆ(ಮೇ.18) ಸಂಜೆ ಕಚೇರಿಯಲ್ಲಿ ಅಂಬೇಡ್ಕರ್ ಕುರಿತು ಹಗುರವಾಗಿ ಮಾತಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಇನ್ನು ಘಟನೆ ಕುರಿತು ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಸ್ಥಿತಿ ನಿಯಂತ್ರಿಸಿದ್ದಾರೆ.

ಜೈನ್ ವಿವಿಯಲ್ಲಿ ಅಂಬೇಡ್ಕರ್‌ಗೆ ಅವಮಾನ

ಬೆಂಗಳೂರು: ಇದೊಂದೆ ಅಲ್ಲ, ಕಳೆದ ಪೆಬ್ರವರಿಯಲ್ಲಿ ಜೈನ್ ವಿಶ್ವ ವಿದ್ಯಾನಿಲಯದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ನಾಟಕದಲ್ಲಿ ಅವಮಾನ ಮಾಡಲಾಗಿದೆ ಎಂಬ ವಿಚಾರ ವಿಧಾನಸಭೆಯಲ್ಲಿ ಗದ್ದಲಕ್ಕೆ ಕಾರಣವಾಗಿತ್ತು. ಹೌದು ವಿಧಾನಸಭೆಯಲ್ಲಿ ಹಲವಾರು ಶಾಸಕರುಗಳು ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದರು.

ಅಂಬೇಡ್ಕರ್‌ ಅವರಿಗೆ ಜೈನ್‌ ವಿವಿ ಮಾಡಿದ್ದ ಅಪಮಾನ ಏನು?

ಜೈನ್‌ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ವಿವಿ ಉತ್ಸವ ಸಮಾರಂಭದಲ್ಲಿ ದಿ ಡೆಲ್ರಾಯ್ಸ್ ಬಾಯ್ಸ್ ತಂಡ ಪ್ರದರ್ಶಿಸಿದ ಕಿರು ನಾಟಕದಲ್ಲಿ ಭಾರತೀಯ ಸಂವಿಧಾನದ ಪಿತಾಮಹ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಗುರಿಯಾಗಿಸಿಕೊಂಡು ಅವಹೇಳನ ಮಾಡಿತ್ತು. ಮ್ಯಾಡ್ ಆಡ್ಸ್ ಎಂಬ ಕಾರ್ಯಕ್ರಮದಲ್ಲಿ ಅವಹೇಳನಕಾರಿ ರೀತಿಯಲ್ಲಿ ಅಂಬೇಡ್ಕರ್‌ ಹೆಸರನ್ನ ಬರೆಯಲಾಗಿತ್ತು. ಈ ಬಗ್ಗೆ ದಲಿತ ಸಂಘಟನೆಗಳ ಸದಸ್ಯರು ಸಿದ್ದಾಪುರ ಪೊಲೀಸ್ ಠಾಣೆಯಲ್ಲಿ ವಿವಿ ಆಡಳಿತ ಮಂಡಳಿ ಮತ್ತು ಕಾರ್ಯಕ್ರಮ ಮಾಡಿರುವ ವಿದ್ಯಾರ್ಥಿಗಳ ವಿರುದ್ಧ ಕ್ರಮ ಕೈಗೊಳ್ಳುವಂತೆ ದೂರು ದಾಖಲಿಸಿದ್ದರು.

ಇದನ್ನೂ ಓದಿ:ದೇವನಹಳ್ಳಿ: ಯನಗುಂಟೆ ಗ್ರಾಮದಲ್ಲಿ ತಡರಾತ್ರಿ ಕಿಡಿಗೇಡಿಗಳಿಂದ ಅಂಬೇಡ್ಕರ್ ಪ್ರತಿಮೆ ಧ್ವಂಸ

ಕ್ಷಮೆಯಾಚಿಸಿದ್ದ ಜೈನ್‌ ವಿವಿಯ ಕುಲಸಚಿವ

ಸಂವಿಧಾನ ಶಿಲ್ಪಿ ಡಾ. ಬಿ. ಆರ್.ಅಂಬೇಡ್ಕರ್ ಅವರ ಬಗ್ಗೆ ಜೈನ್ ವಿಶ್ವವಿದ್ಯಾಲಯಕ್ಕೆ ಹೆಚ್ಚಿನ ಗೌರವ ಇದೆ. ಅದನ್ನು ವಿಶ್ವವಿದ್ಯಾಲಯ ಸದಾ ಎತ್ತಿ ಹಿಡಿಯುತ್ತದೆ. ಜೈನ್ ವಿಶ್ವವಿದ್ಯಾಲಯದ ವಿದ್ಯಾರ್ಥಿಗಳು ಕಿರು ನಾಟಕವನ್ನು ಪ್ರದರ್ಶಿಸಿದ ಘಟನೆಯಿಂದ ನೋವು ಅನುಭವಿಸಿದ ಎಲ್ಲರಿಗೂ ವಿಶ್ವವಿದ್ಯಾಲಯವು ಕ್ಷಮೆ ಕೋರುತ್ತದೆ ಎಂದು ವಿವಿಯ ಕುಲಸಚಿವರು ತಿಳಿಸಿದ್ದರು.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
100ರೂ.ನೀರಿನ ಬಾಟಲಿ ತಗೋತಾರೆ:50ರೂ. ಕೊಟ್ಟು ಸಕ್ಕರೆ ತೆಗೊಂಡ್ರೆ ಏನೂ ಆಗಲ್ಲ
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
ರೈತರಲ್ಲಿ ಆತಂಕ ತಂದ ಅರಣ್ಯ ಇಲಾಖೆ ಸಚಿವರ ಆ ಹೇಳಿಕೆ: ಹೇಳಿದ್ದೇನು?
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
11 ವರ್ಷದ ಬಳಿಕ ಸಿಕ್ಕಿಬಿದ್ದ ತನ್ನನ್ನೇ ತಾನು ಕೊಲೆ ಮಾಡಿಕೊಂಡಿದ್ದ ಭೂಪ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಗೌತಮ್ ಅದಾನಿ ಡಿಕೆಶಿ​​​​​ ಭೇಟಿ ಮಾಡಿದ್ಯಾಕೆ? ಇಲ್ಲಿದೆ ಅಸಲಿ ಕಾರಣ
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ