AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕೋರ್ಟ್‌ಗೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿ ಎಸ್ಕೇಪ್

ಚಾಮರಾಜನಗರ ಉಪ ಕಾರಾಗೃಹದಿಂದ ತಮಿಳುನಾಡು ಸತ್ಯಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿ ಎಸ್ಕೇಪ್ ಆದ ಘಟನೆ ನಡೆದಿದೆ. ಟೀ ಕುಡಿಯುವಾಗ ಚಾಮರಾಜನಗರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ‌ ಪರಾರಿಯಾಗಿದ್ದಾನೆ.

ಚಾಮರಾಜನಗರ: ಕೋರ್ಟ್‌ಗೆ ಕರೆದೊಯ್ಯುವಾಗ ವಿಚಾರಣಾಧೀನ ಕೈದಿ ಎಸ್ಕೇಪ್
ಪ್ರಾತಿನಿಧಿಕ ಚಿತ್ರ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 04, 2023 | 2:13 PM

Share

ಚಾಮರಾಜನಗರ, ಆ.4: ತಾಲೂಕಿನ ಮೇಗಲಹುಂಡಿಯ ವಿಚಾರಣಾಧೀನ ಕೈದಿ ಸುರೇಶ್ ಎಂಬಾತ ಹಲವು ಕಳ್ಳತನ ಪ್ರಕರಣಗಳ ಹಿನ್ನಲೆ ಚಾಮರಾಜನಗರ(Chamarajanagar) ಜೈಲಿನಲ್ಲಿದ್ದ. ತಮಿಳುನಾಡಿನ ಕಳ್ಳತನ ಪ್ರಕರಣವೊಂದರಲ್ಲಿ ವಿಚಾರಣೆಗೆಂದು ಉಪ ಕಾರಾಗೃಹದಿಂದ ತಮಿಳುನಾಡು ಸತ್ಯಮಂಗಲಂ ನ್ಯಾಯಾಲಯಕ್ಕೆ ಕರೆದೊಯ್ಯುವಾಗ ಇತ ಎಸ್ಕೇಪ್​ ಆಗಿದ್ದಾನೆ. ಹೌದು, ತಮಿಳುನಾಡಿನ ಹಾಸನೂರು ಬಳಿ ಟೀ ಕುಡಿಯುವಾಗ ಚಾಮರಾಜನಗರ ಜಿಲ್ಲಾ ಸಶಸ್ತ್ರ ಮೀಸಲು ಪಡೆಯ ಪೊಲೀಸರಿಗೆ ಚಳ್ಳೇಹಣ್ಣು ತಿನಿಸಿ‌ ಪರಾರಿಯಾಗಿದ್ದಾನೆ.

ಚಾಮರಾಜನಗರದಲ್ಲಿ ಪ್ರಾಂಶುಪಾಲರಿಂದ ಕಿರುಕುಳ ಆರೋಪ; ಹೈಡ್ರೋಕ್ಲೋರಿಕ್ ಆ್ಯಸಿಡ್ ಕುಡಿದು ಲ್ಯಾಬ್ ಅಟೆಂಡರ್ ಆತ್ಮಹತ್ಯೆಗೆ ಯತ್ನ

ಚಾಮರಾಜನಗರ, ಆ.4: ತಾಲೂಕಿನ ಹೊಂಡರವಾಳು ನವೋದಯ ವಿದ್ಯಾಲಯದ ಪ್ರಾಂಶುಪಾಲರಿಂದ ಕಿರುಕುಳ ಕೊಡುತ್ತಿದ್ದಾರೆ ಎಂದು ಆರೋಪಿಸಿ ಹೈಡ್ರೋಕ್ಲೋರಿಕ್ ಆ್ಯಸಿಡ್ ಕುಡಿದು ಲ್ಯಾಬ್ ಅಟೆಂಡರ್ ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಚಿರಂಜೀವಿ (28) ಆತಹತ್ಯೆಗೆ ಯತ್ನಿಸಿದ ನೌಕರ. ಕೂಡಲೇ ಇತನನ್ನು ಚಾಮರಾಜನಗರ ಸಿಮ್ಸ್ ಆಸ್ಪತ್ರೆಗೆ ದಾಖಲು ಮಾಡಿ, ಪ್ರಾಥಮಿಕ ಚಿಕಿತ್ಸೆ ಬಳಿಕ ಮೈಸೂರು ಅಪೋಲೋ ಆಸ್ಪತ್ರೆಗೆ ದಾಖಲಿಸಲಾಗಿದೆ. ಪ್ರಾಂಶುಪಾಲರು ಹೆಚ್ಚುವರಿ ಕೆಲಸ ಹಾಗೂ ಮನೆಗೆಲಸ ಮಾಡಿಸುತ್ತಾರೆ ಎಂದು ಆರೋಪಿಸಿ ಆತ್ಮಹತ್ಯೆಗೆ ಯತ್ನಿಸಿದ್ದ. ಇನ್ನು ಈ ಘಟನೆ ಕುರಿತು ನವೋದಯ ವಿದ್ಯಾಲಯದ ಪ್ರಾಂಶುಪಾಲ ವಿ.ಪ್ರಸಾದ್ ವಿರುದ್ದ ಚಾಮರಾಜನಗರ ಪೂರ್ವ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಇದನ್ನೂ ಓದಿ:ಕುಖ್ಯಾತ ವಿಚಾರಣಾಧೀನ ಕೈದಿ ಸ್ಯಾಂಟ್ರೋ ರವಿ ಮೈಸೂರು ಜೈಲಿನಲ್ಲಿ ಅಧಿಕಾರಿಗಳಿಗೆ ಬಾಯಿಗೆ ಬಂದಂತೆ ಬೈತಾನಂತೆ!

ಕಾವೇರಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ 6 ಪ್ರವಾಸಿಗರ ರಕ್ಷಣೆ

ಚಾಮರಾಜನಗರ: ಕಾವೇರಿ ನದಿಯ ನಡುಗಡ್ಡೆಯಲ್ಲಿ ಸಿಲುಕಿದ್ದ 6 ಪ್ರವಾಸಿಗರ ರಕ್ಷಣೆ ಮಾಡಿದ ಘಟನೆ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಶಿವನಸಮುದ್ರ ಬಳಿ ನಡೆದಿದೆ. ಬೆಂಗಳೂರಿನಿಂದ ಕುಟುಂಬದೊಂದಿಗೆ ಪ್ರವಾಸಕ್ಕೆ ಬಂದಿದ್ದ 6 ಜನರು, ಮೋಜು ಮಸ್ತಿ ಮಾಡಲು ನದಿಯ ನಡುಗಡ್ಡೆ ಬಂಡೆ ಬಳಿ ತೆರಳಿದ್ದರು. ಈ ವೇಳೆ ದಿಢೀರ್ ನೀರು ಹೆಚ್ಚಾದ ಪರಿಣಾಮ ಹೊರಬರಲಾಗದೆ ಪರದಾಟ ನಡೆಸಿದ್ದರು. ಕೂಡಲೇ ಮೂವರು ಮಹಿಳೆಯರು ಸೇರಿದಂತೆ 6 ಜನರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಸ್ಥಳೀಯರ ಸಮಯ ಪ್ರಜ್ಞೆ, ಮಾನವೀಯತೆಯಿಂದ ಜಲ ಕಂಟಕದಿಂದ ಕುಟುಂಬ ಪಾರಾಗಿದೆ.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ