AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆಗೆ ಬಾರದ ಅನ್ನಭಾಗ್ಯ ಗೃಹಲಕ್ಷ್ಮೀ ಯೋಜನೆ ಹಣ: ಚಾಮರಾಜನಗರದಲ್ಲಿ ರೊಚ್ಚಿಗೆದ್ದ ಮಹಿಳಾ ಮಣಿಯರು

ಲೋಪದೋಷ ಸರಿಪಡಿಸಿಕೊಳ್ಳಲು ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಎಡತಾಕಿದ್ದಾರೆ. ಅದೂ ಬೆಳಗ್ಗೆ 8 ಗಂಟೆಯಿಂದಲೇ, ಒಂದೇ ಸಮನೆ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಸಾಲುಗಟ್ಟಿ ನಿಂತುಬಿಟ್ಟಿದ್ದಾರೆ ಫಲಾನುಭವಿಗಳು.

ಖಾತೆಗೆ ಬಾರದ ಅನ್ನಭಾಗ್ಯ ಗೃಹಲಕ್ಷ್ಮೀ ಯೋಜನೆ ಹಣ: ಚಾಮರಾಜನಗರದಲ್ಲಿ ರೊಚ್ಚಿಗೆದ್ದ ಮಹಿಳಾ ಮಣಿಯರು
ಖಾತೆಗೆ ಬಾರದ ಯೋಜನೆ ಹಣ: ಚಾಮರಾಜನಗರದಲ್ಲಿ ರೊಚ್ಚಿಗೆದ್ದ ಮಹಿಳಾ ಮಣಿಯರು
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಸಾಧು ಶ್ರೀನಾಥ್​

Updated on: Jan 09, 2024 | 2:42 PM

ಚಾಮರಾಜನಗರ, ಜನವರಿ 8: ಸಿದ್ದರಾಮಯ್ಯ ನೇತೃತ್ವದ (Siddaramaiah) ಕಾಂಗ್ರೆಸ್​​ ಸರ್ಕಾರವೇನೋ ಅತ್ಯುತ್ಸಾಹದಲ್ಲಿ ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಹೊಸದರಲ್ಲಿ ಜಾರಿಗೆ ತಂದಿದೆ. ಆದರೆ ಅದು ಅನುಷ್ಠಾನವಾಗುವುದು ತೊಡಕಾಗಿ ಪರಿಣಮಿಸಿದೆ. ಮುಖ್ಯವಾಗಿ ಹಣಕಾಸಿನ ತೊಂದರೆಗೆ ಸಿಲುಕಿದೆ ಈ ಸಕಲ ಭಾಗ್ಯ ಯೋಜನೆಗಳು. ಹಾಗೆಂದೇ… ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಎಂಬೆರಡು ಯೋಜನೆಗಳ ಬಾಬತ್ತಿನಲ್ಲಿ ಖಾತೆಗೆ ಹಣ ಬಾರದ ಹಿನ್ನೆಲೆ ಚಾಮರಾಜನಗರದಲ್ಲಿ (Chamarajanagar) ಮಹಿಳಾ ಮಣಿಯರು ರೊಚ್ಚಿಗೆದ್ದಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಇಂದು ಹೈ ಡ್ರಾಮ ನಡೆದಿದೆ. ಯೋಜನೆ ಜಾರಿಗೆ ಬಂದು ಐದಾರು ತಿಂಗಳು ಕಳೆದರೂ ಖಾತೆಗೆ ಹಣ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯ ಆವರಣದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಶಿಬಿರ ಆಯೋಜನೆ ಮಾಡಲಾಗಿತ್ತು. ಗೊಂದಲ ನಿವಾರಿಸಲು ಚಾಮರಾಜನಗರ ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆಯಿಂದ ವಿಶೇಷ ಶಿಬಿರ ಏರ್ಪಡಿಸಲಾಗಿತ್ತು.

ಜಿಲ್ಲಾದ್ಯಂತ 10 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಸಂದಾಯವಾಗದ ಗೃಹಲಕ್ಷ್ಮೀ ಹಣ, ಲೋಪದೋಷಗಳೇನು?

ಆ ವೇಳೆ ಲೋಪದೋಷ ಸರಿಪಡಿಸಿಕೊಳ್ಳಲು ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಎಡತಾಕಿದ್ದಾರೆ. ಅರ್ಧ ಕಿಲೋ ಮೀಟರ್ ವರೆಗೂ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಅದೂ ಬೆಳಗ್ಗೆ 8 ಗಂಟೆಯಿಂದಲೇ, ಒಂದೇ ಸಮನೆ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಸಾಲುಗಟ್ಟಿ ನಿಂತುಬಿಟ್ಟಿದ್ದಾರೆ ಫಲಾನುಭವಿಗಳು.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ – ಆಹಾರ ಇಲಾಖೆಗೆ 200 ಕೋಟಿ ಉಳಿತಾಯ ಮಾಡಿದ ‘5 ಕೆಜಿ ಅಕ್ಕಿ ಹಣ’

ಪಡಿತರ ಚೀಟಿ, ಇ ಕೆವೈಸಿ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ಆಧಾರ್ ತಿದ್ದುಪಡಿ, ಹೊಸದಾಗಿ ಬ್ಯಾಂಕ್ ಖಾತೆ ತೆರೆಯಲು ಶಿಬಿರದಲ್ಲಿ ಅವಕಾಶವಿತ್ತು. ಚಾಮರಾಜನಗರ ಜಿಲ್ಲೆಯ 10,500 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಇನ್ನೂ ಅನ್ನಭಾಗ್ಯದ ಹಣ ಸಿಕ್ಕಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
VIDEO: ರಣರೋಚಕ ಪಂದ್ಯ: ಒಂದೇ ಮ್ಯಾಚ್​ನಲ್ಲಿ 3 ಸೂಪರ್ ಓವರ್
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಅಧ್ಯಾತ್ಮ: ತವರು ಮನೆಯಿಂದ ತರಬಾರದ 5 ವಸ್ತುಗಳು
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
ಚಂದ್ರ ಕುಂಭ ರಾಶಿಯಲ್ಲಿ ಸಂಚಾರ: ಇಂದಿನ ರಾಶಿ ಭವಿಷ್ಯ ವಿವರಣೆ ಇಲ್ಲಿದೆ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
5 ಎಸೆತಗಳಲ್ಲಿ 5 ವಿಕೆಟ್ ಉರುಳಿಸಿದ ದಿಗ್ವೇಶ್ ರಾಥಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಸೈಪ್ರಸ್​​ನ ಐತಿಹಾಸಿಕ ಭೇಟಿ ಮುಗಿಸಿ ಕೆನಡಾಕ್ಕೆ ಹೊರಟ ಭಾರತದ ಪ್ರಧಾನಿ ಮೋದಿ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಕಾಂತಾರ ತಂಡದ ಯಾರಿಗೂ ಗಾಯ ಆಗಿಲ್ಲ: ಶಿವಮೊಗ್ಗ ಜಿಲ್ಲಾಧಿಕಾರಿ ಸ್ಪಷ್ಟನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಹ್ಯಾನ್ಲೆಯಲ್ಲಿ ಮಿನಿ ತಾರಾಲಯಕ್ಕೆ ಸಚಿವೆ ನಿರ್ಮಲಾ ಸೀತಾರಾಮನ್ ಶಂಕುಸ್ಥಾಪನೆ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಪ್ರಧಾನಿ ಮೋದಿ ಕಾಲಿಗೆ ನಮಸ್ಕರಿಸಿ ಸ್ವಾಗತಿಸಿದ ಸೈಪ್ರಸ್ ಶಾಸಕಿ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ಧುಮ್ಮುಕ್ಕುತ್ತಿರುವ ವಿಶ್ವ ವಿಖ್ಯಾತ ಜಲಪಾತ, ಜೋಗದ ಸಿರಿಯ ನಯನ ಮನೋಹರ ದೃಶ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ
ದಾವಣಗೆರೆಗೆ ಕಾರಲ್ಲಿ ಬಂದಿದ್ದಕ್ಕೆ ತಡವಾಯ್ತು ಎಂದ ಸಿಎಂ ಸಿದ್ದರಾಮಯ್ಯ