AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಖಾತೆಗೆ ಬಾರದ ಅನ್ನಭಾಗ್ಯ ಗೃಹಲಕ್ಷ್ಮೀ ಯೋಜನೆ ಹಣ: ಚಾಮರಾಜನಗರದಲ್ಲಿ ರೊಚ್ಚಿಗೆದ್ದ ಮಹಿಳಾ ಮಣಿಯರು

ಲೋಪದೋಷ ಸರಿಪಡಿಸಿಕೊಳ್ಳಲು ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಎಡತಾಕಿದ್ದಾರೆ. ಅದೂ ಬೆಳಗ್ಗೆ 8 ಗಂಟೆಯಿಂದಲೇ, ಒಂದೇ ಸಮನೆ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಸಾಲುಗಟ್ಟಿ ನಿಂತುಬಿಟ್ಟಿದ್ದಾರೆ ಫಲಾನುಭವಿಗಳು.

ಖಾತೆಗೆ ಬಾರದ ಅನ್ನಭಾಗ್ಯ ಗೃಹಲಕ್ಷ್ಮೀ ಯೋಜನೆ ಹಣ: ಚಾಮರಾಜನಗರದಲ್ಲಿ ರೊಚ್ಚಿಗೆದ್ದ ಮಹಿಳಾ ಮಣಿಯರು
ಖಾತೆಗೆ ಬಾರದ ಯೋಜನೆ ಹಣ: ಚಾಮರಾಜನಗರದಲ್ಲಿ ರೊಚ್ಚಿಗೆದ್ದ ಮಹಿಳಾ ಮಣಿಯರು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jan 09, 2024 | 2:42 PM

Share

ಚಾಮರಾಜನಗರ, ಜನವರಿ 8: ಸಿದ್ದರಾಮಯ್ಯ ನೇತೃತ್ವದ (Siddaramaiah) ಕಾಂಗ್ರೆಸ್​​ ಸರ್ಕಾರವೇನೋ ಅತ್ಯುತ್ಸಾಹದಲ್ಲಿ ತನ್ನ ಮಹತ್ವಾಕಾಂಕ್ಷಿ ಗ್ಯಾರಂಟಿ ಯೋಜನೆಗಳನ್ನು ಅಧಿಕಾರಕ್ಕೆ ಬಂದ ಹೊಸದರಲ್ಲಿ ಜಾರಿಗೆ ತಂದಿದೆ. ಆದರೆ ಅದು ಅನುಷ್ಠಾನವಾಗುವುದು ತೊಡಕಾಗಿ ಪರಿಣಮಿಸಿದೆ. ಮುಖ್ಯವಾಗಿ ಹಣಕಾಸಿನ ತೊಂದರೆಗೆ ಸಿಲುಕಿದೆ ಈ ಸಕಲ ಭಾಗ್ಯ ಯೋಜನೆಗಳು. ಹಾಗೆಂದೇ… ಅನ್ನಭಾಗ್ಯ ಮತ್ತು ಗೃಹಲಕ್ಷ್ಮೀ ಎಂಬೆರಡು ಯೋಜನೆಗಳ ಬಾಬತ್ತಿನಲ್ಲಿ ಖಾತೆಗೆ ಹಣ ಬಾರದ ಹಿನ್ನೆಲೆ ಚಾಮರಾಜನಗರದಲ್ಲಿ (Chamarajanagar) ಮಹಿಳಾ ಮಣಿಯರು ರೊಚ್ಚಿಗೆದ್ದಿದ್ದಾರೆ.

ಈ ಹಿನ್ನೆಲೆಯಲ್ಲಿ ನಗರದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಇಂದು ಹೈ ಡ್ರಾಮ ನಡೆದಿದೆ. ಯೋಜನೆ ಜಾರಿಗೆ ಬಂದು ಐದಾರು ತಿಂಗಳು ಕಳೆದರೂ ಖಾತೆಗೆ ಹಣ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಇಂದು ಜಿಲ್ಲಾಧಿಕಾರಿ ಕಚೇರಿಯ ಆವರಣದ ಜೆ.ಹೆಚ್. ಪಟೇಲ್ ಸಭಾಂಗಣದಲ್ಲಿ ಶಿಬಿರ ಆಯೋಜನೆ ಮಾಡಲಾಗಿತ್ತು. ಗೊಂದಲ ನಿವಾರಿಸಲು ಚಾಮರಾಜನಗರ ಆಹಾರ, ನಾಗರಿಕ ಸರಬರಾಜು ಇಲಾಖೆ ಹಾಗೂ ಮಹಿಳಾ ಮತ್ತು ಕಲ್ಯಾಣ ಇಲಾಖೆಯಿಂದ ವಿಶೇಷ ಶಿಬಿರ ಏರ್ಪಡಿಸಲಾಗಿತ್ತು.

ಜಿಲ್ಲಾದ್ಯಂತ 10 ಸಾವಿರಕ್ಕೂ ಹೆಚ್ಚು ಫಲಾನುಭವಿಗಳಿಗೆ ಸಂದಾಯವಾಗದ ಗೃಹಲಕ್ಷ್ಮೀ ಹಣ, ಲೋಪದೋಷಗಳೇನು?

ಆ ವೇಳೆ ಲೋಪದೋಷ ಸರಿಪಡಿಸಿಕೊಳ್ಳಲು ಮಹಿಳೆಯರು ಭಾರೀ ಸಂಖ್ಯೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ಎಡತಾಕಿದ್ದಾರೆ. ಅರ್ಧ ಕಿಲೋ ಮೀಟರ್ ವರೆಗೂ ಮಹಿಳೆಯರು ಸರತಿ ಸಾಲಿನಲ್ಲಿ ನಿಂತಿದ್ದಾರೆ. ಅದೂ ಬೆಳಗ್ಗೆ 8 ಗಂಟೆಯಿಂದಲೇ, ಒಂದೇ ಸಮನೆ ಸುರಿಯುತ್ತಿದ್ದ ಮಳೆಯನ್ನೂ ಲೆಕ್ಕಿಸದೆ ಸಾಲುಗಟ್ಟಿ ನಿಂತುಬಿಟ್ಟಿದ್ದಾರೆ ಫಲಾನುಭವಿಗಳು.

ಇದನ್ನೂ ಓದಿ: ಅನ್ನಭಾಗ್ಯ ಯೋಜನೆ – ಆಹಾರ ಇಲಾಖೆಗೆ 200 ಕೋಟಿ ಉಳಿತಾಯ ಮಾಡಿದ ‘5 ಕೆಜಿ ಅಕ್ಕಿ ಹಣ’

ಪಡಿತರ ಚೀಟಿ, ಇ ಕೆವೈಸಿ, ಬ್ಯಾಂಕ್ ಖಾತೆಗೆ ಆಧಾರ್ ಲಿಂಕ್, ಆಧಾರ್ ತಿದ್ದುಪಡಿ, ಹೊಸದಾಗಿ ಬ್ಯಾಂಕ್ ಖಾತೆ ತೆರೆಯಲು ಶಿಬಿರದಲ್ಲಿ ಅವಕಾಶವಿತ್ತು. ಚಾಮರಾಜನಗರ ಜಿಲ್ಲೆಯ 10,500 ಕ್ಕೂ ಹೆಚ್ಚು ಫಲಾನುಭವಿಗಳಿಗೆ ಇನ್ನೂ ಅನ್ನಭಾಗ್ಯದ ಹಣ ಸಿಕ್ಕಿಲ್ಲ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಭೀಕರ ಬಿರುಗಾಳಿಗೆ ಶೀಟ್​ ಸಮೇತ ಗಾಳಿಯಲ್ಲಿ ಹಾರಿದ ವ್ಯಕ್ತಿ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?