AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ ಮತ್ತೊಂದು ರೋಗ ಪತ್ತೆ: ಒಂದೇ ಕುಟುಂಬದ ನಾಲ್ವರಲ್ಲಿ ಕಾಣಿಸಿಕೊಂಡ ವಿಚಿತ್ರ ರೋಗ

ಚುಕ್ಕೆ ರೋಗ ಬಳಿಕ ಚಾಮರಾಜನಗರದಲ್ಲಿ ಮತ್ತೊಂದು ತೀರಾ ಅಪರೂಪದ ರೋಗ ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ನಾಲ್ಕು ಮಂದಿಯಲ್ಲಿ ರೋಗ ಕಾಣಿಸಿಕೊಂಡಿದೆ. ಚಿಕಿತ್ಸೆ ಕೊಡಿಸಿದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಚಿಕಿತ್ಸೆ ನೆರವು ನೀಡಲಿ ಅಂತಾ ಮನವಿ ಮಾಡುತ್ತಿದ್ದಾರೆ.

ಚಾಮರಾಜನಗರದಲ್ಲಿ ಮತ್ತೊಂದು ರೋಗ ಪತ್ತೆ: ಒಂದೇ ಕುಟುಂಬದ ನಾಲ್ವರಲ್ಲಿ ಕಾಣಿಸಿಕೊಂಡ ವಿಚಿತ್ರ ರೋಗ
10 ಮಂದಿ ಪೈಕಿ ನಾಲ್ವರಲ್ಲಿ ಕಾಣಿಸಿಕೊಂಡ ವಿಚಿತ್ರ ರೋಗ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Aug 25, 2023 | 10:20 PM

Share

ಚಾಮರಾಜನಗರ, ಆಗಸ್ಟ್​ 25: ಚುಕ್ಕೆ ರೋಗ ಬಳಿಕ ಚಾಮರಾಜನಗರದಲ್ಲಿ (Chamarajanagar) ಮತ್ತೊಂದು ತೀರಾ ಅಪರೂಪದ ರೋಗ ಬೆಳಕಿಗೆ ಬಂದಿದೆ. ಒಂದೇ ಕುಟುಂಬದ ನಾಲ್ಕು ಮಂದಿಯಲ್ಲಿ ರೋಗ ಕಾಣಿಸಿಕೊಂಡಿದೆ. ಇದೀಗ ರೋಗ ಉಲ್ಬಣದಿಂದ ಕಾಲು, ಕೈ ಸ್ವಾಧೀನ ಕಳೆದುಕೊಂಡು ಜೀವನಕ್ಕೆ ಮುಂದೇನು ಅನ್ನೋ ಆತಂಕ ಕುಟುಂಬಸ್ಥರನ್ನು ಕಾಡುತ್ತಿದೆ. ಚಿಕಿತ್ಸೆ ಕೊಡಿಸಿದರೂ ಕೂಡ ಯಾವುದೇ ಪ್ರಯೋಜನವಾಗುತ್ತಿಲ್ಲ. ಜಿಲ್ಲಾಡಳಿತ, ಆರೋಗ್ಯ ಇಲಾಖೆ ಚಿಕಿತ್ಸೆ ನೆರವು ನೀಡಲಿ ಅಂತಾ ಮನವಿ ಮಾಡ್ತಿದ್ದಾರೆ.

ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಆಶ್ರಯ ಬಡಾವಣೆಯ ನಿವಾಸಿಗಳಲ್ಲಿ ಈ ರೋಗ ಕಾಣಿಸಿಕೊಂಡಿದೆ. ಒಂದೇ ಕುಟುಂಬದ ಅಕ್ಕ, ಮೂವರು ತಮ್ಮಂದಿರಲ್ಲಿ ಕಾಯಿಲೆ ಬಂದಿದೆ. ಸಯ್ಯದ್ ರೆಹಮತ್ ಉಲ್ಲಾ ಹಾಗೂ ರಫಿಯಾ ದಂಪತಿಗೆ ಒಟ್ಟಾರೆ 10 ಮಂದಿ ಮಕ್ಕಳಿದ್ದು ತಾಸಿನ್ ತಾಜ್, ಇದಾಯತ್, ಇಮ್ರಾನ್, ನೂರ್ ಅಹಮದ್ ಎಂಬ ನಾಲ್ಕು ಜನ ಅಕ್ಕ ತಮ್ಮಂದಿರಲ್ಲಿ ರೋಗ ಕಾಣಿಸಿಕೊಂಡಿದೆ.

ಇದನ್ನೂ ಓದಿ: ಕಾಡುಪ್ರಾಣಿ ದಾಳಿಗೆ 3 ವರ್ಷದ ಮಗು ಸಾವು ಆರೋಪ: ವಲಯ ಅರಣ್ಯಾಧಿಕಾರಿ ಕಚೇರಿ ಎದುರು ಶವವಿಟ್ಟು ಪ್ರತಿಭಟನೆ

ಹುಟ್ಟಿದ 20 ವರ್ಷಗಳ ಬಳಿಕ ಮಸ್ಕ್ಯೂಲಾರ್ ಡಿಸ್ಟ್ರೋಫಿ ರೋಗ ಕಾಣಿಸಿಕೊಂಡಿದ್ದು, ಮೊದಲಿಗೆ ನಡೆಯಲು, ಮೆಟ್ಟಿಲು ಹತ್ತಲೂ ಸಮಸ್ಯೆಯಾಗಿದೆ. ನಂತರ ಸಂಪೂರ್ಣವಾಗಿ ಬೇರೆಯರನ್ನೇ ಆಶ್ರಯಿಸಿ ನಡೆಯುವಂತಹ ಪರಿಸ್ಥಿತಿ ಬಂದಿದೆ. ಕಾಲು ಹಾಗೂ ಸೊಂಟದ ಕೆಳಗಿನ ಭಾಗ ಸಂಪೂರ್ಣ ಸ್ವಾಧೀನ ಕಳೆದುಕೊಂಡಿದೆ.

ಇದೀಗ ಊಟ ಮಾಡಲೂ ಕೂಡ ಬೇರೆಯವರನ್ನೇ ಆಶ್ರಯಿಸುವ ಪರಿಸ್ಥಿತಿ ಇದೆ. ಚಾಮರಾಜನಗರ, ಮೈಸೂರು, ಬೆಂಗಳೂರಿನಲ್ಲೂ ಕೂಡ ಚಿಕಿತ್ಸೆ ಕೊಡಿಸಿದರು ಪ್ರಯೋಜನವಿಲ್ಲ. ಜಪಾನ್​ಗೂ ಕೂಡ ಅವರ ಮಾಂಸ ಖಂಡವನ್ನು ಕಳಿಸಿ ಪರೀಕ್ಷೆ ನಡೆಸಲಾಗಿದೆ. ಆ ವೇಳೆ ಇದು ಮಸ್ಕ್ಯೂಲಾರ್ ಡಿಸ್ಟ್ರೋಫಿ ರೋಗಲಕ್ಷಣ ಅಂತಾ ಗೊತ್ತಾಗಿದೆ. ಇದೀಗಾ ಚಿಕಿತ್ಸೆ ಕೊಡಿಸಲು ಸಹ ಸಮಸ್ಯೆಯಾಗಿದೆ. ಈ ಕಾಯಿಲೆಗೆ ಸೂಕ್ತವಾದ ಚಿಕಿತ್ಸೆ ಕೊಡಿಸಲಿ ಅಂತಾ ಆರೋಗ್ಯಾಧಿಕಾರಿಗಳಿಗೆ ಮನವಿ ಮಾಡ್ತಿದೆ ಕುಟುಂಬ.

ಇದನ್ನೂ ಓದಿ: ಜ್ಯೋತಿಷಿ ಮಾತು ಕೇಳಿ ನಿಧಿ ಆಸೆಗಾಗಿ ಮನೆಯಲ್ಲಿ 20 ಅಡಿ ಆಳದ ಗುಂಡಿ ತೋಡಿದ ಮಹಿಳೆ

ಆರೋಗ್ಯಾಧಿಕಾರಿಗಳೇ ಹೇಳುವಂತೆ ವಂಶವಾಹಿಯಿಂದ ಈ ರೋಗ ಬರುವ ಸಾಧ್ಯತೆಯಿದೆ. ಇದಕ್ಕೆ ಸೂಕ್ತವಾದ ಚಿಕಿತ್ಸೆ ಸೌಲಭ್ಯವಿಲ್ಲ. ಇದರ ಪರಿಣಾಮ ಕಡಿಮೆಗೊಳಿಸಲು ಫಿಜಿಯೋಥೆರಪಿ, ಅಕ್ಯುಫ್ರೆಶರ್ ಥೆರಪಿ ಇದೆ. ಮುಜುಗರಕ್ಕೆ ಒಳಗಾಗುತ್ತೇವೆ ಅಂದು ಇಲ್ಲಿಯವರೆಗೂ ಈ ರೋಗದ ಬಗ್ಗೆ ಕುಟುಂಬಸ್ಥರು ಆರೋಗ್ಯ ಇಲಾಖೆ ಗಮನಕ್ಕೆ ತಂದಿಲ್ಲ. ಇದೀಗ ಅವರ ಚಿಕಿತ್ಸೆಗೆ ಅಗತ್ಯ ನೆರವು ಒದಗಿಸುವ ಭರವಸೆ ನೀಡ್ತಾರೆ ಅಧಿಕಾರಿಗಳು.

ಇತ್ತಿಚ್ಚಿಗೆ ಹನೂರು ಭಾಗದಲ್ಲಿ ಮಕ್ಕಳಿಗೆ ಚುಕ್ಕೆ ರೋಗ ಕಾಣಿಸಿಕೊಂಡಿತ್ತು. ಇದೀಗ ಕೊಳ್ಳೇಗಾಲ ಭಾಗದಲ್ಲಿ ಮಸ್ಕ್ಯೂಲಾರ್ ಡಿಸ್ಟ್ರೋಫಿ ಕುಟುಂಬ ತುತ್ತಾಗಿರೋದು ಆತಂಕ ಮೂಡಿಸಿದೆ. ಅಧಿಕಾರಿಗಳು ಹಾಗೂ ಸರ್ಕಾರ ಸೂಕ್ತ ಚಿಕಿತ್ಸೆ ಕೊಡಿಸಲಿ ಅನ್ನೋ ಮೂಲಕ ಕುಟುಂಬಸ್ಥರು ನೆರವಿನ ನಿರೀಕ್ಷೆಯಲ್ಲಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ