AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಮಡಹಳ್ಳಿ ಬಿಳಿಕಲ್ಲು ಗುಡ್ಡ ಕುಸಿತ ಪ್ರಕರಣ; ಒಂದು ವರ್ಷದ ಬಳಿಕ ಆರೋಪಿಗಳ ಬಂಧನ

ಗುಂಡ್ಲುಪೇಟೆ ತಾಲೂಕಿನ ಮಡಹಳ್ಳಿಯ ಬಿಳಿಕಲ್ಲು ಗುಡ್ಡ ಕುಸಿತ ಪ್ರಕರಣದಲ್ಲಿ ತಲೆಮರೆಸಿಕೊಂಡಿದ್ದ ಕೇರಳ ಮೂಲದ ಇಬ್ಬರು ಆರೋಪಿಗಳನ್ನಇದೀಗ ಒಂದು ವರ್ಷದ ಬಳಿಕ ಬಂಧಿಸಲಾಗಿದೆ.

ಚಾಮರಾಜನಗರ: ಮಡಹಳ್ಳಿ ಬಿಳಿಕಲ್ಲು ಗುಡ್ಡ ಕುಸಿತ ಪ್ರಕರಣ; ಒಂದು ವರ್ಷದ ಬಳಿಕ ಆರೋಪಿಗಳ ಬಂಧನ
ಬಿಳಿಕಲ್ಲು ಗುಡ್ಡ ಕುಸಿತ ಪ್ರಕರಣದ ಆರೋಪಿಗಳ ಬಂಧನ
ಕಿರಣ್ ಹನುಮಂತ್​ ಮಾದಾರ್
ಕಿರಣ್ ಹನುಮಂತ್​ ಮಾದಾರ್|

Updated on:Mar 29, 2023 | 12:25 PM

Share

ಚಾಮರಾಜನಗರ: ಜಿಲ್ಲೆಯ ಮಡಹಳ್ಳಿಯ ಬಿಳಿಕಲ್ಲು ಗುಡ್ಡಕುಸಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷದ ಬಳಿಕ ಇಬ್ಬರು ಆರೋಪಿಗಳನ್ನ ಬಂಧಿಸಲಾಗಿದೆ. ಗಣಿಗಾರಿಕೆ  ಉಪಗುತ್ತಿಗೆ ಪಡೆದಿದ್ದ ಕೇರಳ ಮೂಲದ ಹಕೀಂ ಹಾಗೂ ಆತನ ಸಹೋದರ ಮಹಮ್ಮದ್ ಇಲಾಲ್ ಬಂಧಿತ ಆರೋಪಿಗಳು. ಮಾರ್ಚ್​ 4, 2022 ರಂದು ಬಿಳಿಕಲ್ಲು ಗುಡ್ಡ ಕುಸಿತದಿಂದ ಮೂವರು ಉತ್ತರ ಪ್ರದೇಶದ ಗೋರಖ್​ ಪುರದ ಕಾರ್ಮಿಕರಾದ ಹಜೀಂ ಉಲ್ಲ, ಮಿರಾಜ್​ ಹಾಗೂ ಸರ್ಫ್​ರಾಜ್​ ಮಣ್ಣಿನಡಿಯಲ್ಲಿ ಸಿಲುಕಿ ಮೃತಪಟ್ಟಿದ್ದರು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಒಂದು ವರ್ಷದ ಬಳಿಕ ಪ್ರಮುಖ ಇಬ್ಬರು ಆರೋಪಿಗಳನ್ನು ಇದೀಗ ಪೊಲೀಸರು ಬಂಧಿಸಿದ್ದಾರೆ.

ಇನ್ನು ಗ್ರಾಮದ ಸರ್ವೇ ನಂ 192 ರಲ್ಲಿ 10 ಮಂದಿಗೆ ಗಣಿಗಾರಿಕೆಗೆ ಗುತ್ತಿಗೆ ನೀಡಲಾಗಿದೆ. ಗುಡ್ಡ ಕುಸಿತವಾದ ಗಣಿಯನ್ನ ಬೊಮ್ಮಲಾಪುರದ ಮಹೇಂದ್ರ ಎಂಬುವವರು ಗುತ್ತಿಗೆ ಪಡೆದಿದ್ದರು. ಬಳಿಕ ಅವರು ಕೇರಳದ ಹಕೀಂ ಹಾಗೂ ಆತನ ಸಹೋದರ ಮಹಮ್ಮದ್ ಇಲಾಲ್​ಗೆ ಉಪಗುತ್ತಿಗೆ ನೀಡಿದ್ದು, ಗಣಿಯು ಅರ್ಧಚಂದ್ರಾಕೃತಿಯಲ್ಲಿದ್ದು, 100 ಅಡಿಗೂ ಹೆಚ್ಚು ಆಳವಿತ್ತು, ಕೆಳಭಾಗದಲ್ಲಿ ಗಣಿಗಾರಿಕೆ ನಡೆಸಿ ಟೊಳ್ಳಾಗಿದ್ದರಿಂದ ಮೇಲ್ಭಾಗದಲ್ಲಿ ಭಾರ ಹೆಚ್ಚಾಗಿ ಗುಡ್ಡ ಕುಸಿದಿರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದರು. ಬಳಿಕ ಈ ಕೃತ್ಯಕ್ಕೆ ಕಾರಣರಾದ ಆರೋಪಿಗಳು ಘಟನೆ ನಡೆದ ಒಂದು ವರ್ಷದಿಂದ ಕೇರಳದ ಗುರುವಾಯೂರಿನಲ್ಲಿ ತಲೆ ಮರೆಸಿಕೊಂಡಿದ್ದರು. ಇದೀಗ ಗುಂಡ್ಲುಪೇಟೆ ಪೊಲೀಸರ ಬಲೆಗೆ ಬಿದ್ದಿದ್ದು, ಆರೋಪಿಗಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

Published On - 12:21 pm, Wed, 29 March 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ