ವರ್ಷದ ಮೊದಲ ಮಳೆಗೆ ಬಂಡೀಪುರ ಫುಲ್ ಗ್ರೀನ್​; ಕೆರೆ ಕಟ್ಟೆಗಳು ಭರ್ತಿ, ವನ್ಯ ಪ್ರಾಣಿಗಳು ​ಖುಷ್​

ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗದ ಹಿನ್ನಲೆ ತೀವ್ರ ಬರದಿಂದ ಬಂಡೀಪುರ ಕಾಡು ಸಂಪೂರ್ಣವಾಗಿ ಒಣಗಿ ಹೋಗಿತ್ತು. ಆದ್ರೆ, ಪೂರ್ವ ಮುಂಗಾರು ಮಳೆ ಬಿದ್ದ ಬೆನ್ನಲ್ಲೇ ಬಂಡೀಪುರ ಸಂಪೂರ್ಣ ಗ್ರೀನಿಶ್ ಆಗಿದ್ದು, ಕೆರೆ ಕಟ್ಟೆಗಳಿಗೆ ಜೀವ ಕಳೆ ಬಂದಿದೆ. ಕಾಡು ಪ್ರಾಣಿಗಳಿಗಿದ್ದ ಕಂಠಟ ಈಗ ದೂರವಾಗಿದೆ.

ವರ್ಷದ ಮೊದಲ ಮಳೆಗೆ ಬಂಡೀಪುರ ಫುಲ್ ಗ್ರೀನ್​; ಕೆರೆ ಕಟ್ಟೆಗಳು ಭರ್ತಿ, ವನ್ಯ ಪ್ರಾಣಿಗಳು ​ಖುಷ್​
ವರ್ಷದ ಮೊದಲ ಮಳೆಗೆ ಬಂಡೀಪುರ ಫುಲ್ ಗ್ರೀನ್
Follow us
| Updated By: ಕಿರಣ್ ಹನುಮಂತ್​ ಮಾದಾರ್

Updated on: May 16, 2024 | 10:38 PM

ಚಾಮರಾಜನಗರ, ಮೇ.16: ಚಾಮರಾಜನಗರ(Chamarajanagara) ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​(Bandipur Tiger Reserve Forest)ನಲ್ಲಿ. ಕಳೆದೊಂದು ವರ್ಷದಿಂದ ಸಕಾಲಕ್ಕೆ ಮಳೆಯಾಗಿರಲಿಲ್ಲ, ಕಾಡೆಲ್ಲ ಬಾಡಿ ಹೋಗಿತ್ತು. ಕೆರೆ-ಕಟ್ಟೆಗಳೆಲ್ಲ ಒಣಗಿ ಜೀವ ಜಲ ಬತ್ತಿ ಹೋಗಿದ್ದು, ಕಾಡು ಪ್ರಾಣಿಗಳಿಗೆ ಸಂಕಷ್ಟ ಎದುರಾಗಿತ್ತು. ಆದ್ರೆ, ಈ ವರ್ಷದ ಪೂರ್ವ ಮುಂಗಾರು ಎಂಟ್ರಿ ಕೊಟ್ಟಿದ್ದು, ಅಲ್ಲಲ್ಲಿ ಉತ್ತಮ ಮಳೆಯಾಗಿದೆ. ಈ ಹಿನ್ನಲೆ ಬಂಡೀಪುರ ಫುಲ್ ಗ್ರೀನಿಶ್ ಆಗಿ ಹಚ್ಚ ಹಸಿರಿನಿಂದ ಕಂಗೊಳಿಸುತ್ತಿದೆ.

ಇನ್ನು ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ನ ಡೀಪ್ ಫಾರೆಸ್ಟ್ ಒಳಗೆ 400 ಕ್ಕೂ ಅಧಿಕ ಕೆರೆ ಕಟ್ಟೆಗಳಿವೆ. ಕಳೆದ ವರ್ಷ ಭಾರಿ ಬರಗಾಲ ಎದುರಾಗಿದ್ದು, ಭಾಗಶಃ 90 ಪರ್ಸೆಂಟ್ ಕೆರೆ-ಕಟ್ಟೆಗಳು ಬತ್ತಿ ಹೋಗಿತ್ತು. ಇದ್ದ ಬೆರೆಳೆಣಿಕೆಯಷ್ಟು ಸೋಲಾರ್ ಬೋರ್ ನಿಂದ ಕೆರೆಗಳಿಗೆ ನೀರು ತುಂಬಿಸುವ ಕಾರ್ಯವನ್ನ ಅರಣ್ಯಾಧಿಕಾರಿಗಳು ಮಾಡಿದ್ದರು. ಆದ್ರೆ, ಅದು ಅಷ್ಟರ ಮಟ್ಟಿಗೆ ಯಶಸ್ವಿ ಕೂಡ ಆಗಿರಲಿಲ್ಲ.

ಇದನ್ನೂ ಓದಿ:ಚಾಮರಾಜನಗರ: ಕಾರ್ಯಾಚರಣೆಯಲ್ಲಿ ಸೆರೆ ಹಿಡಿಯಲಾಗಿದ್ದ ಆನೆ ಬಂಡೀಪುರದ ರಾಮಾಪುರ ಬಿಡಾರದಲ್ಲಿ ಸಾವು

ನೀರಿನ ಅಭಾವದಿಂದ ಕಾಡು ಪ್ರಾಣಿಗಳೆಲ್ಲವೂ ಕಬಿನಿ ಹಿನ್ನೀರಿನ ಕಡೆ, ಇತ್ತ ತೆಪ್ಪಕಾಡಿನೆಡೆಗೆ ನೀರನ್ನ ಅರಸಿ ಬಂಡೀಪುರ ತೊರೆದಿದ್ದವು. ಆದ್ರೆ, ವರ್ಷದ ಮೊದಲ ಮಳೆ ಉತ್ತಮವಾಗಿದ್ದು ಕೆರೆ ಕಟ್ಟೆಗಳು ತುಂಬುತ್ತಿದ್ದು ಜೀವ ಕಳೆ ಮರುಕಳಿಸಿದೆ. ಒಟ್ಟಾರೆ ಮೊದಲ ಮಳೆ ಉತ್ತಮವಾಗಿದ್ದು, ಮೂಲೆಹೊಳೆ ಸೇರಿದಂತೆ ತಮಿಳುನಾಡು ಹಾಗೂ ಕೇರಳ ಗಡಿಯಲ್ಲಿ ಉತ್ತಮ ಮಳೆ ಸುರಿಯುತ್ತಿದೆ. ಇದರಿಂದ ಕಾಡು ಹಚ್ಚ ಹಸಿರಾಗಿ ಕಂಗೊಳಿಸುತ್ತಿದ್ದು, ಪ್ರಾಣಿಗಳಿಗಿದ್ದ ನೀರಿನ ಸಮಸ್ಯೆ ದೂರವಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ತಾಜಾ ಸುದ್ದಿ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಉಕ್ಕಿ ಹರಿಯುತ್ತಿದೆ ನೇತ್ರಾವತಿ, ನದಿಪಾತ್ರದ ಜನ ಎಚ್ಚರವಹಿಸುವಂತೆ ಸೂಚನೆ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಮಳೆಯ ಅಬ್ಬರಕ್ಕೆ ಇತಿಹಾಸ ಪ್ರಸಿದ್ಧ ಮಧೂರು ದೇಗುಲ ಜಲಾವೃತ; ವಿಡಿಯೋ ನೋಡಿ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಉಕ್ಕಿ ಹರಿಯುತ್ತಿರುವ ಕುಮಾರಧಾರ ನದಿ, ನೀರಿಗಿಳಿಯದಂತೆ ಭಕ್ತರಿಗೆ ಎಚ್ಚರಿಕೆ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
ಬೆಂಗಳೂರು: ರಸ್ತೆ ಬದಿ ನಿಲ್ಲಿಸಿದ್ದ 8 ವಾಹನಗಳ ಮೇಲೆ ಕಲ್ಲು ಎಸೆದ ಯುವಕ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
‘ನಾನು ದರ್ಶನ್ ಪರ ನಿಲ್ಲುತ್ತೇನೆ, ದುಃಖದಲ್ಲೂ ಭಾಗಿ ಆಗಬೇಕು’; ಭಾವನಾ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ
ಒಪ್ಪೋ ಲೇಟೆಸ್ಟ್ ಸ್ಮಾರ್ಟ್​​​ಫೋನ್ A3 Pro ಮಾರುಕಟ್ಟೆಗೆ ಲಗ್ಗೆ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
Daily Devotional: ಮನೆ, ಆಸ್ತಿ ಖರೀದಿಸುವ ಮುನ್ನ ಈ ವಿಡಿಯೋ ನೋಡಿ
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ಕಳೆದುಕೊಂಡಿದ್ದರ ಕುರಿತು ಚಿಂತಿಸುತ್ತ ಭವಿಷ್ಯವನ್ನು ಹಾಳುಮಾಡಿಕೊಳ್ಳಬೇಡಿ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ದರ್ಶನ್​ ಪ್ರಕರಣದ ಬಗ್ಗೆ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟಿ ಭಾವನಾ
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!
ಆಟೋರಿಕ್ಷಾ ದರವೂ ಹೆಚ್ಚಳವಾಗಲಿದೆಯೇ? ರಾಮಲಿಂಗಾರೆಡ್ಡಿ ಹೇಳುವಂತೆ ಹೌದು!