AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bandipur Safari: ಬಂಡೀಪುರ ಸಫಾರಿ ದರ ಬಹುತೇಕ ಡಬಲ್, ಸೆಪ್ಟೆಂಬರ್ 1ರಿಂದ ಪ್ರವಾಸಿಗರಿಗೆ ಹೊಸ ಶುಲ್ಕ

Bandipur Safari Becomes Costlier: ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಸಫಾರಿ ಮಾಡಲು ಬಯಸುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಹೊಸ ದರಗಳನ್ನು ಪ್ರಕಟಿಸಿದೆ. ಸೆಪ್ಟೆಂಬರ್ 1ರಿಂದ ಬಸ್, ಜೀಪ್ ಸಫಾರಿ, ಖಾಸಗಿ ವಾಹನ ಹಾಗೂ ಕ್ಯಾಮೆರಾ ಬಳಕೆಗೆ ಪರಿಷ್ಕೃತ ಶುಲ್ಕ ಜಾರಿಯಾಗಲಿದೆ. ಪರಿಷ್ಕೃತ ದರ ವಿವರ ಇಲ್ಲಿದೆ.

Bandipur Safari: ಬಂಡೀಪುರ ಸಫಾರಿ ದರ ಬಹುತೇಕ ಡಬಲ್, ಸೆಪ್ಟೆಂಬರ್ 1ರಿಂದ ಪ್ರವಾಸಿಗರಿಗೆ ಹೊಸ ಶುಲ್ಕ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶImage Credit source: tv9
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on:Jul 27, 2026 | 10:33 AM

Share

ಮುಖ್ಯಾಂಶಗಳು

  • ಸೆಪ್ಟೆಂಬರ್ 1ರಿಂದ ಬಂಡೀಪುರ ಸಫಾರಿ ದರ ಪರಿಷ್ಕರಣೆ
  • ಬಸ್, ಜೀಪ್ ಸಫಾರಿ ದರದಲ್ಲಿ ಭಾರೀ ಏರಿಕೆ
  • ಕ್ಯಾಮೆರಾ ಬಳಕೆಗೆ ಹೊಸ ಶುಲ್ಕ, ವಾಹನ ಶುಲ್ಕವೂ ಹೆಚ್ಚಳ

ಚಾಮರಾಜನಗರ, ಜುಲೈ 27: 2023 ರಲ್ಲಿ ಪ್ರಧಾನಿ ನರೇಂದ್ರ ಮೋದಿ ಭೇಟಿ ನೀಡಿದ ಬಳಿಕ ದೇಶದ ಗಮನ ಸೆಳೆದಿರುವ ಕರ್ನಾಟಕದ ಪ್ರಸಿದ್ಧ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ (Bandipur Tiger Reserve) ಭೇಟಿ ನೀಡುವ ಪ್ರವಾಸಿಗರಿಗೆ ಅರಣ್ಯ ಇಲಾಖೆ ಶಾಕ್ ನೀಡಿದೆ. ಚಾಮರಾಜನಗರ (Chamarajanagar) ಜಿಲ್ಲೆಯಲ್ಲಿರುವ ಬಂಡೀಪುರದಲ್ಲಿ ಸೆಪ್ಟೆಂಬರ್ 1, 2026ರಿಂದ ಜಾರಿಗೆ ಬರುವಂತೆ ಸಫಾರಿ, ಖಾಸಗಿ ವಾಹನ, ಕ್ಯಾಮೆರಾ ಬಳಕೆ ಸೇರಿದಂತೆ ಹಲವು ಸೇವೆಗಳ ಶುಲ್ಕವನ್ನು ಪರಿಷ್ಕರಿಸಿ ಆದೇಶ ಹೊರಡಿಸಲಾಗಿದೆ. ಹೊಸ ದರಗಳ ಪ್ರಕಾರ ಹಲವು ಸೇವೆಗಳ ಶುಲ್ಕವು ಹಿಂದಿನದರಿಗಿಂತ ಗಣನೀಯವಾಗಿ ಏರಿಕೆಯಾಗಿದ್ದು, ಬಂಡೀಪುರ ಸಫಾರಿ ಪ್ರವಾಸ ಮಧ್ಯಮ ವರ್ಗದ ಕುಟುಂಬಗಳಿಗೆ ಮತ್ತಷ್ಟು ದುಬಾರಿಯಾಗಲಿದೆ.

2023ರ ಏಪ್ರಿಲ್ 9 ರಂದು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶಕ್ಕೆ ಭೇಟಿ ನೀಡಿದ್ದ ಪ್ರಧಾನಿ ಮೋದಿ ಸಫಾರಿಯನ್ನೂ ಮಾಡಿದ್ದರು. ಸುಮಾರು 2 ಗಂಟೆಗಳ ಕಾಲ ಅರಣ್ಯದಲ್ಲಿ ಸಂಚರಿಸಿದ್ದ ಮೋದಿ, 20 ಕಿಲೋಮೀಟರ್ ಸಫಾರಿ ಮಾಡಿದ್ದರು. ಮೋದಿ ಅವರ ಬಂಡೀಪುರ ಭೇಟಿಯ ಚಿತ್ರಗಳು ವೈರಲ್ ಆಗಿ ದೇಶದ ಗಮನ ಸೆಳೆದಿತ್ತು. ಆ ನಂತರದಲ್ಲಿ ಬಂಡೀಪುರಕ್ಕೆ ಬರುವ ಪ್ರವಾಸಿಗರ ಸಂಖ್ಯೆಯಲ್ಲಿಯೂ ಗಣನೀಯ ಏರಿಕೆಯಾಗಿತ್ತು. ಇದೀಗ ಅರಣ್ಯ ಇಲಾಖೆಯು ದರ ಏರಿಕೆ ಮೂಲಕ ಪ್ರವಾಸಿಗರ ಖುಷಿಗೆ ತಣ್ಣೀರೆರಚಿದೆ.

ಅರಣ್ಯ ಇಲಾಖೆಯ ಆದೇಶದ ಪ್ರಕಾರ, ಬಸ್ ಮತ್ತು ಜೀಪ್ ಸಫಾರಿಯ ಪ್ರವೇಶ ದರವನ್ನು ಹೆಚ್ಚಿಸಲಾಗಿದೆ. ಇದೇ ವೇಳೆ ಖಾಸಗಿ ವಾಹನಗಳ ಪ್ರವೇಶ ಶುಲ್ಕ, ಬೋಟ್ ಸೇವೆ, ಕ್ಯಾಮೆರಾ ಬಳಕೆ ಹಾಗೂ ಅರಣ್ಯ ಇಲಾಖೆಯ ಅತಿಥಿಗೃಹಗಳ ಶುಲ್ಕಗಳಲ್ಲಿಯೂ ಪರಿಷ್ಕರಣೆ ಮಾಡಲಾಗಿದೆ.

ಬಂಡೀಪುರ ಸಫಾರಿ: ಹೊಸ ದರ ಎಷ್ಟು?

  • ಅರಣ್ಯ ಇಲಾಖೆ ಬಸ್ ಸಫಾರಿಗೆ ವಯಸ್ಕರ ದರ ₹650 ರಿಂದ ₹1,000ಕ್ಕೆ ಏರಿಕೆ.
  • 12 ವರ್ಷದೊಳಗಿನ ಮಕ್ಕಳಿಗೆ ₹350ರಿಂದ ₹500ಕ್ಕೆ ಹೆಚ್ಚಳ.
  • ಅರಣ್ಯ ಇಲಾಖೆ ಜೀಪ್ ಸಫಾರಿಗೆ ವಯಸ್ಕರ ದರ ₹750ರಿಂದ ₹1,500ಕ್ಕೆ ಏರಿಕೆ.
  • ಮಕ್ಕಳಿಗೆ ₹750 ದರ ನಿಗದಿ ಮಾಡಲಾಗಿದೆ.
  • ಈ ದರಗಳಲ್ಲಿ ನೇಚರ್ ಗೈಡ್ ಶುಲ್ಕ ಸೇರಿರುತ್ತದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.

ಕ್ಯಾಮೆರಾ ಬಳಕೆಗೂ ಹೊಸ ನಿಯಮ

ಇದುವರೆಗೆ 200 ಮಿ.ಮೀ.ಗಿಂತ ಹೆಚ್ಚಿನ ಲೆನ್ಸ್ ಹೊಂದಿರುವ ಕ್ಯಾಮೆರಾಗಳಿಗೆ ಪ್ರತ್ಯೇಕ ಶುಲ್ಕ ಇರಲಿಲ್ಲ. ಹೊಸ ಆದೇಶದಂತೆ;

  • 200 ಮಿ.ಮೀ.ವರೆಗೆ ಲೆನ್ಸ್ ಹೊಂದಿರುವ ಕ್ಯಾಮೆರಾಗೆ ಶುಲ್ಕ ಇಲ್ಲ.
  • 200 ಮಿ.ಮೀ.ಗಿಂತ ಹೆಚ್ಚಿನ ಲೆನ್ಸ್ ಹೊಂದಿರುವ ಕ್ಯಾಮೆರಾಗಳಿಗೆ ₹1,500 ಜೊತೆಗೆ 18% GST ಪಾವತಿಸಬೇಕು.

ಖಾಸಗಿ ವಾಹನ ಪ್ರವೇಶ ಶುಲ್ಕವೂ ಹೆಚ್ಚಳ

ಅರಣ್ಯ ಪ್ರದೇಶಕ್ಕೆ ಪ್ರವೇಶಿಸುವ ಖಾಸಗಿ ವಾಹನಗಳಿಗೂ ಹೊಸ ದರ ನಿಗದಿಯಾಗಿದೆ.

  • ಕಾರು – ₹100 + 18% GST
  • ಲಘು ವಾಣಿಜ್ಯ ವಾಹನ (LCV) – ₹200 + 18% GST
  • ಬಸ್ – ₹300 + 18% GST
  • ಬಂಡೀಪುರ ಸಫಾರಿಗೆ ಪ್ರತ್ಯೇಕ ಪ್ರವೇಶ ದರ

ಬಂಡೀಪುರದಲ್ಲಿ ಸ್ವಂತ ಜೀಪ್, ಎಲ್‌ಸಿವಿ ಅಥವಾ ಬೋಟ್ ಮೂಲಕ ಅನುಮತಿ ಪಡೆದ ಪ್ರದೇಶಗಳಿಗೆ ಪ್ರವೇಶಿಸುವವರಿಗೂ ಹೊಸ ದರ ನಿಗದಿಯಾಗಿದೆ.

  • ವಯಸ್ಕರಿಗೆ – ₹600
  • ಮಕ್ಕಳಿಗೆ – ₹300
  • ಜೀಪ್ – ₹2,500
  • ಲಘು ವಾಣಿಜ್ಯ ವಾಹನ – ₹3,500
  • ಬೋಟ್ – ₹3,500

ಬಂಡೀಪುರ ಸಫಾರಿ: ಹೊಸ ದರ ಯಾವಾಗಿನಿಂದ ಜಾರಿ?

ಅರಣ್ಯ ಇಲಾಖೆಯ ಆದೇಶದ ಪ್ರಕಾರ 2026ರ ಸೆಪ್ಟೆಂಬರ್ 1ರಿಂದ ಪರಿಷ್ಕೃತ ದರಗಳು ಜಾರಿಗೆ ಬರಲಿವೆ. ಈ ಆದೇಶವು ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶ ಸೇರಿದಂತೆ ಸಂಬಂಧಿತ ಅರಣ್ಯ ಪ್ರವಾಸೋದ್ಯಮ ಸೇವೆಗಳಿಗೆ ಅನ್ವಯವಾಗಲಿದೆ.

ಇದನ್ನೂ ಓದಿ: ಮುಂಗಾರು ಮಳೆ ಕೊರತೆ: ಭರಚುಕ್ಕಿ ಜಲಪಾತ ಭಣಭಣ, ಪ್ರವಾಸಿಗರ ಸಂಖ್ಯೆಯಲ್ಲೂ ಇಳಿಮುಖ

ಹೊಸ ದರಗಳು ಪ್ರವಾಸೋದ್ಯಮದ ಗುಣಮಟ್ಟ ಹೆಚ್ಚಿಸುವ ಉದ್ದೇಶದಿಂದ ಜಾರಿಯಾಗಿದ್ದರೂ, ಏಕಾಏಕಿ ದರ ಏರಿಕೆಯಿಂದ ಸಾಮಾನ್ಯ ಹಾಗೂ ಮಧ್ಯಮ ವರ್ಗದ ಪ್ರವಾಸಿಗರ ಮೇಲೆ ಹೆಚ್ಚುವರಿ ಆರ್ಥಿಕ ಹೊರೆ ಬೀಳಲಿದೆ ಎಂಬ ಅಭಿಪ್ರಾಯಗಳು ಕೇಳಿಬರುತ್ತಿವೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:56 am, Mon, 27 July 26

Follow Us
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಬನ್ನೇರುಘಟ್ಟ ರಸ್ತೆಯಲ್ಲಿ ಹೈಡ್ರಾಮಾ: ಕಾರು ಚಾಲಕರ ನಡುವೆ ಇಲಿ-ಬೆಕ್ಕಿನಾಟ!
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಶುಭ ಫಲಗಳ ನೀಡುವ ಮಂಗಳ ತ್ರಯೋದಶಿ ಇಂದು: 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
‘ದೇವಿ’ ಸಿನಿಮಾ ಒಪ್ಪಿಕೊಳ್ಳಲು ಕಾರಣವೇನು? ವಿವರಿಸಿದ ನಟಿ ಭವ್ಯಾ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
NEET ಹೋರಾಟದ ವಿಡಿಯೋ ಅಲ್ಲ, ಬಿಹಾರ ಅಪಘಾತದ್ದು: ಸಿಟಿ ರವಿ ಏನಂದ್ರು ನೋಡಿ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಹೀರೋ ಆಗಬೇಕೆಂಬ ಕನಸು ಈಡೇರಿಸಿಕೊಂಡ ರೈತ ಚೇತನ್: ವಿಡಿಯೋ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಬಾಗಲಕೋಟೆಯಲ್ಲಿ ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆ
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಪರೀಕ್ಷಾ ವ್ಯವಸ್ಥೆ ಸುಧಾರಣೆಗೆ ದಿಟ್ಟ ನಿರ್ಧಾರ ಕೈಗೊಂಡ ಮೋದಿ, ಏನದು?
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಇವಾನ್ಸ್ ಹಿಡಿದ ಅತ್ಯದ್ಭುತ ಕ್ಯಾಚ್​​ಗೆ ಶತಕ ವಂಚಿತರಾದ ವೈಭವ್
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
ಯುವಕರೊಂದಿಗೆ ಮೋದಿ ಸಂವಾದ ಹೇಗಿತ್ತು? ವಿದ್ಯಾರ್ಥಿಗಳು ಹೇಳಿದ್ದೇನು?
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ
102 ಮೀ. ಉದ್ದದ ಸಿಕ್ಸರ್ ಬಾರಿಸಿದ ವೈಭವ್; ವಿಡಿಯೋ