AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ಗೆ ಎದುರಾಗಲಿದ್ಯ ಭೀಕರ ಕ್ಷಾಮ? 450 ಕೆರೆಗಳ ಪೈಕಿ 150 ಕೆರೆಗಳಲ್ಲಿ ನೀರು ಭಾಗಶಃ ಖಾಲಿ ಖಾಲಿ!

ಪ್ರಾಣಿ-ಪಕ್ಷಿಗಳು, ವನ್ಯ ಮೃಗಗಳು ಎಲ್ಲವು ಕುಡಿಯುವ ನೀರಿಗಾಗಿ ಈ 450 ಕೆರೆಗಳನ್ನೇ ಆಶ್ರಯಿಸಿಕೊಂಡಿದೆ. ಈ ಪೈಕಿ ಭಾಗಶಃ 150 ಕೆರೆಗಳ ನೀರು ಖಾಲಿಯಾಗಿರುವುದು, ಇದೀಗ ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಈಗ ಕೇವಲ ಸೋಲಾರ್ ಪಂಪ್ ಸೆಟ್​ಗಳಿಂದ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಆದ್ರೆ, ಇದು ಕೇವಲ 2 ತಿಂಗಳಿಗಷ್ಟೇ ಸಾದ್ಯವೆಂದು ಬಲ್ಲ ಮೂಲಗಳು ಹೇಳುತ್ತಿದೆ.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ಗೆ ಎದುರಾಗಲಿದ್ಯ ಭೀಕರ ಕ್ಷಾಮ? 450 ಕೆರೆಗಳ ಪೈಕಿ 150 ಕೆರೆಗಳಲ್ಲಿ ನೀರು ಭಾಗಶಃ ಖಾಲಿ ಖಾಲಿ!
ಬಂಡೀಪುರ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 07, 2023 | 5:37 PM

Share

ಚಾಮರಾಜನಗರ, ಅ.07: ಬರಗಾಲದ ಎಫೆಕ್ಟ್ ಕೇವಲ ಊರು ಕೇರಿಗಳಿಗಷ್ಟೇ ಸೀಮಿತವಾಗಿಲ್ಲ, ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೂ ಈಗ ಬರದ ಎಫೆಕ್ಟ್ ತಟ್ಟಿದೆ. ಮಳೆ ಆಗದೆ ಹೋದರೆ, ಇನ್ನೆರೆಡು ತಿಂಗಳಲ್ಲಿ ಪ್ರಾಣಿ-ಪಕ್ಷಿಗಳಿಗೆ ಕುಡಿಯಲು ನೀರು ಸಿಗುವುದಿಲ್ಲವೆಂಬ ಸ್ಪೋಟಕ ಸತ್ಯ ಈಗ ಆಚೆ ಬಂದಿದೆ. ಹೌದು, ಚಾಮರಾಜನಗರ(Chamarajanagar)ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್(Bandipur Tiger Reserve Forest)​, ಭೀಕರ ಜಲಕ್ಷಾಮಕ್ಕೆ ಸಿಲುಕುತ್ತಾ ಎಂಬ ಆತಂಕವೀಗ ಎಲ್ಲರಲ್ಲಿ ಎದುರಾಗಿದೆ. ಅದಕ್ಕೆ ಕಾರಣ ಕಾಡಿನಲ್ಲಿರುವ 450 ಕೆರೆಗಳ ಪೈಕಿ 150 ಕ್ಕೂ ಹೆಚ್ಚು ಕೆರೆಗಳ ನೀರು ಭಾಗಶಃ ಖಾಲಿಯಾಗಿದೆ.

ಮೂಲಗಳ ಪ್ರಕಾರ ಕೇವಲ 2 ತಿಂಗಳಿಗಷ್ಟೇ ಪ್ರಾಣಿಗಳಿಗೆ ನೀರು

ಇಲ್ಲಿನ ಪ್ರಾಣಿ-ಪಕ್ಷಿಗಳು, ವನ್ಯ ಮೃಗಗಳು ಎಲ್ಲವು ಕುಡಿಯುವ ನೀರಿಗಾಗಿ ಈ 450 ಕೆರೆಗಳನ್ನೇ ಆಶ್ರಯಿಸಿಕೊಂಡಿದೆ. ಈ ಪೈಕಿ ಭಾಗಶಃ 150 ಕೆರೆಗಳ ನೀರು ಖಾಲಿಯಾಗಿರುವುದು, ಇದೀಗ ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಈಗ ಕೇವಲ ಸೋಲಾರ್ ಪಂಪ್ ಸೆಟ್​ಗಳಿಂದ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಆದ್ರೆ, ಇದು ಕೇವಲ 2 ತಿಂಗಳಿಗಷ್ಟೇ ಸಾದ್ಯವೆಂದು ಬಲ್ಲ ಮೂಲಗಳು ಹೇಳುತ್ತಿದೆ. ಒಂದು ವೇಳೆ ಈ ಎರಡು ತಿಂಗಳಲ್ಲಿ ಮಳೆ ಆಗದೆ ಹೋದ್ರೆ, ವನ್ಯ ಮೃಗಗಳೆಲ್ಲ ಆಹಾರ ನೀರು ಅರಸಿ ನಾಡಿಗೆ ಲಗ್ಗೆ ಇಡುವ ಸಾಧ್ಯತೆಯನ್ನು ತಳ್ಳುಹಾಕುವಂತಿಲ್ಲ.

ಇದನ್ನೂ ಓದಿ:ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು

ಮೊದಲೇ ಅತಿ ಹೆಚ್ಚು ಮಾನವ ಹಾಗೂ ಕಾಡುಪ್ರಾಣಿಗಳ ಸಂಘರ್ಷಕ್ಕೆ ಕಾರಣವಾದ ಜಿಲ್ಲೆ ಎಂಬ ಅಪಖ್ಯಾತಿ ಬೇರೆ ಚಾಮರಾಜನಗರಕ್ಕೆ ಇದ್ದು, ಒಂದು ವೇಳೆ ಮಳೆ ಆಗದೆ ಹೋದರೆ, ಈ ಸಂಘರ್ಷ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳಿವೆ. ಹಾಗಾಗಿ ಆದಷ್ಟು ಬೋರ್​ವೆಲ್​​ಗಳ ನೀರನ್ನೇ ಹೆಚ್ಚು ಬಿಡುವ ಯೋಚನೆಯನ್ನು ಅರಣ್ಯ ಇಲಾಖಾ ಸಿಬ್ಬಂದಿ ಸಹ ಯೋಚಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ಟೆಸ್ಟ್ ಪಂದ್ಯಕ್ಕಾಗಿ ಅಭ್ಯಾಸ ಆರಂಭಿಸಿದ ಟೀಂ ಇಂಡಿಯಾ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ವಿಧಾನಸೌಧದ ಮೆಟ್ಟಿಲುಗಳಿಗೆ ಸಿಎಂ ಡಿಕೆಶಿಯಿಂದ ದೀರ್ಘದಂಡ ನಮಸ್ಕಾರ
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಮುಂದಿನ ಪೀಳಿಗೆ ಕೂಡ ಡಿಕೆಶಿ ಸಾಧನೆ ಬಗ್ಗೆ ಮಾತಾಡುವಂತೆ ಕೆಲಸ ಆಗಲಿ: ರಮೇಶ್
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಡಿಕೆ ಶಿವಕುಮಾರ್ ಪದಗ್ರಹಣದ ಬಗ್ಗೆ ಶಿವರಾಜ್ ಕುಮಾರ್ ಮಾತು: ವಿಡಿಯೋ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ