AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ಗೆ ಎದುರಾಗಲಿದ್ಯ ಭೀಕರ ಕ್ಷಾಮ? 450 ಕೆರೆಗಳ ಪೈಕಿ 150 ಕೆರೆಗಳಲ್ಲಿ ನೀರು ಭಾಗಶಃ ಖಾಲಿ ಖಾಲಿ!

ಪ್ರಾಣಿ-ಪಕ್ಷಿಗಳು, ವನ್ಯ ಮೃಗಗಳು ಎಲ್ಲವು ಕುಡಿಯುವ ನೀರಿಗಾಗಿ ಈ 450 ಕೆರೆಗಳನ್ನೇ ಆಶ್ರಯಿಸಿಕೊಂಡಿದೆ. ಈ ಪೈಕಿ ಭಾಗಶಃ 150 ಕೆರೆಗಳ ನೀರು ಖಾಲಿಯಾಗಿರುವುದು, ಇದೀಗ ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಈಗ ಕೇವಲ ಸೋಲಾರ್ ಪಂಪ್ ಸೆಟ್​ಗಳಿಂದ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಆದ್ರೆ, ಇದು ಕೇವಲ 2 ತಿಂಗಳಿಗಷ್ಟೇ ಸಾದ್ಯವೆಂದು ಬಲ್ಲ ಮೂಲಗಳು ಹೇಳುತ್ತಿದೆ.

ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್​ಗೆ ಎದುರಾಗಲಿದ್ಯ ಭೀಕರ ಕ್ಷಾಮ? 450 ಕೆರೆಗಳ ಪೈಕಿ 150 ಕೆರೆಗಳಲ್ಲಿ ನೀರು ಭಾಗಶಃ ಖಾಲಿ ಖಾಲಿ!
ಬಂಡೀಪುರ
ಸೂರಜ್ ಪ್ರಸಾದ್ ಎಸ್.ಎನ್
| Edited By: ಕಿರಣ್ ಹನುಮಂತ್​ ಮಾದಾರ್|

Updated on: Oct 07, 2023 | 5:37 PM

Share

ಚಾಮರಾಜನಗರ, ಅ.07: ಬರಗಾಲದ ಎಫೆಕ್ಟ್ ಕೇವಲ ಊರು ಕೇರಿಗಳಿಗಷ್ಟೇ ಸೀಮಿತವಾಗಿಲ್ಲ, ಬಂಡಿಪುರ ಹುಲಿ ಸಂರಕ್ಷಿತ ಪ್ರದೇಶಕ್ಕೂ ಈಗ ಬರದ ಎಫೆಕ್ಟ್ ತಟ್ಟಿದೆ. ಮಳೆ ಆಗದೆ ಹೋದರೆ, ಇನ್ನೆರೆಡು ತಿಂಗಳಲ್ಲಿ ಪ್ರಾಣಿ-ಪಕ್ಷಿಗಳಿಗೆ ಕುಡಿಯಲು ನೀರು ಸಿಗುವುದಿಲ್ಲವೆಂಬ ಸ್ಪೋಟಕ ಸತ್ಯ ಈಗ ಆಚೆ ಬಂದಿದೆ. ಹೌದು, ಚಾಮರಾಜನಗರ(Chamarajanagar)ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಟೈಗರ್ ರಿಸರ್ವ್ ಫಾರೆಸ್ಟ್(Bandipur Tiger Reserve Forest)​, ಭೀಕರ ಜಲಕ್ಷಾಮಕ್ಕೆ ಸಿಲುಕುತ್ತಾ ಎಂಬ ಆತಂಕವೀಗ ಎಲ್ಲರಲ್ಲಿ ಎದುರಾಗಿದೆ. ಅದಕ್ಕೆ ಕಾರಣ ಕಾಡಿನಲ್ಲಿರುವ 450 ಕೆರೆಗಳ ಪೈಕಿ 150 ಕ್ಕೂ ಹೆಚ್ಚು ಕೆರೆಗಳ ನೀರು ಭಾಗಶಃ ಖಾಲಿಯಾಗಿದೆ.

ಮೂಲಗಳ ಪ್ರಕಾರ ಕೇವಲ 2 ತಿಂಗಳಿಗಷ್ಟೇ ಪ್ರಾಣಿಗಳಿಗೆ ನೀರು

ಇಲ್ಲಿನ ಪ್ರಾಣಿ-ಪಕ್ಷಿಗಳು, ವನ್ಯ ಮೃಗಗಳು ಎಲ್ಲವು ಕುಡಿಯುವ ನೀರಿಗಾಗಿ ಈ 450 ಕೆರೆಗಳನ್ನೇ ಆಶ್ರಯಿಸಿಕೊಂಡಿದೆ. ಈ ಪೈಕಿ ಭಾಗಶಃ 150 ಕೆರೆಗಳ ನೀರು ಖಾಲಿಯಾಗಿರುವುದು, ಇದೀಗ ಆತಂಕಕ್ಕೆ ಎಡೆಮಾಡಿ ಕೊಟ್ಟಿದೆ. ಈಗ ಕೇವಲ ಸೋಲಾರ್ ಪಂಪ್ ಸೆಟ್​ಗಳಿಂದ ಕೆರೆಗಳಿಗೆ ನೀರು ತುಂಬಿಸಲಾಗುತ್ತಿದೆ. ಆದ್ರೆ, ಇದು ಕೇವಲ 2 ತಿಂಗಳಿಗಷ್ಟೇ ಸಾದ್ಯವೆಂದು ಬಲ್ಲ ಮೂಲಗಳು ಹೇಳುತ್ತಿದೆ. ಒಂದು ವೇಳೆ ಈ ಎರಡು ತಿಂಗಳಲ್ಲಿ ಮಳೆ ಆಗದೆ ಹೋದ್ರೆ, ವನ್ಯ ಮೃಗಗಳೆಲ್ಲ ಆಹಾರ ನೀರು ಅರಸಿ ನಾಡಿಗೆ ಲಗ್ಗೆ ಇಡುವ ಸಾಧ್ಯತೆಯನ್ನು ತಳ್ಳುಹಾಕುವಂತಿಲ್ಲ.

ಇದನ್ನೂ ಓದಿ:ಚಿತ್ರದುರ್ಗದಲ್ಲಿ ಭೀಕರ ಬರಗಾಲ: ಬರ ಪೀಡಿತ ಜಿಲ್ಲೆ ಎಂದು ಘೋಷಿಸಿ ಸೈಲೆಂಟ್ ಆದ ಸರ್ಕಾರ, ಆಕ್ರೋಶಗೊಂಡ ರೈತರು

ಮೊದಲೇ ಅತಿ ಹೆಚ್ಚು ಮಾನವ ಹಾಗೂ ಕಾಡುಪ್ರಾಣಿಗಳ ಸಂಘರ್ಷಕ್ಕೆ ಕಾರಣವಾದ ಜಿಲ್ಲೆ ಎಂಬ ಅಪಖ್ಯಾತಿ ಬೇರೆ ಚಾಮರಾಜನಗರಕ್ಕೆ ಇದ್ದು, ಒಂದು ವೇಳೆ ಮಳೆ ಆಗದೆ ಹೋದರೆ, ಈ ಸಂಘರ್ಷ ಮತ್ತಷ್ಟು ಜಾಸ್ತಿಯಾಗುವ ಸಾಧ್ಯತೆಗಳಿವೆ. ಹಾಗಾಗಿ ಆದಷ್ಟು ಬೋರ್​ವೆಲ್​​ಗಳ ನೀರನ್ನೇ ಹೆಚ್ಚು ಬಿಡುವ ಯೋಚನೆಯನ್ನು ಅರಣ್ಯ ಇಲಾಖಾ ಸಿಬ್ಬಂದಿ ಸಹ ಯೋಚಿಸುತ್ತಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಈ ರಾಶಿಯವರಿಗೆ ಧನಯೋಗ!
ಇಂದು ಈ ರಾಶಿಯವರಿಗೆ ಧನಯೋಗ!
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ಕರ್ನಾಟಕದ ಐವರು ಸಾಧಕರಿಗೆ ಪದ್ಮ ಪ್ರಶಸ್ತಿ ಪ್ರದಾನ ಮಾಡಿದ ರಾಷ್ಟ್ರಪತಿ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
ರಾಷ್ಟ್ರಪತಿ ಭವನದಲ್ಲಿ ರೋಹಿತ್ ಶರ್ಮಾಗೆ ಪದ್ಮಶ್ರೀ ಪ್ರಶಸ್ತಿ ಪ್ರದಾನ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
‘ಪದ್ಮಭೂಷಣ’ ಸ್ವೀಕರಿಸಿ ಪ್ರಧಾನಿ ಮೋದಿ ಭೇಟಿ ಮಾಡಿದ ಮಲಯಾಳಂ ನಟ ಮಮ್ಮುಟ್ಟಿ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ಖಾಸಗಿ ಏಜೆನ್ಸಿ ಧೋರಣೆ ಖಂಡಿಸಿ ಹಾಸನದಲ್ಲಿ ಗುತ್ತಿಗೆ ಕಾರ್ಮಿಕರ ಪ್ರತಿಭಟನೆ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ತಾಂತ್ರಿಕ ದೋಷದಿಂದ ನೇರಳೆ ಮಾರ್ಗ ಮೆಟ್ರೋ ಸಂಚಾರ ಬಂದ್- ಪ್ರಯಾಣಿಕರ ಪರದಾಟ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ