AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!

ಚಾಮರಾಜನಗರ ಜಿಲ್ಲೆಯ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ ಮದ್ದೂರು ವಲಯದಲ್ಲಿ ಭದ್ರತಾ ಲೋಪ ಎದ್ದು ಕಂಡಿದೆ. ಸಾರ್ವಜನಿಕರಿಗೆ ನಿರ್ಬಂಧವಿರುವ ಕಳ್ಳಬೇಟೆ ತಡೆ ಶಿಬಿರದ (APC) ಮುಂಭಾಗದಲ್ಲೇ ಗುಂಡ್ಲುಪೇಟೆಯ ರೌಡಿ ಶೀಟರ್ ಸತೀಶ್ ಮತ್ತು ಆತನ ಸಂಗಡಿಗರು ಮದ್ಯದ ಪಾರ್ಟಿ ನಡೆಸಿದ್ದಾರೆ. ಸಾಮಾನ್ಯ ರೈತರಿಗೆ ದಂಡ ಹಾಕುವ ಅರಣ್ಯ ಇಲಾಖೆ, ಕ್ರಿಮಿನಲ್‌ಗಳ ಈ ಕೃತ್ಯಕ್ಕೆ ಮೂಕಪ್ರೇಕ್ಷಕನಾಗಿ ನಿಂತಿರುವುದು ಸಾರ್ವಜನಿಕರ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ.

ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ರೌಡಿ ಶೀಟರ್ ಎಣ್ಣೆ ಪಾರ್ಟಿ!
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jun 05, 2026 | 8:54 AM

Share

ಚಾಮರಾಜನಗರ, ಜೂನ್ 05: ಸಾರ್ವಜನಿಕರಿಗೆ ಕಟ್ಟುನಿಟ್ಟಿನ ನಿಷೇಧವಿರುವ ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದ (Bandipur Tiger Reserve) ದಟ್ಟ ಕಾನನದೊಳಗೆ ರೌಡಿ ಶೀಟರ್ ಒಬ್ಬ ತನ್ನ ಸಂಗಡಿಗರೊಂದಿಗೆ ರಾಜಾರೋಷವಾಗಿ ‘ಎಣ್ಣೆ ಪಾರ್ಟಿ’ ನಡೆಸಿರುವ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಅರಣ್ಯ ಇಲಾಖೆಯ ಅತ್ಯಂತ ಸುರಕ್ಷಿತ ಮತ್ತು ನಿರ್ಬಂಧಿತ ವಲಯ ಎಂದೇ ಪರಿಗಣಿಸಲಾಗುವ ಕಳ್ಳಬೇಟೆ ತಡೆ ಶಿಬಿರದ (APC Camp) ಮುಂಭಾಗದಲ್ಲೇ ಈ ಮೋಜು-ಮಸ್ತಿ ನಡೆದಿದ್ದು, ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ.

ಮುಖ್ಯಾಂಶಗಳು

  • ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದೊಳಗೆ ರೌಡಿ ಶೀಟರ್‌ನಿಂದ ರಾಜಾರೋಷವಾಗಿ ಎಣ್ಣೆ ಪಾರ್ಟಿ.
  • ಕಳ್ಳಬೇಟೆ ತಡೆ ಶಿಬಿರದ ಮುಂದೆಯೇ ಮೋಜು; ಅರಣ್ಯ ಇಲಾಖೆಯ ಭದ್ರತಾ ವೈಫಲ್ಯ.
  • ಬಡ ರೈತರಿಗೆ ಕೇಸ್ ಹಾಕುವ ಅಧಿಕಾರಿಗಳು ಕ್ರಿಮಿನಲ್‌ಗಳಿಗೆ ಸಾಥ್ ನೀಡಿದ್ದು ಆಕ್ರೋಶ.

ದಟ್ಟಾರಣ್ಯದಲ್ಲಿ ರೌಡಿಗಳ ದಿಲ್ದಾರ್ ಪಾರ್ಟಿ!

ಗುಂಡ್ಲುಪೇಟೆ ಪೊಲೀಸ್ ಠಾಣೆಯ ರೌಡಿ ಶೀಟರ್ ಸತೀಶ್ ಎಂಬಾತ ತನ್ನ ಸಂಗಡಿಗರಾದ ಗಂಗಾಧರ್ ಮತ್ತು ಚೇತನ್ ಎಂಬುವವರೊಂದಿಗೆ ಸೇರಿ ಬಂಡೀಪುರ ಅರಣ್ಯದ ಮದ್ದೂರು ವಲಯದ ಹುಲಿಕಟ್ಟೆ ಎಂಬಲ್ಲಿ ಈ ಜಾಲಸಾಬ್ ಪಾರ್ಟಿ ಮಾಡಿದ್ದಾನೆ. ವನ್ಯಜೀವಿಗಳ ಮುಕ್ತ ಸಂಚಾರವಿರುವ, ಸದಾ ಹದ್ದಿನ ಕಣ್ಣಿಡಬೇಕಾದ ಆಂಟಿ ಪೋಚಿಂಗ್ ಕ್ಯಾಂಪ್ ಮುಂಭಾಗದಲ್ಲೇ ಮದ್ಯದ ಬಾಟಲಿಗಳನ್ನು ಇಟ್ಟುಕೊಂಡು ಮೋಜು ಮಾಡಿದ್ದಾರೆ. ರೌಡಿ ಶೀಟರ್‌ಗಳು ಕಾಡಿನೊಳಗೆ ಮದ್ಯದ ಪಾರ್ಟಿ ಮಾಡುತ್ತಿರುವ ಎಕ್ಸ್‌ಕ್ಲೂಸಿವ್ ಫೋಟೋಗಳು ಈಗ ಲಭ್ಯವಾಗಿವೆ. ಈ ಮದ್ದೂರು ವಲಯವು ಆರ್‌ಎಫ್‌ಒ (RFO) ಪುನೀತ್ ಅವರ ಉಸ್ತುವಾರಿಯಲ್ಲಿದ್ದು, ಅರಣ್ಯ ಇಲಾಖೆಯ ಕಾರ್ಯವೈಖರಿಯನ್ನು ಪ್ರಶ್ನಿಸುವಂತೆ ಮಾಡಿವೆ.

ಅರಣ್ಯ ಇಲಾಖೆಯ ಸಂಪೂರ್ಣ ವೈಫಲ್ಯ

ಈ ಘಟನೆಯು ಬಂಡೀಪುರ ಅರಣ್ಯ ಇಲಾಖೆಯ ಸಂಪೂರ್ಣ ಭದ್ರತಾ ವೈಫಲ್ಯಕ್ಕೆ ಹಿಡಿದ ಕೈಗನ್ನಡಿಯಾಗಿದೆ. ಅತ್ಯಂತ ಸೂಕ್ಷ್ಮ ಪ್ರದೇಶಕ್ಕೆ ಸಾರ್ವಜನಿಕರಿಗೆ ಪ್ರವೇಶ ಇರುವುದಿಲ್ಲ. ಇಂತಹ ಪರಿಸ್ಥಿತಿಯಲ್ಲಿ, ಮಾರಕಾಸ್ತ್ರಗಳನ್ನು ಹಿಡಿಯುವ ರೌಡಿ ಶೀಟರ್‌ಗೆ ದಟ್ಟ ಕಾನನದೊಳಗಿನ ಕಳ್ಳಬೇಟೆ ಶಿಬಿರದವರೆಗೂ ಹೋಗಲು ದಾರಿ ಮಾಡಿಕೊಟ್ಟವರು ಯಾರು? ಅರಣ್ಯ ಸಿಬ್ಬಂದಿಯ ಆಶೀರ್ವಾದ ಅಥವಾ ಸಹಕಾರವಿಲ್ಲದೆ ಇಂತಹ ಕೃತ್ಯ ನಡೆಯಲು ಹೇಗೆ ಸಾಧ್ಯ ಎಂಬ ಪ್ರಶ್ನೆ ಮೂಡಿದೆ.

ಕಾಡಿನಲ್ಲಿ ಒಣಗಿ ಬಿದ್ದ ಸೌದೆಯನ್ನು ತರಲು ಹೋಗುವ ಬಡ ರೈತರು ಮತ್ತು ಬುಡಕಟ್ಟು ಜನರನ್ನು ಕಂಡರೆ ಮುಲಾಜಿಲ್ಲದೆ ಕೇಸ್ ದಾಖಲಿಸುವ ಅರಣ್ಯ ಸಿಬ್ಬಂದಿ, ಇಂತಹ ಕ್ರಿಮಿನಲ್ ಹಿನ್ನೆಲೆಯುಳ್ಳವರು ಕಾಡಿನ ನಿಯಮಗಳನ್ನು ಗಾಳಿಗೆ ತೂರಿ ಗುಂಡಿನ ಪಾರ್ಟಿ ಮಾಡುತ್ತಿದ್ದರೂ ಕಣ್ಮುಚ್ಚಿ ಕುಳಿತಿರುವುದು ಏಕೆ? ಇಷ್ಟೆಲ್ಲಾ ಸಾಕ್ಷ್ಯಾಧಾರಗಳು ಸಿಕ್ಕಿದ್ದರೂ ಉನ್ನತ ಅಧಿಕಾರಿಗಳು ಯಾವುದೇ ಕ್ರಮ ಕೈಗೊಳ್ಳದಿರುವುದು ಇಲಾಖೆಯೊಳಗಿನ ಶಾಮೀಲಾತಿಯನ್ನು ಶಂಕಿಸುವಂತೆ ಮಾಡಿದೆ. ಬಂಡೀಪುರದಂತಹ ಸೂಕ್ಷ್ಮ ವಲಯದ ಭದ್ರತೆಯ ಹಿತದೃಷ್ಟಿಯಿಂದ ತಕ್ಷಣವೇ ತನಿಖೆ ನಡೆಸಿ ತಪ್ಪಿತಸ್ಥ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕಿದೆ.

ಕರ್ನಾಟಕದ ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Follow Us
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಸಾಯುವುದಕ್ಕೂ ಮೊದಲು ಕೃಷಿ ತಾಪಂಡಗೆ ವೈಶಾಕ್ ಕಳುಹಿಸಿದ ಸಂದೇಶ ಏನು?
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಪಠ್ಯದಲ್ಲಿ ಕೇಸರೀಕರಣ ವಿವಾದ: ಬಿಜೆಪಿ ವಿರುದ್ಧ ಮಧು ಬಂಗಾರಪ್ಪ ಕಿಡಿ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
ಕಲ್ಲಯ್ಯಜ್ಜ ಶ್ರೀಗಳಿಗೆ ಮಠದ ಟ್ರಸ್ಟಿಗಳಿಂದಲೇ ಜೀವ ಬೆದರಿಕೆ ಆರೋಪ
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
‘11 ವರ್ಷಗಳಾದ್ರೂ ಕಲ್ಯಾಣ ಕರ್ನಾಟಕದಲ್ಲಿ ಶಿಕ್ಷಕರ ನೇಮಕಾತಿ ಇಲ್ಲ’
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಐವರು ಜಲಸಮಾಧಿ ಕೇಸ್​: ಘಟನೆಯಲ್ಲಿ ಬದುಕುಳಿದ ಏಕೈಕ ವ್ಯಕ್ತಿ ಹೇಳಿದ್ದೇನು?
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಜಾರಕಿಹೊಳಿ ಬಾಮೈದನ ಮನೆ ಮೇಲೆ ಇಡಿ ದಾಳಿ: 24 ಗಂಟೆ ಕಳೆದ್ರೂ ಮುಗಿಯದ ಶೋಧ
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ಡೆಡ್ ಸ್ಟೋರೇಜ್​ನತ್ತ ಕಬಿನಿ ಡ್ಯಾಂ: ಬೆಂಗಳೂರಿಗೆ KRS​ನಿಂದ ಮಾತ್ರ ನೀರು
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ನಿರ್ಜಲ ಏಕಾದಶಿಯ ದಿನ ಯಾರಿಗೆ ಒಲಿಯಲಿದೆ ಅದೃಷ್ಟ?
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಹೊಸಬರ ‘ಲವ್ ಸೀಸನ್ಸ್’ ಸಿನಿಮಾ ತಂಡಕ್ಕೆ ಧೈರ್ಯ ತುಂಬಿದ ಜಯತೀರ್ಥ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ
ಟಿ20 ಸರಣಿಗಾಗಿ ಐರ್ಲೆಂಡ್ ತಲುಪಿದ ಟೀಂ ಇಂಡಿಯಾ