AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಜಾತಿ ಪ್ರಮಾಣಪತ್ರ ನೀಡುವವರೆಗೂ ಮಕ್ಕಳನ್ನು ಶಾಲೆಗೆ ಕಳಿಸಲ್ಲ; ಭೋವಿ ಜನಾಂಗದಿಂದ ಸಿಎಂಗೆ ಪತ್ರ

ವಡ್ಡ ಅಥವಾ ಭೋವಿ ಜಾತಿಯ ಪ್ರಮಾಣ ಪತ್ರ ನೀಡಿದರಷ್ಟೇ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಎಂದು ಹೇಳಿದ್ದಾರೆ. ಸದ್ಯ ಕಳೆದ ಐದು ದಿನಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸದೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಚಾಮರಾಜನಗರ: ಜಾತಿ ಪ್ರಮಾಣಪತ್ರ ನೀಡುವವರೆಗೂ ಮಕ್ಕಳನ್ನು ಶಾಲೆಗೆ ಕಳಿಸಲ್ಲ; ಭೋವಿ ಜನಾಂಗದಿಂದ ಸಿಎಂಗೆ ಪತ್ರ
TV9 Web
| Edited By: |

Updated on: Jan 28, 2022 | 3:08 PM

Share

ಚಾಮರಾಜನಗರ: ಜಾತಿ ಪ್ರಮಾಣ ಪತ್ರ ನೀಡುವವರೆಗೂ ಮಕ್ಕಳನ್ನು ಶಾಲೆಗೆ ಕಳಿಸಲ್ಲ ಎಂದು ಇಲ್ಲಿನ ಕೊಳ್ಳೆಗಾಲ ತಾಲೂಕಿನ ವಂಡರಬಾಳು ಗ್ರಾಮದ ಭೋವಿ ಜನಾಂಗದವರು ಹೇಳಿದ್ದಾರೆ. ಜಾತಿ ಪ್ರಮಾಣ ಪತ್ರ ನೀಡದಕ್ಕೆ ಪೋಷಕರು ಮಕ್ಕಳನ್ನ ಶಾಲೆಗೆ ಕಳುಹಿಸುತ್ತಿಲ್ಲ. ಮಕ್ಕಳನ್ನ ಶಾಲೆಗೆ ಕಳುಹಿಸಲ್ಲ ಅಂತ ಪೋಷಕರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ರಾಜ್ಯಪಾಲರು, ಜಿಲ್ಲಾಧಿಕಾರಿಗೆ ಪತ್ರ ಬರೆದಿದ್ದಾರೆ. ಕೊಳ್ಳೆಗಾಲ ತಾಲೂಕಿನ ವಂಡರಬಾಳು ಗ್ರಾಮದ ಭೋವಿ ಜನಾಂಗದವರಿಂದ ಜಾತಿ ಪ್ರಮಾಣ ಪತ್ರಕ್ಕೆ ಅಲೆದಾಟ ಮಾಡಬೇಕಾದ ಪರಿಸ್ಥಿತಿ ಉಂಟಾಗಿದೆ. ಹೀಗಾಗಿ ಈ ರೀತಿ ಪ್ರತಿಭಟಿಸುತ್ತಿರುವುದಾಗಿ ಹೇಳಿದ್ದಾರೆ.

ಜಾತಿ ಪ್ರಮಾಣ ಪತ್ರ ನೀಡದ ಸೌಲಭ್ಯ ವಂಚಿತರಾಗುತ್ತಿದ್ದೇವೆ‌. ಈ ಬಗ್ಗೆ ಅಧಿಕಾರಿಗಳಿಗೆ ಹಲವು ಬಾರಿ ಮನವಿ ಕೊಟ್ರೂ ಯಾವುದೇ ಪ್ರಯೋಜನವಾಗಿಲ್ಲ. ಬೇರೆ ಜಾತಿಯ ಪ್ರಮಾಣ ಪತ್ರ ನೀಡ್ತಾ ಇರೋದ್ರಿಂದ ಸರ್ಕಾರಿ ಸವಲತ್ತು ಸಿಗುತ್ತಿಲ್ಲ. ಹೀಗಾಗಿ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸಲ್ಲ. ವಡ್ಡ ಅಥವಾ ಭೋವಿ ಜಾತಿಯ ಪ್ರಮಾಣ ಪತ್ರ ನೀಡಿದರಷ್ಟೇ ನಮ್ಮ ಮಕ್ಕಳನ್ನು ಶಾಲೆಗೆ ಕಳುಹಿಸುತ್ತೇವೆ ಎಂದು ಹೇಳಿದ್ದಾರೆ. ಸದ್ಯ ಕಳೆದ ಐದು ದಿನಗಳಿಂದ ಮಕ್ಕಳನ್ನು ಶಾಲೆಗೆ ಕಳುಹಿಸದೆ ಅಧಿಕಾರಿಗಳ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ.

ಚಾಮರಾಜನಗರ: ಆನೆ ದಾಳಿ, ರೈತ ಗಂಭೀರ ಗಾಯ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕು ಚೆಂಗಡಿ ಗ್ರಾಮದ ಬಳಿ ರೈತನೊಬ್ಬ ಆನೆ ದಾಳಿಗೆ ಒಳಗಾದ ಘಟನೆ ನಡೆದಿದೆ. ಮುನಿವೆಂಕಟೇಗೌಡ (52) ಆನೆ ದಾಳಿಗೆ ಒಳಗಾಗಿದ್ದಾರೆ. ಚಂಗಡಿಯಿಂದ ಕಾಡಿನ ರಸ್ತೆಯಲ್ಲಿ ಕೌದಳ್ಳಿಗೆ ಬರುವಾಗ ಆನೆದಾಳಿ ನಡೆದಿದೆ. ಗಾಯಗೊಂಡ ಮುನಿವೆಂಕಟೇಗೌಡ ಕೊಳ್ಳೇಗಾಲ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ಇದನ್ನೂ ಓದಿ: ಚಾಮರಾಜನಗರ: ಬಿಸಿಯೂಟ ಸೇವಿಸಿದ್ದ 60 ಮಕ್ಕಳ ಆರೋಗ್ಯದಲ್ಲಿ ಏರುಪೇರು

ಇದನ್ನೂ ಓದಿ: ಚಾಮರಾಜನಗರ: ಅರಣ್ಯ ಇಲಾಖೆ‌ ವಾಹನದ ಮೇಲೆ ಕಾಡಾನೆ ದಾಳಿ, ಜೀಪ್​ ನುಚ್ಚುನೂರು, ಅಧಿಕಾರಿ-ಸಿಬ್ಬಂದಿಗೆ ಗಾಯ

ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಫಾಸ್ಟ್ ಫುಡ್ ಅಂಗಡಿಗೆ ನುಗ್ಗಿದ ಟ್ರ್ಯಾಕ್ಟರ್, ಓಡಿ ಪ್ರಾಣ ಉಳಿಸಿಕೊಂಡ ಜನ
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಓಂ ಶಕ್ತಿ ಭಕ್ತರ ಮೇಲೆ ಕಲ್ಲು ತೂರಿದ ಅಪ್ರಾಪ್ತರು ಅರೆಸ್ಟ್!
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕನ್ನಡ ಮಾತನಾಡದಂತೆ ಧಮ್ಕಿ ಹಾಕಿದ ಹಾಸ್ಟೆಲ್ ವಾರ್ಡನ್: ವಿಡಿಯೋ ವೈರಲ್
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
ಕೈಗೆ ಹಾವು ಸುತ್ತಿಕೊಂಡು ಟ್ರಾಫಿಕ್ ಪೊಲೀಸ್​ಗೆ ಬೆದರಿಕೆ ಹಾಕಿದ ವ್ಯಕ್ತಿ
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
MI ಪಡೆಗೆ ಸೋಲುಣಿಸಿ ಚಾಂಪಿಯನ್ ಪಟ್ಟಕ್ಕೇರಿದ ಡೆಸರ್ಟ್ ವೈಪರ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ಮದನ ಮನಮೋಹಿನಿ ಹಾಡಿಗೆ ಭವ್ಯಾ ಗೌಡ ಸಖತ್ ಡ್ಯಾನ್ಸ್
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ರಕ್ಷಿತಾ ಶೆಟ್ಟಿಯಿಂದ ಮ್ಯಾನ್​ಹ್ಯಾಂಡ್ಲಿಂಗ್? ಓಪನ್ ಆಗುತ್ತಾ ಮುಖ್ಯದ್ವಾರ?
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ
ಕೇರಳದ ರೈಲ್ವೆ ನಿಲ್ದಾಣದ ಪಾರ್ಕಿಂಗ್​ನಲ್ಲಿ ಅಗ್ನಿ ಅವಘಡ