AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ

75 ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ನೆನಪಿಗಾಗಿ ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಸೈಕಲ್ ಸವಾರಿ ಮಾಡಿದ್ದಾರೆ.

ಬೀದರ್​ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ
ಬೀದರ್ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ
TV9 Web
| Edited By: |

Updated on:Apr 27, 2022 | 12:50 PM

Share

ಚಾಮರಾಜನಗರ: ಏನಾದರೂ ಮಾಡಬೇಕು ಎಂಬ ಹಂಬಲ, ಸಾಧಿಸುವ ಛಲ ಇದ್ರೆ ವಯಸ್ಸು, ಹಣ ಯಾವುದೂ ಸಮಸ್ಯೆಯಾಗಲ್ಲ. ಅದರಂತೆಯೇ ಬೀದರ್ನ 16 ವರ್ಷದ ಅವಳಿ ಸಹೋದರರು ಭಾರತ ಸ್ವಾತಂತ್ರ್ಯದ 75 ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ನೆನಪಿಗಾಗಿ ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಸೈಕಲ್ ಸವಾರಿ ಮಾಡಿದ್ದಾರೆ.

ಸುಮಾರು 900 ಕಿಲೋಮೀಟರ್ ಸೈಕಲ್ ತುಳಿದು 16 ವರ್ಷದ ಅವಳಿ ಪೋರರು ವಿಭಿನ್ನ ಸಾಹಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬೀದರ್ ಜಿಲ್ಲೆ ಔರಾದ್‌ನ ಅರುಣ್, ಕರುಣ್ ಎಂಬ 16 ವರ್ಷದ ಅವಳಿ ಬಾಲಕರು ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ತುಮಕೂರು, ಬೆಂಗಳೂರು, ಮಂಡ್ಯ ಮೂಲಕ ಮಹದೇಶ್ವರ ಬೆಟ್ಟಕ್ಕೆ ಸೈಕಲ್ನಲ್ಲಿ ಬಂದಿದ್ದಾರೆ. 25 ದಿನಗಳ ಕಾಲ ಬರೋಬ್ಬರಿ 900 ಕಿಲೋಮೀಟರ್ ಸೈಕಲ್ ಯಾತ್ರೆ ಮಾಡಿದ್ದಾರೆ. ಇಂದು ಮಹದೇಶ್ವರ ಬೆಟ್ಟಕ್ಕೆ ತಲುಪಿದ್ದು ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಸೈಕಲ್ ಯಾತ್ರೆ ಮುಕ್ತಾಯಗೊಳಿಸಿದ್ದಾರೆ.

ಏಪ್ರಿಲ್ 5ರಂದು ಆರಂಭವಾಗಿದ್ದ ಸೈಕಲ್ ಯಾತ್ರೆ ಇಂದು ಅಂತ್ಯವಾಗಿದೆ. ಪುಟ್ಟ ಪೋರರ ಸಾಹಸಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಬಾಲಕರು ಸೈಕಲ್ ಯಾತ್ರೆ ಆರಂಭಿಸಿದಾಗ ಗ್ರಾಮಸ್ಥರು, ಹಿರಿಯರು, ಮಕ್ಕಳು ಎಲ್ಲರೂ ಸಂಭ್ರಮದಿಂದ ಮಾಲಾರ್ಪಣೆ ಮಾಡಿ ಕಳಿಸಿಕೊಟ್ಟಿದ್ದರು. ಈಗ ಯಾತ್ರೆ ಅಂತ್ಯವಾಗಿದ್ದು ಅದ್ಧೂರಿಯಾಗಿ ಬಾಲಕರನ್ನು ಬರ ಮಾಡಿಕೊಳ್ಳಲು ಮುಂದಾಗಿದ್ದಾರೆ.

mm hills

ಬೀದರ್ ಜಿಲ್ಲೆ ಔರಾದ್‌ನ ಅರುಣ್, ಕರುಣ್

ಇದನ್ನೂ ಓದಿ: ನಾವು ಸಾಕುಪ್ರಾಣಿಗಳಂತಾಗಿದ್ದೇವೆ, ಮನೆ ಸುತ್ತ ಬೇಲಿ ಕಟ್ಟುತ್ತಿದ್ದಾರೆ-ಶಾಂಘೈ ಆಡಳಿತದ ವಿರುದ್ಧ ತಿರುಗಿಬಿದ್ದ ಜನರು

ನರಗುಂದ: ಸಚಿವ ಸಿಸಿ ಪಾಟೀಲ ಮನೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್; ದಿಂಗಾಲೇಶ್ವಶ್ರೀ ಭಕ್ತರ ಆಕ್ರೋಶ

Published On - 12:50 pm, Wed, 27 April 22

ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರದುರ್ಗ ಬಸ್ ದುರಂತದ ಬಳಿಕವೂ ಎಚ್ಚೆತ್ತುಕೊಳ್ಳದ RTO ಅಧಿಕಾರಿಗಳು
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ಚಿತ್ರರಂಗಕ್ಕೆ ಬಂದಿದ್ದು ಗಲಾಟೆ ಮಾಡೋಕಲ್ಲ, ನಟಿಸೋಕೆ; ಸುದೀಪ್
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ತಮಿಳು ನಟ ನವೀನ್ ಚಂದ್ರಗೆ ಅಷ್ಟು ಸ್ಪಷ್ಟ ಕನ್ನಡ ಹೇಗೆ ಬರುತ್ತೆ?
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ವಿಶ್ವ ಕ್ರಿಕೆಟ್​ನಲ್ಲಿ ಈ ಸಾಧನೆ ಮಾಡಿದ ಏಕೈಕ ಮಹಿಳಾ ಆಟಗಾರ್ತಿ ದೀಪ್ತಿ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ಕರ್ನಾಟಕದಲ್ಲಿ ಸಿಎಂ ಬದಲಾವಣೆ ಬಗ್ಗೆ ಕೋಡಿಶ್ರೀ ಸ್ಫೋಟಕ ಭವಿಷ್ಯ
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ನಾನು ಸಿನಿಮಾ ಡೈಲಾಗ್ ಮೂಲಕ ಟಾಂಟ್ ಕೊಡಲ್ಲ ಎಂದ ಸುದೀಪ್
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಅವರೇ ಮೇಳದಲ್ಲಿ ಡಿಕೆಶಿಗೆ ಮಹಿಳೆ ಕೇಳಿದ ಪ್ರಶ್ನೆಗೆ ಕಕ್ಕಾಬಿಕ್ಕಿಯಾದ ಜನ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
ಮುಸ್ಲಿಂ ಕುಟುಂಬಗಳಿಗೆ ಬೇರೆ ಜಾಗ ನೀಡುತ್ತೇವೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
‘ಮಾರ್ಕ್’ ಮೊದಲ ದಿನದ ಕಲೆಕ್ಷನ್ 15 ಕೋಟಿ ನಾ? ಸುದೀಪ್ ಕಡೆಯಿಂದ ಸ್ಪಷ್ಟನೆ
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು
ನಪುಂಸಕ, ಗಂಡಸೇ ಅಲ್ಲ ಎಂದಿದ್ದಕ್ಕೆ ಮನನೊಂದು ವ್ಯಕ್ತಿ ಸಾವಿಗೆ ಶರಣು