AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ

75 ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ನೆನಪಿಗಾಗಿ ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಸೈಕಲ್ ಸವಾರಿ ಮಾಡಿದ್ದಾರೆ.

ಬೀದರ್​ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ
ಬೀದರ್ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ
TV9 Web
| Edited By: |

Updated on:Apr 27, 2022 | 12:50 PM

Share

ಚಾಮರಾಜನಗರ: ಏನಾದರೂ ಮಾಡಬೇಕು ಎಂಬ ಹಂಬಲ, ಸಾಧಿಸುವ ಛಲ ಇದ್ರೆ ವಯಸ್ಸು, ಹಣ ಯಾವುದೂ ಸಮಸ್ಯೆಯಾಗಲ್ಲ. ಅದರಂತೆಯೇ ಬೀದರ್ನ 16 ವರ್ಷದ ಅವಳಿ ಸಹೋದರರು ಭಾರತ ಸ್ವಾತಂತ್ರ್ಯದ 75 ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ನೆನಪಿಗಾಗಿ ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಸೈಕಲ್ ಸವಾರಿ ಮಾಡಿದ್ದಾರೆ.

ಸುಮಾರು 900 ಕಿಲೋಮೀಟರ್ ಸೈಕಲ್ ತುಳಿದು 16 ವರ್ಷದ ಅವಳಿ ಪೋರರು ವಿಭಿನ್ನ ಸಾಹಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬೀದರ್ ಜಿಲ್ಲೆ ಔರಾದ್‌ನ ಅರುಣ್, ಕರುಣ್ ಎಂಬ 16 ವರ್ಷದ ಅವಳಿ ಬಾಲಕರು ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ತುಮಕೂರು, ಬೆಂಗಳೂರು, ಮಂಡ್ಯ ಮೂಲಕ ಮಹದೇಶ್ವರ ಬೆಟ್ಟಕ್ಕೆ ಸೈಕಲ್ನಲ್ಲಿ ಬಂದಿದ್ದಾರೆ. 25 ದಿನಗಳ ಕಾಲ ಬರೋಬ್ಬರಿ 900 ಕಿಲೋಮೀಟರ್ ಸೈಕಲ್ ಯಾತ್ರೆ ಮಾಡಿದ್ದಾರೆ. ಇಂದು ಮಹದೇಶ್ವರ ಬೆಟ್ಟಕ್ಕೆ ತಲುಪಿದ್ದು ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಸೈಕಲ್ ಯಾತ್ರೆ ಮುಕ್ತಾಯಗೊಳಿಸಿದ್ದಾರೆ.

ಏಪ್ರಿಲ್ 5ರಂದು ಆರಂಭವಾಗಿದ್ದ ಸೈಕಲ್ ಯಾತ್ರೆ ಇಂದು ಅಂತ್ಯವಾಗಿದೆ. ಪುಟ್ಟ ಪೋರರ ಸಾಹಸಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಬಾಲಕರು ಸೈಕಲ್ ಯಾತ್ರೆ ಆರಂಭಿಸಿದಾಗ ಗ್ರಾಮಸ್ಥರು, ಹಿರಿಯರು, ಮಕ್ಕಳು ಎಲ್ಲರೂ ಸಂಭ್ರಮದಿಂದ ಮಾಲಾರ್ಪಣೆ ಮಾಡಿ ಕಳಿಸಿಕೊಟ್ಟಿದ್ದರು. ಈಗ ಯಾತ್ರೆ ಅಂತ್ಯವಾಗಿದ್ದು ಅದ್ಧೂರಿಯಾಗಿ ಬಾಲಕರನ್ನು ಬರ ಮಾಡಿಕೊಳ್ಳಲು ಮುಂದಾಗಿದ್ದಾರೆ.

mm hills

ಬೀದರ್ ಜಿಲ್ಲೆ ಔರಾದ್‌ನ ಅರುಣ್, ಕರುಣ್

ಇದನ್ನೂ ಓದಿ: ನಾವು ಸಾಕುಪ್ರಾಣಿಗಳಂತಾಗಿದ್ದೇವೆ, ಮನೆ ಸುತ್ತ ಬೇಲಿ ಕಟ್ಟುತ್ತಿದ್ದಾರೆ-ಶಾಂಘೈ ಆಡಳಿತದ ವಿರುದ್ಧ ತಿರುಗಿಬಿದ್ದ ಜನರು

ನರಗುಂದ: ಸಚಿವ ಸಿಸಿ ಪಾಟೀಲ ಮನೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್; ದಿಂಗಾಲೇಶ್ವಶ್ರೀ ಭಕ್ತರ ಆಕ್ರೋಶ

Published On - 12:50 pm, Wed, 27 April 22

ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ನೀವೆಲ್ಲರೂ ನನ್ನ ರಕ್ಷಣೆಗೆ ಬರಬೇಕು: ಸದನದಲ್ಲಿ ಪರಿಪರಿಯಾಗಿ ಬೇಡಿಕೊಂಡ ಶಾಸಕ
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
ಗರ್ಭಿಣಿ ಸೊಸೆಯನ್ನು ಮಾವ ಹತ್ಯೆ ಮಾಡಿದ್ಯಾಕೆ? ಸ್ಫೋಟಕ ಕಾರಣ ಬಿಚ್ಚಿಟ್ಟ SP
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
17ನೇ ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಉದ್ಘಾಟನೆ: ಲೈವ್ ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ರಾಜ್ ಬಿ ಶೆಟ್ಟಿಯ ಸಕ್ಸಸ್ ಗುಟ್ಟು ರಟ್ಟು ಮಾಡಿದ ಸುದೀಪ್: ವಿಡಿಯೋ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಧಮ್ಕಿ ಕೇಸ್ ಆರೋಪಿ ರಾಜೀವ್ ಗೌಡ ಪತ್ನಿ ವಿಧಾನಸೌಧದಲ್ಲಿ ಪ್ರತ್ಯಕ್ಷ
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ಸದನದಲ್ಲಿ ಪೆನ್​ಡ್ರೈವ್ ತೋರಿಸಿದ ಆರ್​ ಅಶೋಕ್: ಯಾವ ಮ್ಯಾಟರ್ ಗೊತ್ತಾ?
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
ನಿವೃತ್ತಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಕೆಎಲ್ ರಾಹುಲ್
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
‘ದರ್ಶನ್ ‘ಲ್ಯಾಂಡ್​ಲಾರ್ಡ್’ ನೋಡಿದ್ದರೆ ಏನೆನ್ನುತ್ತಿದ್ದರು?’
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಅಜಿತ್ ಪವಾರ್ ಅಂತ್ಯಕ್ರಿಯೆಗೆ ಸೇರಿದ್ದ ಜನಸಾಗರ ನೋಡಿ!
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್
ಈ ವರ್ಷ ನಟಿ ರಚಿತಾ ರಾಮ್ ಮದುವೆ: ವಿಷಯ ಖಚಿತಪಡಿಸಿದ ಡಿಂಪಲ್ ಕ್ವೀನ್