AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೀದರ್​ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ

75 ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ನೆನಪಿಗಾಗಿ ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಸೈಕಲ್ ಸವಾರಿ ಮಾಡಿದ್ದಾರೆ.

ಬೀದರ್​ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ
ಬೀದರ್ನಿಂದ ಮಲೆ ಮಹದೇಶ್ವರ ಬೆಟ್ಟಕ್ಕೆ ಅವಳಿ ಸಹೋದರರ ಸೈಕಲ್ ಸವಾರಿ ಅಂತ್ಯ; ಮಹದೇಶ್ವರನ ದರ್ಶನ ಮಾಡಿ ವಿಶೇಷ ಪೂಜೆ
TV9 Web
| Edited By: ಆಯೇಷಾ ಬಾನು|

Updated on:Apr 27, 2022 | 12:50 PM

Share

ಚಾಮರಾಜನಗರ: ಏನಾದರೂ ಮಾಡಬೇಕು ಎಂಬ ಹಂಬಲ, ಸಾಧಿಸುವ ಛಲ ಇದ್ರೆ ವಯಸ್ಸು, ಹಣ ಯಾವುದೂ ಸಮಸ್ಯೆಯಾಗಲ್ಲ. ಅದರಂತೆಯೇ ಬೀದರ್ನ 16 ವರ್ಷದ ಅವಳಿ ಸಹೋದರರು ಭಾರತ ಸ್ವಾತಂತ್ರ್ಯದ 75 ವರ್ಷದ ಅಮೃತ ಮಹೋತ್ಸವದ ಅಂಗವಾಗಿ ಸ್ವಾತಂತ್ರ್ಯ ಹೋರಾಟಗಾರರ ತ್ಯಾಗ ಬಲಿದಾನದ ನೆನಪಿಗಾಗಿ ಬೀದರ್‌ನಿಂದ ಚಾಮರಾಜನಗರ ಜಿಲ್ಲೆಯ ಮಹದೇಶ್ವರ ಬೆಟ್ಟಕ್ಕೆ ಸೈಕಲ್ ಸವಾರಿ ಮಾಡಿದ್ದಾರೆ.

ಸುಮಾರು 900 ಕಿಲೋಮೀಟರ್ ಸೈಕಲ್ ತುಳಿದು 16 ವರ್ಷದ ಅವಳಿ ಪೋರರು ವಿಭಿನ್ನ ಸಾಹಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ. ಬೀದರ್ ಜಿಲ್ಲೆ ಔರಾದ್‌ನ ಅರುಣ್, ಕರುಣ್ ಎಂಬ 16 ವರ್ಷದ ಅವಳಿ ಬಾಲಕರು ಬೀದರ್, ಕಲಬುರ್ಗಿ, ಯಾದಗಿರಿ, ರಾಯಚೂರು, ಬಳ್ಳಾರಿ, ತುಮಕೂರು, ಬೆಂಗಳೂರು, ಮಂಡ್ಯ ಮೂಲಕ ಮಹದೇಶ್ವರ ಬೆಟ್ಟಕ್ಕೆ ಸೈಕಲ್ನಲ್ಲಿ ಬಂದಿದ್ದಾರೆ. 25 ದಿನಗಳ ಕಾಲ ಬರೋಬ್ಬರಿ 900 ಕಿಲೋಮೀಟರ್ ಸೈಕಲ್ ಯಾತ್ರೆ ಮಾಡಿದ್ದಾರೆ. ಇಂದು ಮಹದೇಶ್ವರ ಬೆಟ್ಟಕ್ಕೆ ತಲುಪಿದ್ದು ಮಹದೇಶ್ವರನಿಗೆ ವಿಶೇಷ ಪೂಜೆ ಸಲ್ಲಿಸಿ ಸೈಕಲ್ ಯಾತ್ರೆ ಮುಕ್ತಾಯಗೊಳಿಸಿದ್ದಾರೆ.

ಏಪ್ರಿಲ್ 5ರಂದು ಆರಂಭವಾಗಿದ್ದ ಸೈಕಲ್ ಯಾತ್ರೆ ಇಂದು ಅಂತ್ಯವಾಗಿದೆ. ಪುಟ್ಟ ಪೋರರ ಸಾಹಸಕ್ಕೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ. ಬಾಲಕರು ಸೈಕಲ್ ಯಾತ್ರೆ ಆರಂಭಿಸಿದಾಗ ಗ್ರಾಮಸ್ಥರು, ಹಿರಿಯರು, ಮಕ್ಕಳು ಎಲ್ಲರೂ ಸಂಭ್ರಮದಿಂದ ಮಾಲಾರ್ಪಣೆ ಮಾಡಿ ಕಳಿಸಿಕೊಟ್ಟಿದ್ದರು. ಈಗ ಯಾತ್ರೆ ಅಂತ್ಯವಾಗಿದ್ದು ಅದ್ಧೂರಿಯಾಗಿ ಬಾಲಕರನ್ನು ಬರ ಮಾಡಿಕೊಳ್ಳಲು ಮುಂದಾಗಿದ್ದಾರೆ.

mm hills

ಬೀದರ್ ಜಿಲ್ಲೆ ಔರಾದ್‌ನ ಅರುಣ್, ಕರುಣ್

ಇದನ್ನೂ ಓದಿ: ನಾವು ಸಾಕುಪ್ರಾಣಿಗಳಂತಾಗಿದ್ದೇವೆ, ಮನೆ ಸುತ್ತ ಬೇಲಿ ಕಟ್ಟುತ್ತಿದ್ದಾರೆ-ಶಾಂಘೈ ಆಡಳಿತದ ವಿರುದ್ಧ ತಿರುಗಿಬಿದ್ದ ಜನರು

ನರಗುಂದ: ಸಚಿವ ಸಿಸಿ ಪಾಟೀಲ ಮನೆ ಎದುರು ಬಿಗಿ ಪೊಲೀಸ್ ಬಂದೋಬಸ್ತ್; ದಿಂಗಾಲೇಶ್ವಶ್ರೀ ಭಕ್ತರ ಆಕ್ರೋಶ

Published On - 12:50 pm, Wed, 27 April 22

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು