AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನನ್ನನ್ನು ಬಿಜೆಪಿಯಿಂದ ಉಚ್ಛಾಟಿಸಲು ಸಾಧ್ಯವಿಲ್ಲ; ನನ್ನ ಹಿಂದೆ ಹಿಂದೂ ಧರ್ಮ‌ ಮತ್ತು ನನ್ನ ಸಮಾಜದ ಶಕ್ತಿ ಇದೆ: ಬಸನಗೌಡ ಪಾಟೀಲ ಯತ್ನಾಳ್

Karnataka Politics: ದುಬೈ, ಮಾರಿಷಸ್​ನಲ್ಲಿ ಹೋಟೆಲ್ ಖರೀದಿಸುವ ಕೆಲಸವನ್ನು ನಾನು ಮಾಡಲ್ಲ. ಅಧಿಕಾರ ಸಿಕ್ಕರೆ ಎಲ್ಲ ಜಿಲ್ಲೆಯಲ್ಲಿ ಗುಣಮಟ್ಟದ ಹಾಸ್ಟೆಲ್ ತೆರೆಯುವೆ ಎಂದು ಬಸನಗೌಡ ಪಾಟೀಲ ಯತ್ನಾಳ್ ಹೇಳಿದ್ದಾರೆ.

ನನ್ನನ್ನು ಬಿಜೆಪಿಯಿಂದ ಉಚ್ಛಾಟಿಸಲು ಸಾಧ್ಯವಿಲ್ಲ; ನನ್ನ ಹಿಂದೆ ಹಿಂದೂ ಧರ್ಮ‌ ಮತ್ತು ನನ್ನ ಸಮಾಜದ ಶಕ್ತಿ ಇದೆ: ಬಸನಗೌಡ ಪಾಟೀಲ ಯತ್ನಾಳ್
ಶಾಸಕ ಬಸನಗೌಡ ಪಾಟೀಲ್ ಯತ್ನಾಳ್
TV9 Web
| Edited By: |

Updated on: Jul 06, 2021 | 7:41 PM

Share

ಚಾಮರಾಜನಗರ: ನನ್ನನ್ನು ಎಂದಿಗೂ ಬಿಜೆಪಿಯಿಂದ ಉಚ್ಚಾಟಿಸಲು ಸಾಧ್ಯವಿಲ್ಲ. ನನ್ನ ಹಿಂದೆ ಹಿಂದೂ ಧರ್ಮ ಮತ್ತು ನನ್ನ ಸಮಾಜದ ಶಕ್ತಿ ಇದೆ ಎಂದು ಚಾಮರಾಜನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ದುಬೈ, ಮಾರಿಷಸ್​ನಲ್ಲಿ ಹೋಟೆಲ್ ಖರೀದಿಸುವ ಕೆಲಸವನ್ನು ನಾನು ಮಾಡಲ್ಲ. ಅಧಿಕಾರ ಸಿಕ್ಕರೆ ಎಲ್ಲ ಜಿಲ್ಲೆಯಲ್ಲಿ ಗುಣಮಟ್ಟದ ಹಾಸ್ಟೆಲ್ ತೆರೆಯುವೆ. ನಮ್ಮ ಸಮುದಾಯಕ್ಕೆ 2A ಮೀಸಲಾತಿಗಾಗಿ ಆಗ್ರಹಿಸಿ ದೆಹಲಿಗೆ ಹೋಗಿ ಪ್ರಧಾನಿ ನರೇಂದ್ರ ಮೋದಿ ಭೇಟಿ ಮಾಡೋಣ. ನಮ್ಮ ಸಮಸ್ಯೆ ಪ್ರಧಾನ ಮಂತ್ರಿಗೆ ಅರ್ಥ ಮಾಡಿಸೋಣ‌ ಎಂದು ಬಸನಗೌಡ ಯತ್ನಾಳ್ ಹೇಳಿದ್ದಾರೆ.

ನನ್ನನ್ನು ಹಗರಣದಲ್ಲಿ ಸಿಲುಕಿಸಲು ಷಡ್ಯಂತ್ರ ನಡೆಯುತ್ತಿದೆ ಎಂದು ಚಾಮರಾಜನಗರದಲ್ಲಿ ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ. ನಾನು ಅಕ್ರಮ ಮಾಡಿದ್ದೇನೆಂದು ಪತ್ತೆ ಹಚ್ಚಲು ಇಂಟಲಿಜೆನ್ಸ್ ರಚನೆ ಆದರೆ ಇಂಟಲಿಜೆನ್ಸ್​ಗೆ ಒಂದೇ ಒಂದು ಅಕ್ರಮ ಸಿಗಲಿಲ್ಲ. ನಮಗೆ ಯಾವುದೇ ರೀತಿ ರಾಜಕೀಯ ಮೀಸಲಾತಿ ಬೇಡ. ನಮ್ಮ ಸಮಾಜದ ಅಭಿವೃದ್ಧಿಗೆ ನಮ್ಮನ್ನು 2A ಗೆ ಸೇರಿಸಿ ಎಂದು ತಿಳಿಸಿದ್ದಾರೆ.

ನಾನು ಕೇಂದ್ರ ಮಂತ್ರಿಯಾಗಿದ್ದಾಗ ನನ್ನನ್ನು ಅಧಿಕಾರದಿಂದ ತೆಗೆಸಲು ಬಂದಿದ್ದರು. ಅಧಿಕಾರದಿಂದ ಕೆಳಗಿಳಿಸಲು ಆಗಲೇ ಹುನ್ನಾರ ಮಾಡಿದ್ದರು. ಆದರೆ ಅದು ಸಕ್ಸಸ್ ಆಗಲಿಲ್ಲ‌ ಎಂದು ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ನೀಡಿದ್ದಾರೆ.

ಇದನ್ನೂ ಓದಿ:

ಇದು ನಮ್ಮ ಸರ್ಕಾರ ಎಂಬ ಭಾವನೆಯೇ ಬರುತ್ತಿಲ್ಲ; ಡಿ ಕೆ ಶಿವಕುಮಾರ್, ಕುಮಾರಸ್ವಾಮಿ ಜತೆ ಯಡಿಯೂರಪ್ಪ ಹೊಂದಾಣಿಕೆ ಸದಾ ಇದೆ: ಸಚಿವ ಯೋಗೇಶ್ವರ್

ಚಾಮರಾಜನಗರ: ಯಡಿಯೂರಪ್ಪ ವಿರುದ್ಧ ಯತ್ನಾಳ್ ಟೀಕೆಗೆ ವೀರಶೈವ ಮಹಾಸಭಾ ಖಂಡನೆ

(BJP MLA Basanagouda Patil Yatnal says he believes in Hindu Dharma and his People in Political Career)

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್