ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು ಪ್ರಕರಣ: ಇಬ್ಬರು ವೈದ್ಯರು ಸೇರಿ ಮೂವರ ವಿರುದ್ಧ ಎಫ್​ಐಆರ್

ಅಪೆಂಡೆಕ್ಸ್ ಹಿನ್ನಲೆ ಬಾಲಕ ವಿಜಯ್ ಎಂಬಾತನನ್ನು ಕೊಳ್ಳೇಗಾಲದ ಜನನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಪರೇಷನ್ ಯಶಸ್ವಿಯಾಗಿದೆ ಎಂದು ತಿಳಿಸಿದ್ದ ವೈದ್ಯರು ನಂತರ ಉಸಿರಾಟದ ತೊಂದರೆಯಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದಾರೆ. ಆದರೆ, ಶಸ್ತ್ರ ಚಿಕಿತ್ಸೆಗೆ ಮೊದಲು ಸರಿಯಾದ ಅರವಳಿಕೆ ಚುಚ್ಚುಮದ್ದು ಕೊಟ್ಟಿಲ್ಲವೆಂದು ಆರೋಪ ಮಾಡಿದ್ದ ಕುಟುಂಬಸ್ಥರು, ವೈದ್ಯರ ನಿರ್ಲಕ್ಷ್ಯದಿಂದಲೇ ಚಾಲಕ ಸಾವನ್ನಪ್ಪಿದ್ದಾನೆ ಎಂದಿದ್ದರು. ಈ ಸಂಬಂಧ ಮೂವರ ವಿರುದ್ಧ ಎಫ್​ಐಆರ್ ದಾಖಲಾಗಿದೆ.

ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು ಪ್ರಕರಣ: ಇಬ್ಬರು ವೈದ್ಯರು ಸೇರಿ ಮೂವರ ವಿರುದ್ಧ ಎಫ್​ಐಆರ್
ಬಾಲಕ ಸಾವು ಪ್ರಕರಣ ಸಂಬಂಧ ಕೊಳ್ಳೇಗಾಲದ ಜನನಿ ಆಸ್ಪತ್ರೆ ಇಬ್ಬರು ವೈದ್ಯರು ಸೇರಿ ಮೂವರ ವಿರುದ್ಧ ಎಫ್​ಐಆರ್
Edited By:

Updated on: Dec 09, 2023 | 5:14 PM

ಚಾಮರಾಜನಗರ, ಡಿ.9: ವೈದ್ಯರ ನಿರ್ಲಕ್ಷ್ಯದಿಂದ ಬಾಲಕ ಸಾವು ಆರೋಪ ಸಂಬಂಧ ಜಿಲ್ಲೆಯ ಕೊಳ್ಳೇಗಾಲ (Kollegal) ಜನನಿ ಆಸ್ಪತ್ರೆಯ ಇಬ್ಬರು ವೈದ್ಯರು ಹಾಗೂ ವ್ಯವಸ್ಥಾಪಕನ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಆಸ್ಪತ್ರೆಯ ಸರ್ಜನ್ ಡಾ.ಶಿವಕಿಶೋರ್, ಅರವಳಿಕೆ ತಜ್ಞ ಡಾ.ಸ್ಯಾಮಸನ್ ಹಾಗೂ ವ್ಯವಸ್ಥಾಕನ ವಿರುದ್ಧ ಐಪಿಸಿ ಸೆಕ್ಷನ್ 304 (ಎ) ರ ಪ್ರಕಾರ ಮೊಕದ್ದಮೆ ದಾಖಲಾಗಿದೆ.

ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದ ಜನನಿ ಆಸ್ಪತ್ರೆಯಲ್ಲಿ ಸೆ‌ಪ್ಟೆಂಬರ್ 2 ರಂದು ನಡೆದಿದ್ದ ಪ್ರಕರಣ ಇದಾಗಿದೆ. ಅಪೆಂಡೆಕ್ಸ್ ಹಿನ್ನಲೆ ಬಾಲಕ ವಿಜಯ್ ಎಂಬಾತನನ್ನು ಜನನಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆಪರೇಷನ್ ಯಶಸ್ವಿಯಾಗಿದೆ ಎಂದು ತಿಳಿಸಿದ್ದ ವೈದ್ಯರು, ನಂತರ ಉಸಿರಾಟದ ತೊಂದರೆಯಿಂದ ಬಾಲಕ ಸಾವನ್ನಪ್ಪಿದ್ದಾನೆ ಎಂದು ಘೋಷಿಸಿದ್ದರು.

ಇದನ್ನೂ ಓದಿ: ಚಾಮರಾಜನಗರದಲ್ಲಿ ನಡೆದ ಕೇರಳ ರಾಬರಿ ವಿಚಾರಣೆ, ಸ್ಪೋಟಕ ಸತ್ಯ ಬಯಲಿಗೆ, ಅಸಲಿಗೆ ಹಣ ದೋಚಿದವರು ಯಾರು?

ಶಸ್ತ್ರ ಚಿಕಿತ್ಸೆಗೆ ಮೊದಲು ಸರಿಯಾದ ಅರವಳಿಕೆ ಚುಚ್ಚುಮದ್ದು ಕೊಟ್ಟಿಲ್ಲವೆಂದು ಆರೋಪ ಮಾಡಿದ್ದ ಕುಟುಂಬಸ್ಥರು, ವೈದ್ಯರ ನಿರ್ಲಕ್ಷ್ಯದಿಂದ ಬಾಲಕನ ಸಾವಾಗಿದೆ ಎಂಬ ಆರೋಪಿಸಿದ್ದರು. ಕೂಡಲೇ ವೈದ್ಯರ ವಿರುದ್ಧ ಕ್ರಮ ಜರುಗಿಸುವಂತೆ ಕುಟುಂಬಸ್ಥರು ದೂರು ನೀಡಿದ ಹಿನ್ನೆಲೆ ಪ್ರಕರಣದ ಸತ್ಯಾಸತ್ಯೆತೆ ವರದಿ ನೀಡಲು ಸಿಮ್ಸ್ ತಜ್ಞ ವೈದ್ಯರ ಸಮಿತಿ ರಚನೆ ಮಾಡಲಾಗಿತ್ತು.

ಅದರಂತೆ ನಡೆದ ವಿಚಾರಣೆಯಲ್ಲಿ ವೈದ್ಯರ ನಿರ್ಲಕ್ಷ್ಯ ಕಂಡುಬಂದಿದ್ದು, ಈ ಬಗ್ಗೆ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬಾಲಕನನ್ನು ಸರಿಯಾಗಿ ಮಾನಿಟರ್ ಮಾಡಿಲ್ಲ, ಶಸ್ತ್ರಚಿಕಿತ್ಸೆ ನಂತರ ಅಸಮರ್ಪಕ ನಿರ್ವಹಣೆ ಮಾಡಿದ್ದಾರೆ ಎಂದು ಉಲ್ಲೇಖಿಸಲಾಗಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us