AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಅಭಿಮಾನಿ ಆತ್ಮಹತ್ಯೆ, ಕುಟುಂಬಕ್ಕೆ ಸಾಂತ್ವನ ಹೇಳಲು ಗ್ರಾಮದತ್ತ ಯಡಿಯೂರಪ್ಪ ಪಯಣ

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರವಿ ಅಲಿಯಾಸ್ ರಾಜಾಹುಲಿ ಆತ್ಮಹತ್ಯೆಗೆ ಶರಣಾಗಿದ್ದ ಯುವಕ. ರವಿ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ.

ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಅಭಿಮಾನಿ ಆತ್ಮಹತ್ಯೆ, ಕುಟುಂಬಕ್ಕೆ ಸಾಂತ್ವನ ಹೇಳಲು ಗ್ರಾಮದತ್ತ ಯಡಿಯೂರಪ್ಪ ಪಯಣ
ಬಿ.ಎಸ್.ಯಡಿಯೂರಪ್ಪ
TV9 Web
| Edited By: |

Updated on:Jul 30, 2021 | 9:08 AM

Share

ಚಾಮರಾಜನಗರ: ಇಂದು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದಾರೆ. ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಿದ್ದಂತೆ ಮನನೊಂದು ಅಭಿಮಾನಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿದ್ದ. ಈ ಹಿನ್ನೆಲೆಯಲ್ಲಿ ಬಿ.ಎಸ್. ಯಡಿಯೂರಪ್ಪ ಇಂದು ಚಾಮರಾಜನಗರ ಜಿಲ್ಲೆಗೆ ಭೇಟಿ ನೀಡಲಿದ್ದು ಆತ್ಮಹತ್ಯೆ ಮಾಡಿಕೊಂಡ ಯುವಕನ ಮನೆಗೆ ಹೋಗಲಿದ್ದಾರೆ.

ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬೊಮ್ಮಲಾಪುರ ಗ್ರಾಮದ ರವಿ ಅಲಿಯಾಸ್ ರಾಜಾಹುಲಿ ಆತ್ಮಹತ್ಯೆಗೆ ಶರಣಾಗಿದ್ದ ಯುವಕ. ರವಿ ಮನೆಗೆ ಬಿ.ಎಸ್. ಯಡಿಯೂರಪ್ಪ ಭೇಟಿ ನೀಡಿ ಮೃತನ ಕುಟುಂಬಕ್ಕೆ ಸಾಂತ್ವಾನ ಹೇಳಲಿದ್ದಾರೆ. ಹೆಲಿಕಾಪ್ಟರ್ ಮೂಲಕ ಗುಂಡ್ಲುಪೇಟೆಗೆ ಬಿ.ಎಸ್. ಯಡಿಯೂರಪ್ಪ ಆಗಮಿಸಲಿದ್ದಾರೆ. ಬಳಿಕ ಗುಂಡ್ಲುಪೇಟೆಯಿಂದ ಬೊಮ್ಮಲಾಪುರ ಗ್ರಾಮಕ್ಕೆ ಬೈಕ್ ರ್ಯಾಲಿ ಮೂಲಕ ಆಗಮಿಸಲಿದ್ದಾರೆ. ಬಿ.ಎಸ್. ಯಡಿಯೂರಪ್ಪ ಗ್ರಾಮಕ್ಕೆ ಬರುತ್ತಿರುವ ಹಿನ್ನೆಲೆ ಅವರಿಗೆ ಅದ್ಧೂರಿಯಾಗಿ ಸ್ವಾಗತ ಮಾಡಲು ಅಭಿಮಾನಿಗಳು ಸಜ್ಜಾಗಿದ್ದಾರೆ.

ಇದನ್ನೂ ಓದಿ: ಬಿ.ಎಸ್​.ಯಡಿಯೂರಪ್ಪ ಕೆಳಗಿಳಿದರು ಅದಕ್ಕೆ ಗಡ್ಡ ತೆಗೆದೆ; ಬಸನಗೌಡ ಪಾಟೀಲ್ ಯತ್ನಾಳ್

(BS yediyurappa To visit chamarajanagar over youth commits suicide for BS yediyurappa resign cm post)

Published On - 8:47 am, Fri, 30 July 21

ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ಹನುಮಾನ್ ದೇವಸ್ಥಾನಕ್ಕೆ ಐದು ಕೋಟಿ ರೂ. ದೇಣಿಗೆ ಕೊಟ್ಟ ಮುಖೇಶ್ ಅಂಬಾನಿ
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ರೋಗಿ ನರಳುತ್ತಿದ್ದರೂ ಚಿಕಿತ್ಸೆ ನೀಡದೆ ಮೊಬೈಲಲ್ಲಿ ಹರಟುತ್ತಿದ್ದ ವೈದ್ಯ!
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ಕೋಗಿಲು ಕದನ: ಬಿಜೆಪಿ ವಿರುದ್ಧ ಕೃಷ್ಣಭೈರೇಗೌಡ ಸ್ಫೋಟಕ ಆರೋಪ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ರಣರೋಚಕ ಪಂದ್ಯ, ಇಬ್ಬರು ರಿಟೈರ್ಡ್​ ಔಟ್, ಮ್ಯಾಚ್ ಟೈ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
ಕನ್ನಡ ಮಾತನಾಡದಂತೆ ವಾರ್ಡನ್ ಧಮ್ಕಿ: ಕಾಲೇಜು ಮುಂಭಾಗ ಭಾರಿ ಪ್ರತಿಭಟನೆ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
‘ಚಾನೆಲ್ ಮನೆ ಮಗಳಾದರೆ ಉಳಿಯಲು ಸಾಧ್ಯವಿಲ್ಲ, ಅದು ಸುಳ್ಳು’; ಸ್ಪಂದನಾ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಓಂ ಶಕ್ತಿ ಮಾಲಾಧಾರಿಗಳ ಮೇಲೆ ಕಲ್ಲು ತೂರಾಟ; ಜೆಜೆ ನಗರ ಠಾಣೆಗೆ ಜಮೀರ್ ಭೇಟಿ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಾಯ್​ಫ್ರೆಂಡ್ ಹಾಗೂ ಮದುವೆ ಬಗ್ಗೆ ಮಾತನಾಡಿದ ಸ್ಪಂದನಾ ಸೋಮಣ್ಣ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಬಳ್ಳಾರಿ ದಂಗಲ್​​​: ಜನಾರ್ದನ ರೆಡ್ಡಿ ಮನೆಯಲ್ಲಿ ರಾಶಿ ರಾಶಿ ದೊಣ್ಣೆ ಪತ್ತೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ
ಅಶ್ಲೀಲ ಪದ ಬಳಕೆ ವಿರುದ್ಧ ಸಿಡಿದೆದ್ದ ಜನಪದ ಕಲಾವಿದರು: ಕಾರಣ ಇಲ್ಲಿದೆ