ಸೋಮಣ್ಣಗೆ ಮುಳುಗುನೀರು ತಂದಿಟ್ಟಿದ್ದ ರುದ್ರೇಶ್ ದಿಢೀರ್ ಪ್ರತ್ಯಕ್ಷ, ವಿಜಯೇಂದ್ರ ಆಪ್ತ ಮತ್ತೆ ಚಾಮರಾಜನಗರದಲ್ಲಿ ಆಕ್ಟೀವ್

ಸೋಮಣ್ಣ ರೋಷಾವೇಷದ ಮಾತುಗಳನ್ನಾಡಿದರೂ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತ್ಯಾಪೆ ಹಾಕುವ ಕೆಲಸಕ್ಕೆ ಮುಂದಾಗಿದ್ರು. ಆದ್ರೆ ಇದೇ ಮೊದಲ ಬಾರಿಗೆ ರುದ್ರೇಶ್ ಬಾಯ್ತೆರೆದು ಮಾತನಾಡಿದ್ದಾರೆ. ನನ್ನ ಹಾಗೂ ಸೋಮಣ್ಣರ ನಡುವೆ ಏನು ಇಲ್ಲಾ, ಅವರು ನಮ್ಮ ಹಿರಿಯ ನಾಯಕರು. ನಾನೇ ಸೋಮಣ್ಣರ ಬಳಿ ಹೋಗಿ ಮಾತನಾಡಿಕೊಂಡು ಎಲ್ಲವನ್ನ ಬಗೆ ಹರಿಸಿಕೊಳ್ಳುತ್ತೇನೆ ಎಂದಿದ್ದಾರೆ.

ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಬಳಿಕ ಬಿಜೆಪಿ ಮೈ ಕೊಡವಿ ನಿಂತಿದೆ. ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಶತಾಯಗತಾಯ ಗೆದ್ದು ಅಧಿಕಾರ ಚುಕ್ಕಾಣಿ ಹಿಡಿಯುವ ಆತುರದಲ್ಲಿದೆ. ಅದರ ಬೆನ್ನಲ್ಲೇ ಗಡಿನಾಡು ಚಾಮರಾಜನಗರದಲ್ಲಿ ಮತ್ತೆ ಬಿವೈ ವಿಜಯೇಂದ್ರ ಆಪ್ತ ರೀ ಎಂಟ್ರಿ ಕೊಟ್ಟಿದ್ದು ರಾಜಕೀಯ ಪಡಸಾಲೆಯಲ್ಲಿ ಹೊಸ ಲೆಕ್ಕಾಚಾರ ಶುರುವಾಗಿದೆ.

ವಿಧಾನಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಅಧಿಕಾರ ವಿರೋಧಿ ಅಲೆ, 40 ಪರ್ಸೆಂಟ್ ಕಮಿಷನ್ ಆರೋಪದಿಂದ ಬಸವಳಿದ ಬಿಜೆಪಿ ಹೀನಾಯ ಸೋಲನ್ನ ಕಂಡಿತ್ತು. ಕೈ ನಾಯಕರ ಫ್ರೀ ಗ್ಯಾರಂಟಿಯ ಯೋಜನೆಯ ಸುನಾಮಿಗೆ ಜೆಡಿಎಸ್ ಹಾಗೂ ಬಿಜೆಪಿ ಕಂಡು ಕೇಳರಿಯದ ಸೋಲನ್ನ ಕಂಡಿತ್ತು. ಬಿಜೆಪಿಯ ಹಿರಿಯ ಮುತ್ಸದ್ಧಿ ವಿ.ಸೋಮಣ್ಣ ತಮ್ಮ ತವರು ಕ್ಷೇತ್ರ ಗೋವಿಂದರಾಜನಗರ ವಿಧಾನಸಭಾ ಕ್ಷೇತ್ರವನ್ನ ತೊರೆದಿದ್ದರು.

ಸಿಎಂ ಸಿದ್ಧರಾಮಯ್ಯರ ವರುಣ ವಿಧಾನಸಭಾ ಕ್ಷೇತ್ರ ಸೇರಿದಂತೆ ಚಾಮರಾಜನಗರ ವಿಧಾನಸಭಾ ಕ್ಷೇತ್ರದಲ್ಲಿ ಅದೃಷ್ಟ ಪರೀಕ್ಷೆಗೆ ನಿಂತು ಎರಡು ಕಡೆ ಹೀನಾಯ ಸೋಲನ್ನಪ್ಪಿದ್ರು. ಯಾವಾಗ ಸೋಮಣ್ಣ ಚುನಾವಣೆಯಲ್ಲಿ ಸೋತು ಸುಣ್ಣವಾದ್ರೊ ಬಿಜೆಪಿಯಲ್ಲಿ ಆಂತರಿಕ ಭಿನ್ನಮತ ಸ್ಪೋಟಗೊಂಡಿತ್ತು. ಬಹಿರಂಗವಾಗಿಯೇ ಮಾಜಿ ಸಚಿವ ಸೋಮಣ್ಣ ಅವರು ಯಡಿಯೂರಪ್ಪ ಹಾಗೂ ಬಿ.ವೈ ವಿಜಯೇಂದ್ರರ ವಿರುದ್ದ ಬಂಡಾಯದ ಸಮಯ ಸಾರಿದ್ರು. ಪರೋಕ್ಷವಾಗಿ ಬಿ.ವೈ.ವಿ ಆಪ್ತ ರುದ್ರೇಶ್ ವಿರುದ್ದ ಉರಿದುರಿದು ಬಿದ್ದಿದ್ರು. ತನ್ನ ಸೋಲಿಗೆ ರುದ್ರೇಶ್ ಕಾರಣವೆಂದು ಬಾಯಲ್ಲೆ ಬೆಂಕಿ ಉಗಿಳಿದ್ರು.

ಇದನ್ನೂ ಓದಿ: ಮತ್ತೊಮ್ಮೆ ಗೆಲ್ಲುವ ಹಾದಿಯಲ್ಲಿರುವ ಮೋದಿ ಭಾರತಕ್ಕೆ ಅತ್ಯುತ್ತಮ ನಾಯಕ ಎಂದು ಹೊಗಳಿದ ಅಮೆರಿಕದ ಗಾಯಕಿ ಮೇರಿ ಮಿಲ್ಬೆನ್

ಸೋಮಣ್ಣ ರೋಷಾವೇಷದ ಮಾತುಗಳನ್ನಾಡಿದರೂ ಬಿಜೆಪಿ ನೂತನ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ತ್ಯಾಪೆ ಹಾಕುವ ಕೆಲಸಕ್ಕೆ ಮುಂದಾಗಿದ್ರು. ಆದ್ರೆ ಇದೇ ಮೊದಲ ಬಾರಿಗೆ ರುದ್ರೇಶ್ ಬಾಯ್ತೆರೆದು ಮಾತನಾಡಿದ್ದಾರೆ. ಹೌದು ನನ್ನ ಹಾಗೂ ಮಾಜಿ ಸಚಿವ ವಿ.ಸೋಮಣ್ಣರ ನಡುವೆ ಏನು ಇಲ್ಲಾ, ಅವರು ನಮ್ಮ ಹಿರಿಯ ನಾಯಕರು. ಚುನಾವಣೆ ಸಂದರ್ಭದಲ್ಲಿ ನಾನು ಸೋಮಣ್ಣರ ವಿರುದ್ದ ಅಥವಾ ಬಿಜೆಪಿ ಪಕ್ಷದ ವಿರುದ್ದ ಯಾವುದೇ ರೀತಿಯ ಪಕ್ಷ ವಿರೋಧಿ ಕೆಲಸ ಮಾಡಿಲ್ಲ. ನನ್ನ ಮೇಲೆ ಯಾಕೆ ಇಂತಹ ಆರೋಪ ಬರುತ್ತಿದೆ ತಿಳಿದಿಲ್ಲ, ನಾನೇ ಸೋಮಣ್ಣರ ಬಳಿ ಹೋಗಿ ಮಾತನಾಡಿಕೊಂಡು ಎಲ್ಲವನ್ನ ಬಗೆ ಹರಿಸಿಕೊಳ್ಳುತ್ತೇನೆಂದು ಚಾಮರಾಜನಗರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ.

ಒಟ್ಠಾರೆ ಲೋಕಸಭಾ ಚುನಾವಣಾ ಹೊಸ್ತಿಲಲ್ಲೇ ಗಡಿ ನಾಡಿನ ಬಿಜೆಪಿ ಪಾಳಯದಲ್ಲಿ ಹೊಸ ಬೆಳವಣಿಗೆ ನಡೆಯುತ್ತಿದ್ದು ಇದು ಪಾರ್ಲಿಮೆಂಟ್ ಎಲೆಕ್ಷನ್ ಮೇಲೆ ಎಷ್ಟು ಪರಿಣಾಮ ಬೀರುತ್ತೆಂಬುದನ್ನ ಕಾದು ನೋಡ್ಬೇಕಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us