AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ

ಕೇಂದ್ರ ಗೃಹ ಇಲಾಖೆ ಸರ್ವೆ ನಡೆಸಿದ್ದು ಕುದೇರು ಪೊಲೀಸ್ ಠಾಣೆಗೆ ಕರ್ನಾಟಕದ ನಂಬರ್ ಒನ್ ಸ್ಥಾನ ಸಿಕ್ಕಿದೆ. ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ. ರಾಜ್ಯದಲ್ಲೇ ಅತ್ಯುತ್ತಮ ಹಾಗೂ ಜನಸ್ನೇಹಿ ಠಾಣೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದ 2223 ಪೊಲೀಸ್ ಠಾಣೆಗಳ ಪೈಕಿ ಈಗ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದ್ದು ಈಗ ಸಾಕಷ್ಟು ಜನ ಮನ್ನಣೆಗೆ ಪಾತ್ರವಾಗಿದೆ.

ಚಾಮರಾಜನಗರ: ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ
ಕುದೇರು ಪೊಲೀಸ್ ಠಾಣೆ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Feb 08, 2024 | 2:45 PM

Share

ಚಾಮರಾಜನಗರ, ಫೆ.08: ಚಾಮರಾಜನಗರ (Chamarajanagar ) ಜಿಲ್ಲೆಗೆ ಮತ್ತೊಂದು ಹೆಮ್ಮೆಯ ಗರಿ ಲಭಿಸಿದೆ. ಪೊಲೀಸ್ ಠಾಣೆ ನಿರ್ವಹಣೆ ಹಾಗೂ ಜನ ಸ್ನೇಹಿ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆಗೆ ಕುದೇರು ಪೊಲೀಸ್ ಠಾಣೆ ಪಾತ್ರವಾಗಿದೆ. ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಕುದೇರು ಪೊಲೀಸ್ ಠಾಣೆ (Kudur Police Station) ನಂಬರ್ ಓನ್, ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ.

ಪೊಲೀಸ್ ಠಾಣೆ ಅಂದ್ರೆ ಸಾಮಾನ್ಯವಾಗಿ ಮೂಗು ಮುರಿಯುವವರೆ ಹೆಚ್ಚು. ಯಾಕಪ್ಪ ಈ ಪೊಲೀಸರ ಸಹವಾಸ ಅಂತ ಮಾತಾಡ್ತಾರೆ. ಅದ್ರಲ್ಲೂ ಪೊಲೀಸ್ ಠಾಣೆ ಮೆಟ್ಟಿಲೇರೊ ಗೋಜೆ ಬೇಡ ಅಂತ ಮಾತನಾಡುವವರ ಸಂಖ್ಯೆ ಹೆಚ್ಚು. ಇನ್ನು ಠಾಣೆಗೆ ಹೋದ್ರೆ ಸರಿಯಾಗಿ ರೆಸ್ಪಾನ್ಸ್ ಮಾಡಿಲ್ಲ. ಏಕ ವಚನದಲ್ಲಿ ಮಾತಾಡ್ತಾರೆ ಅನ್ನೋ ದೂರುಗಳು ಸಹಜ. ಆದ್ರೆ ಇದೆಲ್ಲದಕ್ಕು ವಿರುದ್ದವಾಗಿ ರಾಜ್ಯದಲ್ಲಿ ಅತ್ಯುತ್ತಮ ಹಾಗೂ ಜನಸ್ನೇಹಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಕುದೇರು ಪೊಲೀಸ್ ಠಾಣೆ ರಾಜ್ಯದಲ್ಲೇ ನಂಬರ್ ಓನ್ ಪೊಲೀಸ್ ಠಾಣೆ ಹಾಗೂ ದೇಶದಲ್ಲೇ ಐದನೇ ಸ್ಥಾನ ಎಂಬ ಪ್ರಶಂಸೆ ಪಡೆದಿದೆ.

central awards chamarajanagar kudur police station to Karnataka Number 1 police station

ಕುದೇರು ಪೊಲೀಸ್ ಠಾಣೆ

ಇದನ್ನೂ ಓದಿ:ಆನೇಕಲ್: ಪ್ರೀತಿಸಿದ ವಿಚ್ಚೇದಿತ ಯುವತಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ಇನ್ನು ಯಾವ ಆಯಾಮದಲ್ಲಿ ಈ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದೆ ಎಂದು ನೋಡುವುದಾದರೆ. ಕ್ರೈಂ ಕಂಟ್ರೋಲ್, ಅಬಕಾರಿ ನೀತಿ, ಜನಸ್ನೇಹಿ, ಶುಚಿತ್ವ, ಕ್ರೈಂ ಪ್ರಿವೆನ್ಷನ್ ಸೇರಿದಂತೆ ಈ ಎಲ್ಲಾ ಆಯಾಮಗಳನ್ನ ಪರಿಶೀಲಿಸಿ ರಾಜ್ಯದ 2223 ಪೊಲೀಸ್ ಠಾಣೆಗಳ ಪೈಕಿ ಈಗ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದ್ದು ಈಗ ಸಾಕಷ್ಟು ಜನ ಮನ್ನಣೆಗೆ ಪಾತ್ರವಾಗಿದೆ.

ಒಟ್ಟಾರೆ ಚಾಮರಾಜನಗರ ಜಿಲ್ಲೆಯ ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ, ದೇಶದಲ್ಲೇ ಐದನೇ ಸ್ಥಾನ ಪಡೆದು ಈಗ ಸದ್ದು ಮಾಡುತ್ತಿದ್ದು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಹೊಸ ವರ್ಷಾಚರಣೆಗೆ ಆಂಧ್ರದಲ್ಲಿ ಅಪರೂಪದ ಟಗರು ಕಾಳಗ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಈ ತಿಂಗಳಿಂದಲೇ ಬಜೆಟ್ ಸಿದ್ಧತೆ ಆರಂಭ ಎಂದ ಸಿಎಂ ಸಿದ್ದರಾಮಯ್ಯ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಹೊಸ ವರ್ಷದ ಪ್ರಯುಕ್ತ ನೀಲಕಂಠವರ್ಣಿ ಸ್ವಾಮಿಗೆ ವಿಶೇಷ ಅಭಿಷೇಕ
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
ಬಾಂಗ್ಲಾದಲ್ಲಿ ಮತ್ತೋರ್ವ ಹಿಂದೂ ಮೇಲೆ ಹಲ್ಲೆ ನಡೆಸಿ, ಬೆಂಕಿ ಹಚ್ಚಿದ ಗುಂಪು
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
46 ಎಸೆತಗಳಲ್ಲಿ 58 ರನ್ ಬಾರಿಸಿ ತಂಡ ಗೆಲ್ಲಿಸಿದ ಬಾಬರ್ ಆಝಂ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ರಾಹುಲ್ ಗಾಂಧಿಯನ್ನು ಶ್ರೀರಾಮನಿಗೆ ಹೋಲಿಸಿದ ಕಾಂಗ್ರೆಸ್ ನಾಯಕ ನಾನಾ ಪಟೋಲೆ
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಬಿಗ್​​ಬಾಸ್​​ ಶೋನಲ್ಲಿ ಈ ವಾರ ಏನು ಮಾಡ್ತೀನಿ ನೋಡ್ತಿರಿ: ಸುದೀಪ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಮದ್ಯದ ಅಮಲಲ್ಲಿ ಫುಟ್ಪಾತ್​​ಗೆ ಕಾರು ನುಗ್ಗಿಸಿದ ಚಾಲಕ: ಬಾಲಕಿ ಜಸ್ಟ್​​ಮಿಸ್
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಕರ್ನಾಟಕದವರನ್ನ ಬಿಟ್ಟು ಬೇರೆಯವರಿಗೆ ಮನೆ ಕೊಡಲ್ಲ: ಸಚಿವ ಜಮೀರ್ ಖಡಕ್ ಮಾತು
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?
ಬೆಂಗಳೂರಲ್ಲಿ 26 ಕಿ.ಮೀ. ಹೆಜ್ಜೆ ಹಾಕಿದ ಪಾದಚಾರಿಗಳು: ಕಾರಣ ಏನು?