Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ

ಕೇಂದ್ರ ಗೃಹ ಇಲಾಖೆ ಸರ್ವೆ ನಡೆಸಿದ್ದು ಕುದೇರು ಪೊಲೀಸ್ ಠಾಣೆಗೆ ಕರ್ನಾಟಕದ ನಂಬರ್ ಒನ್ ಸ್ಥಾನ ಸಿಕ್ಕಿದೆ. ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ. ರಾಜ್ಯದಲ್ಲೇ ಅತ್ಯುತ್ತಮ ಹಾಗೂ ಜನಸ್ನೇಹಿ ಠಾಣೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದ 2223 ಪೊಲೀಸ್ ಠಾಣೆಗಳ ಪೈಕಿ ಈಗ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದ್ದು ಈಗ ಸಾಕಷ್ಟು ಜನ ಮನ್ನಣೆಗೆ ಪಾತ್ರವಾಗಿದೆ.

ಚಾಮರಾಜನಗರ: ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ
ಕುದೇರು ಪೊಲೀಸ್ ಠಾಣೆ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: ಆಯೇಷಾ ಬಾನು

Updated on: Feb 08, 2024 | 2:45 PM

ಚಾಮರಾಜನಗರ, ಫೆ.08: ಚಾಮರಾಜನಗರ (Chamarajanagar ) ಜಿಲ್ಲೆಗೆ ಮತ್ತೊಂದು ಹೆಮ್ಮೆಯ ಗರಿ ಲಭಿಸಿದೆ. ಪೊಲೀಸ್ ಠಾಣೆ ನಿರ್ವಹಣೆ ಹಾಗೂ ಜನ ಸ್ನೇಹಿ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆಗೆ ಕುದೇರು ಪೊಲೀಸ್ ಠಾಣೆ ಪಾತ್ರವಾಗಿದೆ. ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಕುದೇರು ಪೊಲೀಸ್ ಠಾಣೆ (Kudur Police Station) ನಂಬರ್ ಓನ್, ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ.

ಪೊಲೀಸ್ ಠಾಣೆ ಅಂದ್ರೆ ಸಾಮಾನ್ಯವಾಗಿ ಮೂಗು ಮುರಿಯುವವರೆ ಹೆಚ್ಚು. ಯಾಕಪ್ಪ ಈ ಪೊಲೀಸರ ಸಹವಾಸ ಅಂತ ಮಾತಾಡ್ತಾರೆ. ಅದ್ರಲ್ಲೂ ಪೊಲೀಸ್ ಠಾಣೆ ಮೆಟ್ಟಿಲೇರೊ ಗೋಜೆ ಬೇಡ ಅಂತ ಮಾತನಾಡುವವರ ಸಂಖ್ಯೆ ಹೆಚ್ಚು. ಇನ್ನು ಠಾಣೆಗೆ ಹೋದ್ರೆ ಸರಿಯಾಗಿ ರೆಸ್ಪಾನ್ಸ್ ಮಾಡಿಲ್ಲ. ಏಕ ವಚನದಲ್ಲಿ ಮಾತಾಡ್ತಾರೆ ಅನ್ನೋ ದೂರುಗಳು ಸಹಜ. ಆದ್ರೆ ಇದೆಲ್ಲದಕ್ಕು ವಿರುದ್ದವಾಗಿ ರಾಜ್ಯದಲ್ಲಿ ಅತ್ಯುತ್ತಮ ಹಾಗೂ ಜನಸ್ನೇಹಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಕುದೇರು ಪೊಲೀಸ್ ಠಾಣೆ ರಾಜ್ಯದಲ್ಲೇ ನಂಬರ್ ಓನ್ ಪೊಲೀಸ್ ಠಾಣೆ ಹಾಗೂ ದೇಶದಲ್ಲೇ ಐದನೇ ಸ್ಥಾನ ಎಂಬ ಪ್ರಶಂಸೆ ಪಡೆದಿದೆ.

central awards chamarajanagar kudur police station to Karnataka Number 1 police station

ಕುದೇರು ಪೊಲೀಸ್ ಠಾಣೆ

ಇದನ್ನೂ ಓದಿ:ಆನೇಕಲ್: ಪ್ರೀತಿಸಿದ ವಿಚ್ಚೇದಿತ ಯುವತಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ಇನ್ನು ಯಾವ ಆಯಾಮದಲ್ಲಿ ಈ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದೆ ಎಂದು ನೋಡುವುದಾದರೆ. ಕ್ರೈಂ ಕಂಟ್ರೋಲ್, ಅಬಕಾರಿ ನೀತಿ, ಜನಸ್ನೇಹಿ, ಶುಚಿತ್ವ, ಕ್ರೈಂ ಪ್ರಿವೆನ್ಷನ್ ಸೇರಿದಂತೆ ಈ ಎಲ್ಲಾ ಆಯಾಮಗಳನ್ನ ಪರಿಶೀಲಿಸಿ ರಾಜ್ಯದ 2223 ಪೊಲೀಸ್ ಠಾಣೆಗಳ ಪೈಕಿ ಈಗ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದ್ದು ಈಗ ಸಾಕಷ್ಟು ಜನ ಮನ್ನಣೆಗೆ ಪಾತ್ರವಾಗಿದೆ.

ಒಟ್ಟಾರೆ ಚಾಮರಾಜನಗರ ಜಿಲ್ಲೆಯ ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ, ದೇಶದಲ್ಲೇ ಐದನೇ ಸ್ಥಾನ ಪಡೆದು ಈಗ ಸದ್ದು ಮಾಡುತ್ತಿದ್ದು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ
ದೆಹಲಿ ರೈಲ್ವೆ ನಿಲ್ದಾಣದಲ್ಲಿ ಕಾಲ್ತುಳಿತ ಸಂದರ್ಭದ ವಿಡಿಯೋ
ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ
ಡಾಲಿ ಧನಂಜಯ-ಧನ್ಯತಾ ಅದ್ದೂರಿ ಮದುವೆ; ಇಲ್ಲಿದೆ ಲೈವ್ ವಿಡಿಯೋ