ಚಾಮರಾಜನಗರ: ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ

ಕೇಂದ್ರ ಗೃಹ ಇಲಾಖೆ ಸರ್ವೆ ನಡೆಸಿದ್ದು ಕುದೇರು ಪೊಲೀಸ್ ಠಾಣೆಗೆ ಕರ್ನಾಟಕದ ನಂಬರ್ ಒನ್ ಸ್ಥಾನ ಸಿಕ್ಕಿದೆ. ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ. ರಾಜ್ಯದಲ್ಲೇ ಅತ್ಯುತ್ತಮ ಹಾಗೂ ಜನಸ್ನೇಹಿ ಠಾಣೆ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ರಾಜ್ಯದ 2223 ಪೊಲೀಸ್ ಠಾಣೆಗಳ ಪೈಕಿ ಈಗ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದ್ದು ಈಗ ಸಾಕಷ್ಟು ಜನ ಮನ್ನಣೆಗೆ ಪಾತ್ರವಾಗಿದೆ.

ಚಾಮರಾಜನಗರ: ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ
ಕುದೇರು ಪೊಲೀಸ್ ಠಾಣೆ
Edited By: ಆಯೇಷಾ ಬಾನು

Updated on: Feb 08, 2024 | 2:45 PM

ಚಾಮರಾಜನಗರ, ಫೆ.08: ಚಾಮರಾಜನಗರ (Chamarajanagar ) ಜಿಲ್ಲೆಗೆ ಮತ್ತೊಂದು ಹೆಮ್ಮೆಯ ಗರಿ ಲಭಿಸಿದೆ. ಪೊಲೀಸ್ ಠಾಣೆ ನಿರ್ವಹಣೆ ಹಾಗೂ ಜನ ಸ್ನೇಹಿ ಪೊಲೀಸ್ ಠಾಣೆ ಎಂಬ ಹೆಗ್ಗಳಿಕೆಗೆ ಕುದೇರು ಪೊಲೀಸ್ ಠಾಣೆ ಪಾತ್ರವಾಗಿದೆ. ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಕುದೇರು ಪೊಲೀಸ್ ಠಾಣೆ (Kudur Police Station) ನಂಬರ್ ಓನ್, ದೇಶದಲ್ಲೇ ಐದನೇ ಸ್ಥಾನ ಲಭಿಸಿದೆ.

ಪೊಲೀಸ್ ಠಾಣೆ ಅಂದ್ರೆ ಸಾಮಾನ್ಯವಾಗಿ ಮೂಗು ಮುರಿಯುವವರೆ ಹೆಚ್ಚು. ಯಾಕಪ್ಪ ಈ ಪೊಲೀಸರ ಸಹವಾಸ ಅಂತ ಮಾತಾಡ್ತಾರೆ. ಅದ್ರಲ್ಲೂ ಪೊಲೀಸ್ ಠಾಣೆ ಮೆಟ್ಟಿಲೇರೊ ಗೋಜೆ ಬೇಡ ಅಂತ ಮಾತನಾಡುವವರ ಸಂಖ್ಯೆ ಹೆಚ್ಚು. ಇನ್ನು ಠಾಣೆಗೆ ಹೋದ್ರೆ ಸರಿಯಾಗಿ ರೆಸ್ಪಾನ್ಸ್ ಮಾಡಿಲ್ಲ. ಏಕ ವಚನದಲ್ಲಿ ಮಾತಾಡ್ತಾರೆ ಅನ್ನೋ ದೂರುಗಳು ಸಹಜ. ಆದ್ರೆ ಇದೆಲ್ಲದಕ್ಕು ವಿರುದ್ದವಾಗಿ ರಾಜ್ಯದಲ್ಲಿ ಅತ್ಯುತ್ತಮ ಹಾಗೂ ಜನಸ್ನೇಹಿ ಎಂಬ ಹೆಗ್ಗಳಿಕೆಗೆ ಪಾತ್ರವಾಗಿದೆ. ಕೇಂದ್ರ ಗೃಹ ಇಲಾಖೆ ನಡೆಸಿದ ಸರ್ವೆಯಲ್ಲಿ ಚಾಮರಾಜನಗರ ಜಿಲ್ಲೆ ಚಾಮರಾಜನಗರ ತಾಲೂಕಿನ ಕುದೇರು ಪೊಲೀಸ್ ಠಾಣೆ ರಾಜ್ಯದಲ್ಲೇ ನಂಬರ್ ಓನ್ ಪೊಲೀಸ್ ಠಾಣೆ ಹಾಗೂ ದೇಶದಲ್ಲೇ ಐದನೇ ಸ್ಥಾನ ಎಂಬ ಪ್ರಶಂಸೆ ಪಡೆದಿದೆ.

ಕುದೇರು ಪೊಲೀಸ್ ಠಾಣೆ

ಇದನ್ನೂ ಓದಿ:ಆನೇಕಲ್: ಪ್ರೀತಿಸಿದ ವಿಚ್ಚೇದಿತ ಯುವತಿಗೆ ಬೇರೊಬ್ಬನ ಜೊತೆ ಅಕ್ರಮ ಸಂಬಂಧ; ಮನನೊಂದ ಯುವಕ ಆತ್ಮಹತ್ಯೆ

ಇನ್ನು ಯಾವ ಆಯಾಮದಲ್ಲಿ ಈ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದೆ ಎಂದು ನೋಡುವುದಾದರೆ. ಕ್ರೈಂ ಕಂಟ್ರೋಲ್, ಅಬಕಾರಿ ನೀತಿ, ಜನಸ್ನೇಹಿ, ಶುಚಿತ್ವ, ಕ್ರೈಂ ಪ್ರಿವೆನ್ಷನ್ ಸೇರಿದಂತೆ ಈ ಎಲ್ಲಾ ಆಯಾಮಗಳನ್ನ ಪರಿಶೀಲಿಸಿ ರಾಜ್ಯದ 2223 ಪೊಲೀಸ್ ಠಾಣೆಗಳ ಪೈಕಿ ಈಗ ಕುದೇರು ಪೊಲೀಸ್ ಠಾಣೆಗೆ ನಂಬರ್ ಓನ್ ಸ್ಥಾನ ಸಿಕ್ಕಿದ್ದು ಈಗ ಸಾಕಷ್ಟು ಜನ ಮನ್ನಣೆಗೆ ಪಾತ್ರವಾಗಿದೆ.

ಒಟ್ಟಾರೆ ಚಾಮರಾಜನಗರ ಜಿಲ್ಲೆಯ ಕುದೇರು ಪೊಲೀಸ್ ಠಾಣೆಗೆ ರಾಜ್ಯದಲ್ಲೇ ನಂಬರ್ ಓನ್ ಸ್ಥಾನ, ದೇಶದಲ್ಲೇ ಐದನೇ ಸ್ಥಾನ ಪಡೆದು ಈಗ ಸದ್ದು ಮಾಡುತ್ತಿದ್ದು ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುವ ಸಿಬ್ಬಂದಿಯ ಸಂತೋಷಕ್ಕೆ ಪಾರವೇ ಇಲ್ಲದಂತಾಗಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ಸೂರಜ್ ಪ್ರಸಾದ್ ಎಸ್.ಎನ್

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us