AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರದಲ್ಲಿ 5 ಹುಲಿಗಳ ಸಾವು ಕೇಸ್​: ಕ್ರಿಮಿನಾಶಕ ಬಳಸಿರುವುದು ವರದಿಯಲ್ಲಿ ದೃಢ

ಚಾಮರಾಜನಗರದ ಮಲೆ ಮಹದೇಶ್ವರ ವನ್ಯಧಾಮದಲ್ಲಿ 5 ಹುಲಿಗಳ ಹತ್ಯೆ ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಸಿತ್ತು. ರಾಜ್ಯ ಸರ್ಕಾರ ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿತ್ತು. ಇದೀಗ ಹುಲಿಗಳ ಹತ್ಯೆಗೆ ಕಾರ್ಬೋಫ್ಯುರಾನ್ ಕೀಟನಾಶಕ ಬಳಸಿರುವುದು ಫೋರೆನ್ಸಿಕ್ ಸೈನ್ಸ್ ಲ್ಯಾಬ್ ವರದಿಯಲ್ಲಿ ದೃಢವಾಗಿದೆ. ಟಿವಿ9ಗೆ ಅರಣ್ಯ ಇಲಾಖೆ ಮೂಲಗಳಿಂದ ಮಾಹಿತಿ ಲಭ್ಯವಾಗಿದೆ.

ಚಾಮರಾಜನಗರದಲ್ಲಿ 5 ಹುಲಿಗಳ ಸಾವು ಕೇಸ್​: ಕ್ರಿಮಿನಾಶಕ ಬಳಸಿರುವುದು ವರದಿಯಲ್ಲಿ ದೃಢ
ಮೃತ ಹುಲಿಗಳು
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jul 14, 2025 | 8:30 AM

Share

ಚಾಮರಾಜನಗರ, ಜುಲೈ 14: ಮಲೆ ಮಹದೇಶ್ವರ (Male Mahadeshwara) ವನ್ಯಧಾಮದಲ್ಲಿ 5 ಹುಲಿಗಳ (Tigers) ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಹುಲಿಗಳ ಹತ್ಯೆಗೆ ‘ಕಾರ್ಬೋಫ್ಯುರಾನ್​ ಕೀಟನಾಶಕ’ ಬಳಕೆ ಮಾಡಿರುವುದು ಇನ್ಸಿಟ್ಯೂಟ್ ಆಫ್ ಅನಿಮಲ್ ಹೆಲ್ತ್​ & ವೆಟರ್ನರಿ ಬಯೋಲಾಜಿಕಲ್​ ಫೋರೆನ್ಸಿಕ್ ಸೈನ್ಸ್ ಲ್ಯಾಬ್ ವರದಿಯಲ್ಲಿ ದೃಢ ಪಟ್ಟಿದೆ. ಈ ಬಗ್ಗೆ ಟಿವಿ9 ಗೆ ಅರಣ್ಯ ಇಲಾಖೆ ಉನ್ನತ ಮೂಲಗಳಿಂದ ಮಾಹಿತಿ ನೀಡಲಾಗಿದೆ. ಉನ್ನತ ಮಟ್ಟದ ತನಿಖಾ ಸಮಿತಿ ಶೀಘ್ರದಲ್ಲೇ ಅಂತಿಮ ವರದಿ ಸಲ್ಲಿಸಲಿದ್ದು, ಆ ಬಳಿಕ ಇನ್ನಷ್ಟು ಮಾಹಿತಿಗಳು ಬಹಿರಂಗವಾಗುವ ಸಾಧ್ಯತೆ ಇದೆ.

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮೀಣ್ಯಂ ಪ್ರದೇಶದಲ್ಲಿ ರಸ್ತೆ ಪಕ್ಕದ 100 ಮೀಟರ್ ದೂರದಲ್ಲೇ 5 ಹುಲಿಗಳು ಸಾವನ್ನಪ್ಪಿದ್ದವು. ಮೊದಲಿಗೆ ವಿಷಹಾಕಿ ಕೊಂದಿರುವ ಶಂಕೆ ವ್ಯಕ್ತಪಡಿಸಲಾಗಿತ್ತು. ಬಳಿಕ ಹುಲಿಗಳ ಸಾವಿಗೆ ವಿಷಪ್ರಾಶನವೇ ಕಾರಣ ಅನ್ನೋದು ಖಚಿತವಾಗಿತ್ತು. ಆದರೆ ಆ ವಿಷ ಯಾವುದು? ಎಷ್ಟು ಪ್ರಮಾಣದಲ್ಲಿ ಹಾಕಲಾಗಿತ್ತು ಅಂತಾ ತಿಳಿಯಲು ಲ್ಯಾಬ್‌ಗೆ ಸ್ಯಾಂಪಲ್‌ ಕಳಿಸಲಾಗಿತ್ತು. ಇದೀಗ ಅದರ ವರದಿ ಪ್ರಕಾರ ಹುಲಿ ಬೇಟೆಗೆ ಒಳಗಾಗಿದ್ದ ಹಸುವಿನ ಶವದ ಮೇಲೆ ಕಾರ್ಬೋಫ್ಯುರಾನ್ ಕೀಟನಾಶಕ ಸಿಂಪಡಣೆ ಮಾಡಿರುವುದು ದೃಢವಾಗಿದೆ.

ಇದನ್ನೂ ಓದಿ: 5 ಹುಲಿಗಳ ಸಾವು ಪ್ರಕರಣ: ಉನ್ನತ ಸಮಿತಿಯ ಪ್ರಾಥಮಿಕ ವರದಿಯಲ್ಲಿ ಸ್ಫೋಟಕ ಅಂಶ ಬಯಲಿಗೆ

ಇದನ್ನೂ ಓದಿ
Image
ಹುಲಿಗಳ ಅಸಹಜ ಸಾವು: ಐವರನ್ನು ವಶಕ್ಕೆ ಪಡೆದ ಅರಣ್ಯ ಇಲಾಖೆ
Image
5 ಹುಲಿಗಳ ಸಾವಿನ ಸುತ್ತ ಹಸು: ಸ್ಫೋಟಕ ಅಂಶ ಬಿಚ್ಚಿಟ್ಟ ಡಿಸಿಎಫ್
Image
ಚಾಮರಾಜನಗರದಲ್ಲಿ ವ್ಯಾಘ್ರ ಅಟ್ಟಹಾಸ: ತಿಂಗಳಲ್ಲಿ 2 ಜೀವ ಬಲಿ ಪಡೆದ ನರಭಕ್ಷಕ
Image
ಚಾಮರಾಜನಗರ: ಮೂತ್ರ ವಿಸರ್ಜನೆಗೆಂದು ಹೊರ ಬಂದ ವ್ಯಕ್ತಿ ಮೇಲೆ ಹುಲಿ ದಾಳಿ

ಹಸುವನ್ನು ಕೊಂದಿದ್ದಕ್ಕೆ ಪ್ರತೀಕಾರವಾಗಿ ಹುಲಿ ಹತ್ಯೆಗೆ ಆರೋಪಿಗಳು ಕಾರ್ಬೋಫ್ಯುರಾನ್ ಕೀಟನಾಶಕ ಬಳಕೆ ಮಾಡಿದ್ದಾರೆ. ವಾಸನೆ ರಹಿತವಾಗಿರುವ ಈ ಕಾರ್ಬೋಫ್ಯುರಾನ್ ಕೀಟನಾಶಕವನ್ನು ಕೊಬ್ಬಿನಾಂಶ ಹೆಚ್ಚಿರುವ ಹಸುವಿನ ಹಿಂಭಾಗದಲ್ಲಿ ಸಿಂಪಡಣೆ ಮಾಡಲಾಗಿದ್ದು, ಅದನ್ನು ತಿಂದು ಹುಲಿಗಳ ಸಾವಾಗಿರುವುದು ಉನ್ನತ ಮಟ್ಟದ ತನಿಖೆಯಲ್ಲಿ ದೃಢಪಟ್ಟಿದೆ.

ಪ್ರಕರಣ ಹಿನ್ನಲೆ

ಇತ್ತೀಚೆಗೆ ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ತಾಯಿ ಹುಲಿ ಸೇರಿದಂತೆ 3 ಹೆಣ್ಣು ಮತ್ತು 1 ಗಂಡು ಮರಿ ಹುಲಿಗಳು ಅಸಹಜವಾಗಿ ಸಾವನ್ನಪ್ಪಿದ್ದವು. ಹುಲಿಗಳ ಅಸಹಜ ಸಾವು ಪ್ರಕರಣವನ್ನು ಅರಣ್ಯ ಇಲಾಖೆ ಗಂಭೀರವಾಗಿ ಪರಿಗಣಿಸಿತ್ತು. ಬಳಿಕ ವಿಷಪ್ರಾಶಣ ಮಾಡಿರುವುದು ಪ್ರಾಥಮಿಕ ತನಿಖೆಯಲ್ಲಿ ಬಹಿರಂಗವಾಗಿತ್ತು.

ಇದನ್ನೂ ಓದಿ: ಚಾಮರಾಜನಗರ: ಹುಲಿ ಹಂತಕರು 3 ದಿನ ಅರಣ್ಯಾಧಿಕಾರಿಗಳ ಕಸ್ಟಡಿಗೆ

ಪ್ರಕರಣ ಸಾಕಷ್ಟು ಸಂಚಲನ ಸೃಷ್ಟಿಯಾಗುತ್ತಿದ್ದಂತೆ ಸರ್ಕಾರ ಸಮಿತಿ ಕೂಡ ರಚನೆ ಮಾಡಿತ್ತು. ಬಳಿಕ ಪೊಲೀಸರು ಐದು ಹುಲಿಗಳನ್ನ ಕೊಂದ ಮೂವರು ಕಿರಾತಕರನ್ನು ಕೊನೆಗೂ ಅರೆಸ್ಟ್ ಮಾಡಿದ್ದರು. ಪೊಲೀಸರ ವಿಚಾರಣೆಯಲ್ಲಿ ಹಸು ಕೊಂದಿದ್ದಕ್ಕೆ ಪ್ರತೀಕಾರವಾಗಿ ಹುಲಿ ಹತ್ಯೆ ಮಾಡಿರುವುದಾಗಿ ಆರೋಪಿಗಳು ಬಾಯಿಬಿಟ್ಟಿದ್ದರು. ಅಲ್ಲದೇ ಹುಲಿಗಳ ಸಾವಿಗೆ ಅಧಿಕಾರಿಗಳ ಕರ್ತವ್ಯಲೋಪ ಆರೋಪ ಕೂಡ ಕೇಳಿಬಂದಿತ್ತು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Follow Us
Suraj Prasad SN
Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?