ಚಾಮರಾಜನಗರ: ಮಹರಾಷ್ಟ್ರದ 8 ಮಕ್ಕಳು ವಿಷದ ಹಣ್ಣು ತಿಂದು ಅಸ್ವಸ್ಥ, ಮುಂದುವರಿದ ಚಿಕಿತ್ಸೆ

ಕಬ್ಬು ಕಟಾವು ಮಾಡುವುದಕ್ಕೆಂದು ಮಹಾರಾಷ್ಟ್ರದಿಂದ ಬಂದು ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಯರಿಯೂರಿನಲ್ಲಿ ಬಂದು ನೆಲೆ ನಿಂತ ಕುಟುಂಬಗಳೀಗ ಸಂಕಷ್ಟಕ್ಕೆ ಸಿಲುಕಿವೆ. ಅವರ ಮಕ್ಕಳು ಹಾಗೂ ಒಬ್ಬ ಮಹಿಳೆ ಅಸ್ವಸ್ಥರಾಗಿ ಆಸ್ಪತ್ರೆ ಸೇರಿದ್ದಾರೆ. ಅಷ್ಟಕ್ಕೂ, ಇದಕ್ಕೆಲ್ಲ ಕಾರಣವಾಗಿದ್ದು ಅವರೆಲ್ಲ ಒಂದು ಹಣ್ಣನ್ನು ತಿಂದಿರುವುದು! ವಿವರಗಳಿಗೆ ಮುಂದೆ ಓದಿ.

ಚಾಮರಾಜನಗರ: ಮಹರಾಷ್ಟ್ರದ 8 ಮಕ್ಕಳು ವಿಷದ ಹಣ್ಣು ತಿಂದು ಅಸ್ವಸ್ಥ, ಮುಂದುವರಿದ ಚಿಕಿತ್ಸೆ
ಅಸ್ವಸ್ಥರಾದ ಮಕ್ಕಳಿಗೆ ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Edited By:

Updated on: Aug 04, 2025 | 7:46 AM

ಚಾಮರಾಜನಗರ, ಆಗಸ್ಟ್ 4: ಅವರೆಲ್ಲಾ ಕಬ್ಬು ಕಟಾವು ಮಾಡುವುದಕ್ಕಾಗಿ ದೂರದ ಮಹರಾಷ್ಟ್ರದಿಂದ (Maharashtra) ಬಂದವರು. ಹೀಗೆ ಬಂದವರು ಕುಟುಂಬ ಸಮೇತ ಚಾಮರಾಜನಗರದಲ್ಲಿ (Chamarajanagar) ನೆಲೆ ನಿಂತಿದ್ದರು. ಆದರೆ ಅವರ ಮಕ್ಕಳು ತಿಂದ ಹಣ್ಣು ಈಗ ಜೀವಕ್ಕೇ ಕುತ್ತು ತಂದಿದೆ. ಕಬ್ಬು ಕಟಾವು ಮಾಡುವುದಕ್ಕಾಗಿ ಮಹರಾಷ್ಟ್ರದಿಂದ ಬರೋಬ್ಬರಿ 13 ಕುಟುಂಬಗಳು ಯಳಂದೂರು ತಾಲೂಕಿನ ಯರಿಯೂರಿಗೆ ಬಂದು ನೆಲೆಸಿದೆ. ಹೀಗೆ ಬಂದವರ ಮಕ್ಕಳು ಭಾನುವಾರ ವಿಷದ ಹಣ್ಣು ತಿಂದು ಆಸ್ಪತ್ರೆಗೆ ದಾಖಲಾಗಿದ್ದಾರೆ.

ಪಿಚಣ್ಣು ಎಂಬ ಕಾಡಿನ ಹಣ್ಣನ್ನು ತಿಂದ ಪರಿಣಾಮ ಓರ್ವ ಮಹಿಳೆ ಹಾಗೂ 8 ಮಕ್ಕಳಿಗೆ ಇದ್ದಕ್ಕಿದ್ದಂತೆ ವಾಂತಿ ಶುರುವಾಗಿದೆ. ತಕ್ಷಣವೇ 108 ಸಹಾಯವಾಣಿಗೆ ಕರೆ ಮಾಡಿ ಮಾಹಿತಿ ನೀಡಲಾಗಿದೆ. ಅಸ್ವಸ್ಥಗೊಂಡ ಎಲ್ಲರನ್ನೂ ತಕ್ಷಣವೇ ಚಾಮರಾಜನಗರದ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ.

ಸದ್ಯ ಗ್ಲೂಕೋಸ್ ಹಾಗೂ ಆಕ್ಸಿಜನ್ ನೀಡಿ ಮಕ್ಕಳು ಹಾಗೂ ಮಹಿಳೆಗೆ ಚಿಕಿತ್ಸೆ ಮುಂದುವರೆದಿದೆ. ಎಲ್ಲ ರೋಗಿಗಳು ಚೇತರಿಸಿಕೊಂಡಿದ್ದಾರೆ. ಆದರೆ ಮೂವರ ಸ್ಥಿತಿ ಗಂಭೀರವಾಗಿದೆ. ಇವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಇದನ್ನೂ ಓದಿ
ಮುಸ್ಲಿಂ ಮುಖ್ಯಶಿಕ್ಷಕನ ವರ್ಗಾವಣೆಗೆ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ವಿಷ
ರಾಜ್ ಅಪಹರಣ ನಡೆದ ದಿನ ಗಾಜನೂರಲ್ಲಿರುವ ಸಂಬಂಧಿಗಳಿಗೆ ಕಣ್ಣಿಗೆ ಕಟ್ಟಿದಂತಿದೆ
ಹುಲಿರಾಯನ ಫೋಸ್​ ಕಂಡು ಹೌದು ಹುಲಿಯಾ ಎಂದ ಪ್ರವಾಸಿಗರು
ಈ 2 ದಿನ ಹಿಮವದ್ ಗೋಪಾಲಸ್ವಾಮಿ ಬೆಟ್ಟಕ್ಕೆ ಪ್ರವಾಸಿಗರಿಗೆ ನಿಷೇಧ

ಇದನ್ನೂ ಓದಿ: ಮುಸ್ಲಿಂ ಮುಖ್ಯಶಿಕ್ಷಕನ ವರ್ಗಾವಣೆಗೆ ಶಾಲೆಯ ಕುಡಿಯುವ ನೀರಿನ ಟ್ಯಾಂಕಿಗೆ ವಿಷ: ಬಿಜೆಪಿ ನಾಯಕರಿಗ ಸಿಎಂ ತರಾಟೆ

ಒಟ್ಟಾರೆ, ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದ್ದು 24 ಗಂಟೆ ನಿಗಾ ವಹಿಸಲಾಗುತ್ತಿದೆ. ಅಸ್ವಸ್ಥರು ಆದಷ್ಟು ಬೇಗ ಚೇತರಿಸಿಕೊಳ್ಳುವ ವಿಶ್ವಾಸವನ್ನು ವೈದ್ಯರು ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Suraj Prasad SN

ಸೂರಜ್ ಪ್ರಸಾದ್ ಎಸ್.ಎನ್ ಆದ ನಾನು ಹುಟ್ಟಿದ್ದು ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ. ಬೆಳೆದಿದ್ದು ದಾವಣಗರೆ ಜಿಲ್ಲೆ ನ್ಯಾಮತಿ ತಾಲೂಕಿನಲ್ಲಿ. ಶಿವಮೊಗ್ಗದ ಸಹ್ಯಾದ್ರಿ ಕಾಲೇಜ್ ನಲ್ಲಿ ಪತ್ರಿಕೋದ್ಯಮದಲ್ಲಿ ಪದವಿಪೂರ್ವ ಶಿಕ್ಷಣ ಪಡೆದಿದ್ದು 2014ರಿಂದ ನನ್ನ ಎಲೆಕ್ಟ್ರಾನಿಕ್ ಮಾದ್ಯಮದ ವೃತ್ತಿ ಜೀವನವನ್ನ ಬೆಂಗಳೂರಿನಲ್ಲಿ ಕ್ರೈಂ ಬೀಟ್ ವರದಿಗಾರನಾಗಿ ಆರಂಭಿಸಿದ್ದು ಬೆಂಗಳೂರಿನಲ್ಲಿ 8 ವರ್ಷಗಳ ಕ್ರೈಂ ವರದಿಗಾರನಾಗಿ ಸೇವೆ ಸಲ್ಲಿಸಿ. ನಾಲ್ಕು ಸಂಸ್ಥೆಯಲ್ಲಿ ಕ್ರೈಂ ರಿಪೋರ್ಟರ್ ಹಾಗೂ ಕ್ರೈಂ ಇನ್ವೆಸ್ಟಿಗೇಟಿವ್ ವರದಿಗಾರನಾಗಿ ಹಾಗೂ ಸ್ಟಿಂಗ್ ಅಪರೇಷನ್ ಗಳನ್ನ ಮಾಡಿದ್ದೇನೆ. ಗೌರಿ ಲಂಕೇಶ್ ಕೊಲೆ ಕೇಸನ್ನ ರಾಜ್ಯದಲ್ಲೇ ಮೊದಲು ಬ್ರೇಕ್ ಮಾಡಿ ಈ ಹಿಂದಿನ ಸಂಸ್ಥೆಯಿಂದ ಪ್ರಶಂಸೆ ಪಡೆದಿರುತ್ನೇನೆ2019 ರಲ್ಲಿ ಪಿಎಸ್ಐ ಅಕ್ರಮದ ಸ್ಟಿಂಗ್ ಆಪರೇಷನ್ ಹಾಗೂ ಬೆಂಗಳೂರು ಸಿಂಥಟಿಕ್ ಡ್ರಗ್ ಮಾಫಿಯಾದ ಸ್ಟಿಂಗ್ ಆಪರೇಷನ್ ಮಾಡಿದ್ದು. ಕಳೆದ 10 ವರ್ಷಗಳಿಂದ ಸಕ್ರೀಯವಾಗಿ ಕಾರ್ಯ ನಿರ್ವಹಿಸುತ್ತಿದ್ದೇನೆ. ಟಿವಿ9 ಸಂಸ್ಥೆಗೆ ಮಂಡ್ಯ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡಿ ಬಳಿಕ ಚಾಮರಾಜನಗರಕ್ಕೆ ವರ್ಗಾವಣೆಯಾಗಿ ಈಗ ಪ್ರಸ್ಥುತ ಚಾಮರಾಜನಗರ ಜಿಲ್ಲಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಹವ್ಯಾಸ ಅಡಿಗೆ ಮಾಡುವುದು, ಕ್ರಿಕೆಟ್ ಆಡುವುದು ಕ್ರೈಂ ಇನ್ವೆಷ್ಟಿಗೇಷನ್ ನಾವೆಲ್ ಗಳನ್ನ ಓದುವುದು.

Read More
Follow Us