Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿಗೆ ಬಿದ್ದ ವ್ಯಕ್ತಿ! ಆಮೇಲೇನಾಯ್ತು…

ಕೆಟ್ಟ ಕುತೂಹಲ ಒಮ್ಮೊಮ್ಮೆ ಎಂಥಾ ಅವಾಂತರಗಳಿಗೆ ಕಾರಣವಾಗುತ್ತದೆ ಎಂಬುದಕ್ಕೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಚಿರತೆ ಸೆರೆಗೆಂದು ಅರಣ್ಯ ಇಲಾಖೆಯವರು ಇಟ್ಟ ಬೋನಿನೊಳಗೆ ವ್ಯಕ್ತಿಯೊಬ್ಬ ಸಿಕ್ಕಿಹಾಕಿಕೊಂಡಿದ್ದಾನೆ. ಕೊನೆಗೆ ಆತ ಬಚಾವಾಗಿದ್ದು ಹೇಗೆ? ತಿಳಿಯಲು ಮುಂದೆ ಓದಿ.

ಚಾಮರಾಜನಗರ: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿಗೆ ಬಿದ್ದ ವ್ಯಕ್ತಿ! ಆಮೇಲೇನಾಯ್ತು...
ಚಿರತೆ ಬೋನಿನಲ್ಲಿ ಹನುಮಂತಯ್ಯ
Follow us
ಸೂರಜ್ ಪ್ರಸಾದ್ ಎಸ್.ಎನ್
| Updated By: Ganapathi Sharma

Updated on: Jan 17, 2025 | 12:46 PM

ಚಾಮರಾಜನಗರ, ಜನವರಿ 17: ಚಿರತೆಯನ್ನು ಸೆರೆ ಹಿಡಿಯುವುದಕ್ಕೆಂದು ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಲುಕಿಕೊಂಡ ವಿಚಿತ್ರ ಪ್ರಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಬೋನಿಗೆ ಬಿದ್ದ ವ್ಯಕ್ತಿಯನ್ನು ಗ್ರಾಮದ ಹನುಮಂತಯ್ಯ ಎಂದು ಗುರುತಿಸಲಾಗಿದ್ದು, ಸದ್ಯ ಆತನನ್ನು ರಕ್ಷಿಸಲಾಗಿದೆ.

ಪಡಗೂರು ಗ್ರಾಮದಲ್ಲಿ ನಡೆದಿದ್ದೇನು?

ಪಡಗೂರು ಗ್ರಾಮದ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಹೀಗಾಗಿ ಚಿರತೆಯನ್ನು ಸೆರೆ ಹಿಡಿದು ಜನರಿಗೆ ಸುರಕ್ಷತೆ ಒದಗಿಸುವಂತೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಯನ್ನು ಪುರಸ್ಕರಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಮಹದೇವಸ್ವಾಮಿ ಎಂಬವರ ಜಮೀನಿನಲ್ಲಿ ಬೋನು ಇಟ್ಟಿದ್ದರು. ಜೊತೆಗೆ ಬೋನಿನ ಒಳಗೆ ಕರು ಒಂದನ್ನು ಇರಿಸಿದ್ದರು.

ಇಷ್ಟೆಲ್ಲಾ ಆದ ಬಳಿಕ ಹನುಮಂತಯ್ಯ ಬೋನಿನ ಸಮೀಪ ಹೋಗಿದ್ದಾನೆ. ಬೋನು ಹೇಗಿದೆ ಎಂದು ನೋಡಲು ಒಳಗಡೆ ಹೋಗಿದ್ದಾನೆ. ಆತ ಒಳಗಡೆ ಹೋಗುತ್ತಿದ್ದಂತೆಯೇ ಬೋನಿನ ಗೇಟ್ ಲಾಕ್ ಆಗಿದೆ. ಹೀಗಾಗಿ ಸುಮಾರು ನಾಲ್ಕೈದು ಗಂಟೆ ಆತ ಅದರ ಒಳಗಡೆ ಸಿಲುಕಿದ್ದಾನೆ.

Hanumantaiah In Cage

ಚಿರತೆ ಬೋನಿನಲ್ಲಿ ಹನುಮಂತಯ್ಯ

ಇದಾದ ಸುಮಾರು ಹೊತ್ತಿನ ಬಳಿಕ ಜಮೀನಿಗೆ ಕೆಲಸಕ್ಕೆಂದು ಬಂದ ಕೂಲಿ ಕಾರ್ಮಿಕರು ಹನುಮಂತಯ್ಯ ಬೋನಿನ ಒಳಗೆ ಇರುವುದನ್ನು ಗಮನಿಸಿದ್ದಾರೆ. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಿ ಸಿಬ್ಬಂದಿ ಹನುಮಂತಯ್ಯನನ್ನು ರಕ್ಷಿಸಿದ್ದಾರೆ.

ಹೆಚ್ಚಿದ ವನ್ಯ ಪ್ರಾಣಿ – ಮಾನವ ಸಂಘರ್ಷ

ಚಾಮರಾಜನಗರ ಜಿಲ್ಲೆಯಾದ್ಯಂತ ಕಳೆದ ಕೆಲವು ತಿಂಗಳುಗಳಿಂದ ವನ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ಹೆಚ್ಚಾಗಿದೆ. ಒಂದೆಡೆ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಬೆಳೆಗಳನ್ನು ನಾಶ ಮಾಡುತ್ತಿವೆ. ಮತ್ತೊಂದೆಡೆ ಚಿರತೆ ಕಾಟ ಜನರನ್ನು ಆತಂಕಕ್ಕೆ ಈಡುಮಾಡಿದೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಎರಡು ವರ್ಷಗಳಲ್ಲಿ 24 ಸರ್ಕಾರಿ ಶಾಲೆಗಳಿಗೆ ಬಿತ್ತು ಬೀಗ!

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು ಹಾಗೂ ಹುಲಿ ಸಂಚಾರ ಕೆಲವು ದಿನಗಳ ಹಿಂದೆ ಕಂಡುಬಂದಿತ್ತು. ಆನೆಗಳ ಹಿಂಡು ಹಾಗೂ ಹುಲಿ ರಸ್ತೆ ದಾಟುತ್ತಿರುವ ವಿಡಿಯೋ ಪ್ರವಾಸಿಗರ ಮೊಬೈಲ್​ನಲ್ಲಿ ರೆಕಾರ್ಡ್​ ಆಗಿದ್ದು, ವೈರಲ್ ಆಗಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ಆಣೆ ಪ್ರಮಾಣ ಮಾಡುವುದು ಯಾಕೆ? ಆಣೆ ತಪ್ಪಿದರೆ ಏನಾಗುತ್ತದೆ ನೋಡಿ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
ರವಿ ಮೀನ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ಇಲ್ಲಿದೆ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
‘ಕಾವೇರಿ ಆರತಿ’: ಜಲ ರಕ್ಷಣೆ ಬಗ್ಗೆ ಡಿಕೆ ಶಿವಕುಮಾರ್​​ ಪ್ರತಿಜ್ಞಾವಿಧಿ
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಟಿವಿ9 ಎಕ್ಸ್​ಪೋನಲ್ಲಿ ರಾಶಿಕಾ ಶೆಟ್ಟಿ ಸುತ್ತಾಟ, ನಟಿಗೆ ಇಷ್ಟವಾಗಿದ್ದೇನು?
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸ್ಪೀಕರ್ ವರ್ತನೆ ಸರಿಯಾ ತಪ್ಪಾ ಅಂತ ಜನ ತೀರ್ಮಾನಿಸುತ್ತಾರೆ: ಯುಟಿ ಖಾದರ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ಸರ್ಕಾರದ ಕ್ರಮವನ್ನು ಹೈಕೋರ್ಟ್​​ನಲ್ಲಿ ಪ್ರಶ್ನಿಸುತ್ತೇವೆ: ಬಸನಗೌಡ ಯತ್ನಾಳ್
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ನಿರ್ದೇಶಕ ಎಟಿ ರಘು ನಿಧನದ ಸುದ್ದಿ ಕೇಳಿ ಆಘಾತ ಆಯಿತು: ದೊಡ್ಡಣ್ಣ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸದನದ ಗೌರವ ಕಾಪಾಡಲು ನಾವು ಹೋರಾಟ ಮಾಡಿದ್ದು: ಅಶೋಕ
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
ಸಸ್ಪೆಂಡ್ ಮಾಡುವ ಪ್ರಸ್ತಾವನೆ ಮಂಡಿಸಿದ ಸಂಸದೀಯ ವ್ಯವಹಾರಗಳ ಸಚಿವ ಪಾಟೀಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್
18 ಬಿಜೆಪಿ ಶಾಸಕರು ಅಮಾನತು: ಕೈಕಾಲು ಹಿಡ್ದು ಮುನಿರತ್ನನ ಹೊರಹಾಕಿದ ಮಾರ್ಷಲ್