AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿಗೆ ಬಿದ್ದ ವ್ಯಕ್ತಿ! ಆಮೇಲೇನಾಯ್ತು…

ಕೆಟ್ಟ ಕುತೂಹಲ ಒಮ್ಮೊಮ್ಮೆ ಎಂಥಾ ಅವಾಂತರಗಳಿಗೆ ಕಾರಣವಾಗುತ್ತದೆ ಎಂಬುದಕ್ಕೆ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದ ಈ ಘಟನೆಯೇ ಸಾಕ್ಷಿ. ಚಿರತೆ ಸೆರೆಗೆಂದು ಅರಣ್ಯ ಇಲಾಖೆಯವರು ಇಟ್ಟ ಬೋನಿನೊಳಗೆ ವ್ಯಕ್ತಿಯೊಬ್ಬ ಸಿಕ್ಕಿಹಾಕಿಕೊಂಡಿದ್ದಾನೆ. ಕೊನೆಗೆ ಆತ ಬಚಾವಾಗಿದ್ದು ಹೇಗೆ? ತಿಳಿಯಲು ಮುಂದೆ ಓದಿ.

ಚಾಮರಾಜನಗರ: ಚಿರತೆ ಸೆರೆಗಾಗಿ ಇಟ್ಟಿದ್ದ ಬೋನಿಗೆ ಬಿದ್ದ ವ್ಯಕ್ತಿ! ಆಮೇಲೇನಾಯ್ತು...
ಚಿರತೆ ಬೋನಿನಲ್ಲಿ ಹನುಮಂತಯ್ಯ
ಸೂರಜ್ ಪ್ರಸಾದ್ ಎಸ್.ಎನ್
| Edited By: |

Updated on: Jan 17, 2025 | 12:46 PM

Share

ಚಾಮರಾಜನಗರ, ಜನವರಿ 17: ಚಿರತೆಯನ್ನು ಸೆರೆ ಹಿಡಿಯುವುದಕ್ಕೆಂದು ಇಟ್ಟಿದ್ದ ಬೋನಿನಲ್ಲಿ ವ್ಯಕ್ತಿಯೊಬ್ಬ ಸಿಲುಕಿಕೊಂಡ ವಿಚಿತ್ರ ಪ್ರಕರಣ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಪಡಗೂರು ಗ್ರಾಮದಲ್ಲಿ ನಡೆದಿದೆ. ಬೋನಿಗೆ ಬಿದ್ದ ವ್ಯಕ್ತಿಯನ್ನು ಗ್ರಾಮದ ಹನುಮಂತಯ್ಯ ಎಂದು ಗುರುತಿಸಲಾಗಿದ್ದು, ಸದ್ಯ ಆತನನ್ನು ರಕ್ಷಿಸಲಾಗಿದೆ.

ಪಡಗೂರು ಗ್ರಾಮದಲ್ಲಿ ನಡೆದಿದ್ದೇನು?

ಪಡಗೂರು ಗ್ರಾಮದ ಸುತ್ತಮುತ್ತ ಕಳೆದ ಕೆಲವು ದಿನಗಳಿಂದ ಚಿರತೆ ಹಾವಳಿ ಹೆಚ್ಚಾಗಿತ್ತು. ಹೀಗಾಗಿ ಚಿರತೆಯನ್ನು ಸೆರೆ ಹಿಡಿದು ಜನರಿಗೆ ಸುರಕ್ಷತೆ ಒದಗಿಸುವಂತೆ ಸ್ಥಳೀಯರು ಅರಣ್ಯ ಇಲಾಖೆ ಸಿಬ್ಬಂದಿಗೆ ಮನವಿ ಮಾಡಿದ್ದರು. ಗ್ರಾಮಸ್ಥರ ಮನವಿಯನ್ನು ಪುರಸ್ಕರಿಸಿದ್ದ ಅರಣ್ಯ ಇಲಾಖೆ ಸಿಬ್ಬಂದಿ, ಮಹದೇವಸ್ವಾಮಿ ಎಂಬವರ ಜಮೀನಿನಲ್ಲಿ ಬೋನು ಇಟ್ಟಿದ್ದರು. ಜೊತೆಗೆ ಬೋನಿನ ಒಳಗೆ ಕರು ಒಂದನ್ನು ಇರಿಸಿದ್ದರು.

ಇಷ್ಟೆಲ್ಲಾ ಆದ ಬಳಿಕ ಹನುಮಂತಯ್ಯ ಬೋನಿನ ಸಮೀಪ ಹೋಗಿದ್ದಾನೆ. ಬೋನು ಹೇಗಿದೆ ಎಂದು ನೋಡಲು ಒಳಗಡೆ ಹೋಗಿದ್ದಾನೆ. ಆತ ಒಳಗಡೆ ಹೋಗುತ್ತಿದ್ದಂತೆಯೇ ಬೋನಿನ ಗೇಟ್ ಲಾಕ್ ಆಗಿದೆ. ಹೀಗಾಗಿ ಸುಮಾರು ನಾಲ್ಕೈದು ಗಂಟೆ ಆತ ಅದರ ಒಳಗಡೆ ಸಿಲುಕಿದ್ದಾನೆ.

Hanumantaiah In Cage

ಚಿರತೆ ಬೋನಿನಲ್ಲಿ ಹನುಮಂತಯ್ಯ

ಇದಾದ ಸುಮಾರು ಹೊತ್ತಿನ ಬಳಿಕ ಜಮೀನಿಗೆ ಕೆಲಸಕ್ಕೆಂದು ಬಂದ ಕೂಲಿ ಕಾರ್ಮಿಕರು ಹನುಮಂತಯ್ಯ ಬೋನಿನ ಒಳಗೆ ಇರುವುದನ್ನು ಗಮನಿಸಿದ್ದಾರೆ. ನಂತರ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ. ಬಳಿಕ ಸ್ಥಳಕ್ಕಾಗಿ ಸಿಬ್ಬಂದಿ ಹನುಮಂತಯ್ಯನನ್ನು ರಕ್ಷಿಸಿದ್ದಾರೆ.

ಹೆಚ್ಚಿದ ವನ್ಯ ಪ್ರಾಣಿ – ಮಾನವ ಸಂಘರ್ಷ

ಚಾಮರಾಜನಗರ ಜಿಲ್ಲೆಯಾದ್ಯಂತ ಕಳೆದ ಕೆಲವು ತಿಂಗಳುಗಳಿಂದ ವನ್ಯ ಪ್ರಾಣಿ ಮತ್ತು ಮಾನವ ಸಂಘರ್ಷ ಹೆಚ್ಚಾಗಿದೆ. ಒಂದೆಡೆ ಕಾಡಾನೆಗಳ ಉಪಟಳ ಹೆಚ್ಚಾಗಿದ್ದು, ಬೆಳೆಗಳನ್ನು ನಾಶ ಮಾಡುತ್ತಿವೆ. ಮತ್ತೊಂದೆಡೆ ಚಿರತೆ ಕಾಟ ಜನರನ್ನು ಆತಂಕಕ್ಕೆ ಈಡುಮಾಡಿದೆ.

ಇದನ್ನೂ ಓದಿ: ಚಾಮರಾಜನಗರ ಜಿಲ್ಲೆಯಲ್ಲಿ ಎರಡು ವರ್ಷಗಳಲ್ಲಿ 24 ಸರ್ಕಾರಿ ಶಾಲೆಗಳಿಗೆ ಬಿತ್ತು ಬೀಗ!

ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಬಿಳಿಗಿರಿರಂಗನಬೆಟ್ಟದ ಮುಖ್ಯರಸ್ತೆಯಲ್ಲಿ ಕಾಡಾನೆಗಳ ಹಿಂಡು ಹಾಗೂ ಹುಲಿ ಸಂಚಾರ ಕೆಲವು ದಿನಗಳ ಹಿಂದೆ ಕಂಡುಬಂದಿತ್ತು. ಆನೆಗಳ ಹಿಂಡು ಹಾಗೂ ಹುಲಿ ರಸ್ತೆ ದಾಟುತ್ತಿರುವ ವಿಡಿಯೋ ಪ್ರವಾಸಿಗರ ಮೊಬೈಲ್​ನಲ್ಲಿ ರೆಕಾರ್ಡ್​ ಆಗಿದ್ದು, ವೈರಲ್ ಆಗಿತ್ತು.

ಕರ್ನಾಟಕದ  ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಗೆಳೆಯರೊಂದಿಗೆ ಬ್ಯಾಡ್ಮಿಂಟನ್ ಆಟವಾಡುತ್ತಿದ್ದ ಉದ್ಯಮಿಗೆ ಹೃದಯಾಘಾತ
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಧ್ರುವ ಬಗ್ಗೆ ಅಸಭ್ಯ ಮಾತಾಡಿದ್ದಕ್ಕೆ ಕಾರಣ ತಿಳಿಸಿದ ಕನಕಪುರ ಶ್ರೀನಿವಾಸ್
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
ಮಕ್ಕಳು ಮೊಬೈಲ್ ಅಡಿಕ್ಷನ್ ಆಗಿರುವ ಲಕ್ಷಣಗಳು ಹೇಗಿರುತ್ತೆ?
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
50 ಎಕರೆ ಸವಾಲು ಹಾಕಿದ ಮಾಜಿ ಶಾಸಕರಿಗೆ ವಿಡಿಯೋ ಟಾಂಗ್ ಕೊಟ್ಟ ತಂಗಡಗಿ
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಕುಡಿದ ನಶೆಯಲ್ಲಿ ಮಾಡಿದ ಎಡವಟ್ಟಿಗೆ ಸುಟ್ಟು ಕರಕಲಾದ ಬಸ್‌
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಪತ್ನಿಯನ್ನ ಹತ್ಯೆಗೈದ ಪತಿ: ಶಾಕಿಂಗ್ ಮಾಹಿತಿ ಬಿಚ್ಚಿಟ್ಟ ಆಯುಕ್ತ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಶತಕ ಬಾರಿಸಿ ಇಶಾನ್ ಕಿಶನ್ ದಾಖಲೆ ಮುರಿದ ಪಾಕ್ ಆರಂಭಿಕ
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸಾರ್ವಜನಿಕವಾಗಿ ಮಚ್ಚು ಹಿಡಿದ ಪ್ರಕರಣ: ನಟ ಪ್ರಖ್ಯಾತ್ ಹೇಳಿದ್ದೇನು?
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಸೆಮಿಫೈನಲ್‌ ಪಂದ್ಯದಲ್ಲಿ ಸತತ 2ನೇ ಶತಕ ಬಾರಿಸಿದ ಸ್ಮರಣ್ ರವಿಚಂದ್ರನ್
ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ
ಅವನ ಸಹವಾಸ ಬೇಡ ಅಂದ್ರೂ ಕೇಳಿಲ್ಲ: ಪ್ರಿಯಕರನ ಅಸಲಿಮುಖ ಬಿಚ್ಚಿಟ್ಟ ಮಂಗಳಮುಖಿ