AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Chamarajanagar: ಸಾರಿಗೆ ವೆಚ್ಚ ಭರಿಸಲಾಗದೇ ಪತ್ನಿಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ಭುಜದ ಮೇಲೆ ಹೊತ್ತೊಯ್ದ ವ್ಯಕ್ತಿ

ಪತ್ನಿಯ ಶವ ಸಾಗಿಸಲು ಹಣವಿಲ್ಲ ಎಂದು ಅಲೆಮಾರಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶವವನ್ನು ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಹಾಕಿಕೊಂಡು ಆಕೆಯ ಅಂತ್ಯ ಸಂಸ್ಕಾರ ನಡೆಸಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ.

Chamarajanagar: ಸಾರಿಗೆ ವೆಚ್ಚ ಭರಿಸಲಾಗದೇ ಪತ್ನಿಯ ಶವವನ್ನು ಗೋಣಿ ಚೀಲದಲ್ಲಿ ಹಾಕಿ ಭುಜದ ಮೇಲೆ ಹೊತ್ತೊಯ್ದ ವ್ಯಕ್ತಿ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on:Dec 08, 2022 | 1:10 PM

Share

ಚಾಮರಾಜನಗರ: ಪತ್ನಿಯ ಶವ ಸಾಗಿಸಲು ಹಣವಿಲ್ಲ ಎಂದು ಅಲೆಮಾರಿ ವ್ಯಕ್ತಿಯೊಬ್ಬ ತನ್ನ ಪತ್ನಿಯ ಶವವನ್ನು ಪ್ಲಾಸ್ಟಿಕ್ ಗೋಣಿ ಚೀಲದಲ್ಲಿ ಹಾಕಿಕೊಂಡು ಆಕೆಯ ಅಂತ್ಯ ಸಂಸ್ಕಾರ ನಡೆಸಿರುವ ದಾರುಣ ಘಟನೆ ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನಲ್ಲಿ ನಡೆದಿದೆ. ಕಡು ಬಡತನದಲ್ಲಿ ಜೀವನ ಸಾಗಿಸುತ್ತಿದ್ದ ಮಂಡ್ಯ ತಾಲೂಕಿನ ಮಳವಳ್ಳಿಯ ಕಾಗೇಪುರದ ಅಲೆಮಾರಿ ದಂಪತಿ ಈ ಪ್ರದೇಶದಲ್ಲಿ ಚಿಂದಿ ಆಯುವ ಕೆಲಸ ಮಾಡುತ್ತಿದ್ದರು. ಈ ಇಬ್ಬರು ದಂಪತಿಯನ್ನು ರವಿ ಮತ್ತು ಅವರ ಪತ್ನಿ ಕಾಳಮ್ಮ (26) ಎಂದು ಗುರುತಿಸಲಾಗಿದೆ. ಯಳಂದೂರಿನ ಕಾನಾತನಹಳ್ಳಿಗೆ ಬಂದು ಜೀವನೋಪಾಯಕ್ಕಾಗಿ ತ್ಯಾಜ್ಯ ಪ್ಲಾಸ್ಟಿಕ್ ಸಂಗ್ರಹಿಸುತ್ತಿದ್ದರು. ಅವರು ರಾಷ್ಟ್ರೀಯ ಹೆದ್ದಾರಿಯಲ್ಲಿ ಪಾಳುಬಿದ್ದ ಮನೆಯಲ್ಲಿ ವಾಸಿಸುತ್ತಿದ್ದರು. ಮಂಗಳವಾರ ರಾತ್ರಿ ಕಾಳಮ್ಮ ಅಸ್ವಸ್ಥಗೊಂಡು ಕೊನೆಯುಸಿರೆಳೆದಿದ್ದಾರೆ.

ಆಕೆ ಮೃತಪಟ್ಟಿರುವುದನ್ನು ಕಂಡು ರವಿ ಈ ಪ್ರದೇಶದಲ್ಲಿ ಹೊಸಬರಾಗಿದ್ದರಿಂದ ಸಾಲ ಮಾಡಲು ಸಾಧ್ಯವಾಗಿರಲಿಲ್ಲ. ಪ್ಲಾಸ್ಟಿಕ್ ತ್ಯಾಜ್ಯವಿದ್ದ ಗೋಣಿ ಚೀಲವನ್ನು ಖಾಲಿ ಮಾಡಿ, ಶವವನ್ನು ಅದರೊಳಗೆ ಇಟ್ಟು ಹೆಗಲ ಮೇಲೆ ಹೊತ್ತುಕೊಂಡು ಸುವರ್ಣಾವತಿ ತೊಟ್ಟಿಯ ಬಳಿ ಅಂತಿಮ ಸಂಸ್ಕಾರ ನೆರವೇರಿಸಿದರು.

ಇದನ್ನು ಓದಿ: ಹೃದಯಾಘಾತದಿಂದ ಸಶಸ್ತ್ರ ಮೀಸಲು ಪಡೆ ಪೊಲೀಸ್ ಸಿಬ್ಬಂದಿ ಸಾವು

ಅಂಗಡಿಯೊಂದರ ಮಾಲೀಕ ವೀರಭದ್ರನಾಯ್ಕ ಅವರು ಸ್ಥಳದಿಂದ ಹಾದು ಹೋಗುತ್ತಿದ್ದಾಗ ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡಿದರು. ರವಿ ಪತ್ನಿಯನ್ನು ಕೊಂದು ಶವವನ್ನು ಬಚ್ಚಿಟ್ಟಿರಬಹುದು ಎಂದು ಗ್ರಾಮಸ್ಥರು ಶಂಕಿಸಿದ್ದಾರೆ. ಯಳಂದೂರು ಪೊಲೀಸರು ಘಟನಾ ಸ್ಥಳಕ್ಕೆ ದೌಡಾಯಿಸಿದ್ದು, ಘಟನೆಯ ಬಗ್ಗೆ ವಿಚಾರಣೆ ಮಾಡಿದ್ದಾರೆ. ಜಿಲ್ಲಾ ಆಸ್ಪತ್ರೆಯಲ್ಲಿ ಕಾಳಮ್ಮನ ಮರಣೋತ್ತರ ಪರೀಕ್ಷೆ ನಡೆಸಲಾಯಿತು. ಇದೀಗ ರವಿಯನ್ನು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

ಯಳಂದೂರು ಪಟ್ಟಣ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಲ್ಲೇಶ್ ಹಾಗೂ ಪಿಎಸ್ ಐ ಕರಿ ಬಸಪ್ಪ ಅವರು ಪೊಲೀಸರ ಸಮ್ಮುಖದಲ್ಲಿ ಕರಿಪುರ ಬಳಿಯ ಸ್ಮಶಾನದಲ್ಲಿ ಅಂತ್ಯಕ್ರಿಯೆ ನೆರವೇರಿಸಲು ವ್ಯವಸ್ಥೆ ಮಾಡಿದರು.

ರಾಜ್ಯದ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 1:10 pm, Thu, 8 December 22

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?