AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಅಂಬೇಡ್ಕರ್ ಭಾವಚಿತ್ರ ಹರಿದುಹಾಕಿ ಬುದ್ಧನ ಪ್ರತಿಮೆ ಧ್ವಂಸ, ಪೆಂಡಾಲ್ ಮಂಜ ಅರೆಸ್ಟ್

ಚಾಮರಾಜನಗರ ತಾಲ್ಲೂಕಿನ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ‌ ಇತ್ತೀಚೆಗೆ ಅಂಬೇಡ್ಕರ್ ಭಾವಚಿತ್ರ ಹರಿದುಹಾಕಿ ಮತ್ತು ಬುದ್ಧನ ಪ್ರತಿಮೆ ಧ್ವಂಸ ಮಾಡಿದ್ದ ಪ್ರಕರಣ ಜನರ ಆಕ್ರೋಶಕ್ಕೆ ಕಾರಣವಾಗಿತ್ತು. ಸದ್ಯ ಪೊಲೀಸರು ಆರೋಪಿಯನ್ನು ಪತ್ತೆಹಚ್ಚಿ ಬಂಧಿಸಿದ್ದಾರೆ. ಅಕ್ಟೋಬರ್ 23ರಂದು ಘಟನೆ ನಡೆದಿತ್ತು. ಸದ್ಯ ಪೊಲೀಸರು ಆರೋಪಿಯನ್ನು ವಿಚಾರಣೆ ನಡೆಸಿದ್ದಾರೆ.

ಚಾಮರಾಜನಗರ: ಅಂಬೇಡ್ಕರ್ ಭಾವಚಿತ್ರ ಹರಿದುಹಾಕಿ ಬುದ್ಧನ ಪ್ರತಿಮೆ ಧ್ವಂಸ, ಪೆಂಡಾಲ್ ಮಂಜ ಅರೆಸ್ಟ್
Budhaidಅಂಬೇಡ್ಕರ್ ಭಾವಚಿತ್ರ ಹರಿದುಹಾಕಿ, ಬುದ್ಧನ ಪ್ರತಿಮೆ ಧ್ವಂಸ ಕೇಸ್
ಸೂರಜ್ ಪ್ರಸಾದ್ ಎಸ್.ಎನ್
| Updated By: ಗಂಗಾಧರ​ ಬ. ಸಾಬೋಜಿ|

Updated on: Nov 04, 2025 | 5:27 PM

Share

ಚಾಮರಾಜನಗರ, ನವೆಂಬರ್ 04: ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ (BR Ambedkar)​ ಭಾವಚಿತ್ರ ಹರಿದುಹಾಕಿ ಬುದ್ಧನ ಪ್ರತಿಮೆ ಧ್ವಂಸ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಆರೋಪಿ ಮಂಜುನಾಥ್ ಅಲಿಯಾಸ್ ಪೆಂಡಾಲ್ ಮಂಜ ಎಂಬಾತನನ್ನು ಚಾಮರಾಜನಗರ ಪೂರ್ವ ಠಾಣಾ ಪೊಲೀಸರು ಅರೆಸ್ಟ್​ (Arrest) ಮಾಡಿದ್ದಾರೆ. ಅಕ್ಟೋಬರ್ 23ರಂದು ಜ್ಯೋತಿಗೌಡನಪುರದಲ್ಲಿ ಘಟನೆ ನಡೆದಿತ್ತು.

60 ಸಾವಿರ ರೂ ದಂಡ

ಆರೋಪಿ ಮಂಜುನಾಥ್ ಅಲಿಯಾಸ್ ಪೆಂಡಾಲ್ ಮಂಜ, ಎರಡು ತಿಂಗಳ ಹಿಂದೆ ದಲಿತ ಮಹಿಳೆಗೆ ಚಪ್ಪಲಿಯಿಂದ ಹೊಡೆದಿದ್ದ. ಆಗ ಊರಿನ ಯಜಮಾನರು ತಪ್ಪಿಗಾಗಿ 60 ಸಾವಿರ ರೂ ದಂಡ ವಿಧಿಸಿದ್ದರು. ದಂಡದ ಹಣ ಪಾವತಿಸಲು ಮಂಜುನಾಥ್​ ತನ್ನ ಬೈಕ್ ಅಡವಿಟ್ಟಿದ್ದ. ಸದ್ಯ ಮಂಜುನಾಥ್​ನನ್ನು​ ಬಂಧಿಸಿರುವ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಇದನ್ನೂ ಓದಿ: ಚಾಮರಾಜನಗರ: ದಲಿತರಿಗೆ ದೇವಾಲಯ ಪ್ರವೇಶಕ್ಕೆ ನಿರ್ಬಂಧ; 17 ಮಂದಿ ವಿರುದ್ಧ ಎಫ್ಐಆರ್ ದಾಖಲು

ಚಾಮರಾಜನಗರ ತಾಲ್ಲೂಕಿನ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ‌ ಅಕ್ಟೋಬರ್ 23ರಂದು ಗ್ರಾಮದ ಮೂರು ಕಡೆ ಯಾರು ಕಿಡಿಗೇಡಿಗಳು ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರ ಹರಿದು ಬುದ್ದನ ವಿಗ್ರಹ ಧ್ವಂಸಗೊಳಿಸಿದ್ದರು. ಈ ಘಟನೆ ಸಾರ್ವಜನಿಕ ವಲಯದಲ್ಲಿಆಕ್ರೋಶಕ್ಕೆ ಕಾರಣವಾಗಿತ್ತು. ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಲಾಗಿತ್ತು.

ಇನ್ನು ಇತ್ತೀಚೆಗೆ ಗ್ರಾಮಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್ ಹಾಗೂ ಸ್ಥಳೀಯ ಶಾಸಕ ಸಿ.ಪುಟ್ಟರಂಗಶೆಟ್ಟಿ ಭೇಟಿ ನೀಡಿ ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ವಿವರ ಪಡೆದುಕೊಂಡಿದ್ದರು. ಬಳಿಕ ಪ್ರತಿಭಟನಾಕಾರರ ಮನವಿ ಆಲಿಸಿದ್ದರು.

ಇಂತಹ ಕೃತ್ಯ ಮರುಕಳಿಸಬಾರದು: ಸಚಿವ ಕೆ.ವೆಂಕಟೇಶ್

ಈ ವೇಳೆ ಮಾತನಾಡಿದ್ದ, ಜಿಲ್ಲಾ ಉಸ್ತುವಾರಿ ಸಚಿವ ಕೆ.ವೆಂಕಟೇಶ್, ಸಮಾಜದ ಸ್ವಾಸ್ಥ್ಯ ಹಾಳುಮಾಡುವ ಉದ್ದೇಶದಿಂದ ಎಸಗಿರುವ ಕೃತ್ಯವನ್ನು ಯಾರೇ ಮಾಡಿದ್ದರು ಅವರನ್ನು ಪತ್ತೆ ಹಚ್ಚಿ ಶಿಕ್ಷಿಸಲಾಗುತ್ತದೆ. ಇಂತಹ ಕೃತ್ಯ ಮರುಕಳಿಸಬಾರದು. ಪೊಲೀಸ್ ಇಲಾಖೆ ಈಗಾಗಲೇ ತನಿಖೆ ನಡೆಸಿ ಎಲ್ಲಾ ಪ್ರಕ್ರಿಯೆ ಕೈಗೊಂಡಿದೆ. ಶೀಘ್ರವೇ ತಪ್ಪಿತಸ್ಥರನ್ನು ಪತ್ತೆ ಹಚ್ಚಲು ಸೂಚಿಸಲಾಗಿದೆ ಎಂದು ಭರವಸೆ ನೀಡಿದ್ದರು.

ಇದನ್ನೂ ಓದಿ: ಬಂಡೀಪುರ ಸಫಾರಿ ಪಾಯಿಂಟ್ ಆಯ್ತು ಕುಡುಕರ ಅಡ್ಡೆ: ಡಿಸಿಎಫ್ ಕಚೇರಿ ಆವರಣದಲ್ಲೇ ನೂರಾರು ಮದ್ಯದ ಬಾಟಲಿಗಳು!

ಎಲ್ಲಾ ಆಯಾಮಗಳಿಂದ ತನಿಖೆ ಚುರುಕುಗೊಳಿಸಿ ಶೀಘ್ರದಲ್ಲೇ ಕೃತ್ಯ ಎಸಗಿರುವವರನ್ನು ಬಂಧಿಸಬೇಕು. ಉನ್ನತ ಮಟ್ಟದಲ್ಲಿ ಯಾವುದೇ ಅಗತ್ಯ ನೆರವು ಬೇಕಿದ್ದರೆ ಒದಗಿಸಲಾಗುತ್ತದೆ. ವಿಳಂಬಕ್ಕೆ ಅವಕಾಶವಾಗದಂತೆ ತ್ವರಿತವಾಗಿ ತಪ್ಪು ಮಾಡಿದವರನ್ನು ಶಿಕ್ಷೆಗೆ ಒಳಪಡಿಸಬೇಕು ಎಂದು ಅಧಿಕಾರಿಗಳಿಗೆ ಸ್ಥಳದಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಕೆ. ವೆಂಕಟೇಶ್ ನಿರ್ದೇಶನ ನೀಡಿದ್ದರು.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಬೆತ್ ಮೂನಿಯ ಭರ್ಜರಿ ಸೆಂಚುರಿಯೊಂದಿಗೆ ಗೆದ್ದು ಬೀಗಿದ ಸ್ಕಾಚರ್ಸ್
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ಗಿಲ್ಲಿ-ಕಾವ್ಯಾ ನಡುವೆ ಇನ್ನೂ ಮುಗಿದಿಲ್ಲ ಹುಸಿಮುನಿಸು
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ದಾಂಪತ್ಯದಲ್ಲಿ ಈ ಐದು ವಿಷಯಗಳನ್ನು ಗಂಡನಿಗೆ ಹೆಂಡತಿ ಹೇಳಲೇಬಾರದು!
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ಗುರುಗಳ ಲಹರಿ ಇರುವ ಈ ದಿನ ಹೇಗಿರಲಿದೆ ನಿಮ್ಮ ಭವಿಷ್ಯ? ಇಲ್ಲಿದೆ ವಿವರಣೆ
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೇವಸ್ಥಾನದೊಳಗೆ ದೇವರೆದುರು ಕುಳಿತಿದ್ದಾಗಲೇ ಪ್ರಾಣ ಬಿಟ್ಟ ಭಕ್ತ!
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ದೆಹಲಿ ಸ್ಫೋಟದ ಶೀಘ್ರ ತನಿಖೆಗೆ ನಿರ್ಧಾರ; ಸಚಿವ ಅಶ್ವಿನಿ ವೈಷ್ಣವ್
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಕಾರು ಡಿಕ್ಕಿ ಹೊಡೆದ ರಭಸಕ್ಕೆ ಗಿರಕಿ ಹೊಡೆದ ಆಟೋ: ಎದೆ ಝಲ್​ ಎನ್ನುವ ದೃಶ್ಯ
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಬೋಟ್ಸ್ವಾನದೊಂದಿಗಿನ ಸಂಬಂಧ ಗಟ್ಟಿಗೊಳಿಸಲು ಬದ್ಧ; ರಾಷ್ಟ್ರಪತಿ ಮುರ್ಮು
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಹುಲಿವೇಷದ ಕುರಿತ ‘ಮಾರ್ನಮಿ’ ಸಿನಿಮಾ ಬಗ್ಗೆ ಮನಸಾರೆ ಮಾತಾಡಿದ ಕಿಚ್ಚ ಸುದೀಪ್
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು
ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನ ಬದಲಾವಣೆ ಬಗ್ಗೆ ಬೊಮ್ಮಾಯಿ ಹೇಳಿದ್ದಿಷ್ಟು