AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bandipur safari: ಬಂಡೀಪುರ ಸಫಾರಿ ಸಹವಾಸವೇ ಬೇಡಾ ಅಂತಿದ್ದಾರೆ ಪ್ರಾಣಿಪ್ರಿಯರು! ಹದಗೆಟ್ಟ ರಸ್ತೆಗಳಿಂದಾಗಿ ನರಕಯಾತನೆ

ಬಂಡೀಪುರದಲ್ಲಿ ಸಫಾರಿ ಮಾಡಬೇಕು ಅಂತ ಪ್ರತಿದಿನ ಸಾವಿರಾರು ಪ್ರವಾಸಿಗರು ಖುಷಿಯಿಂದೇನೋ ಬಂಡೀಪುರಕ್ಕೆ ಹೋಗುತ್ತಿದ್ದಾರೆ. ಆದ್ರೆ ಆ ದುರಸ್ಥಿ ಕಾಣದ ರಸ್ತೆಗಳಿಂದ ಯಾಕಾದರೂ ಸಫಾರಿಗೆ ಬಂದ್ವಿ ಅಂತ ಬೇಸರದಿಂದ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

Bandipur safari: ಬಂಡೀಪುರ ಸಫಾರಿ ಸಹವಾಸವೇ ಬೇಡಾ ಅಂತಿದ್ದಾರೆ ಪ್ರಾಣಿಪ್ರಿಯರು! ಹದಗೆಟ್ಟ ರಸ್ತೆಗಳಿಂದಾಗಿ ನರಕಯಾತನೆ
ಬಂಡೀಪುರ ಸಫಾರಿ ಸಹವಾಸವೇ ಬೇಡಾ ಅಂತಿದ್ದಾರೆ ಪ್ರಾಣಿಪ್ರಿಯರು!
TV9 Web
| Edited By: |

Updated on: Dec 16, 2022 | 1:18 PM

Share

ಬಂಡೀಪುರ ಅಂದ್ರೆ ಸಾಕು ಎಂತಹವರಿಗಾದರೂ ಆ ಕಾಡಲ್ಲಿ ಸಫಾರಿ ಮಾಡ್ಬೇಕು ಅಂತ ಅನಿಸದೆ ಇರದು. ಆದ್ರೆ ಸಾಮಾನ್ಯ ಜನರು ದುಬಾರಿ ಹಣ ತೆತ್ತು ಸಫಾರಿ ಮಾಡೋದು ದೂರದ ಮಾತು. ಆದರೂ ಅಷ್ಟೊಂದು ದುಬಾರಿ ಹಣ ಕೊಟ್ಟು ಸಫಾರಿಗೆ ಹೋದರೆ ನರಕಯಾತನೆ ಅನುಭವಿಸಬೇಕು. ಸಫಾರಿಗೆ ಹೋದರೆ ನರಕಯಾತನೆ ಯಾಕೆ ಅಂತೀರಾ? ಈ ಸ್ಟೋರಿ ನೋಡಿ. ಹಚ್ಚ ಹಸಿರ ಕಾನನ…. ಸ್ವಚ್ಛಂದವಾಗಿ ವಿಹರಿಸುತ್ತಿರುವ ವನ್ಯಜೀವಿಗಳು… ಕಿವಿಗಿಂಪು ನೀಡೋ ಪಕ್ಷಿಗಳ ನಿನಾದ… ಅಬ್ಬಾ ಬಂಡೀಪುರದಲ್ಲಿ ಸಫಾರಿ ಮಾಡಿದ್ರೆ ಸ್ವರ್ಗ ಅಂತ ಅನಿಸದೆ ಇರದು. ಆದರೆ ಈಗ ಆ ಸಫಾರಿ (Bandipur safari) ರಸ್ತೆಯಲ್ಲಿ ಸ್ವಲ್ಪ ದೂರ ಸಾಗಿದರೆ ಸಾಕು ಹದಗೆಟ್ಟ ರಸ್ತೆಯಿಂದ (road) ನರಕದ ಅನುಭವ ಆಗುತ್ತೆ. ಹೌದು, ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಅರಣ್ಯ ದೇಶ ವಿದೇಶದಿಂದ ಸಾಕಷ್ಟು ಪ್ರವಾಸಿಗರು (tourist) ಬರುತ್ತಾರೆ (Chamarajanagar News).

ಇಲ್ಲಿ ಸಫಾರಿ ಮಾಡಿ ಕಾಡಿನ ಸೌಂದರ್ಯದ ಜೊತೆ ಕಾಡು ಪ್ರಾಣಿಗಳ ಕಣ್ತುಂಬಿಕೊಂಡು ಖುಷಿ ಪಡುತ್ತಾರೆ‌.‌ ಆದ್ರೆ ಇತ್ತೀಚಿಗೆ ಇಲ್ಲಿ ಸಫಾರಿ ಮಾಡಿದ್ರೆ ಒಂದು ದಿನ ರೆಸ್ಟ್ ಮಾಡ್ಲೇಬೇಕಾದ ಪರಿಸ್ಥಿತಿ ಇದೆ.‌ ಇಡೀ ಬಂಡೀಪುರದ ಸಫಾರಿ ರಸ್ತೆಗಳು ಸಂಪೂರ್ಣವಾಗಿ ಹದಗೆಟ್ಟುಹೋಗಿದೆ. ಇಡೀ ಬಂಡೀಪುರ ಸಫಾರಿ ವಲಯದ ರಸ್ತೆ ಸಂಪೂರ್ಣವಾಗಿ ಹಳ್ಳ ಗುಂಡಿಗಳಿಂದ ಕೂಡಿದೆ.

Also Read: ಬಂಡೀಪುರದಲ್ಲಿ ಸಫಾರಿ ದರ ಏರಿಕೆ; ಕೊರೊನಾ ನಡುವೆ ದರ ಹೆಚ್ಚಳಕ್ಕೆ ಪ್ರವಾಸಿಗರ ಅಸಮಾಧಾನ

ಮೂರು ಗಂಟೆಗಳ ಸಫಾರಿ ಮಾಡುವ ಜನರು ಈ ರಸ್ತೆಯಲ್ಲಿ ಸಂಚಾರ ಮಾಡಿದ್ರೆ ಕಾಡಿನ ಸಹವಾಸವೆ ಸಾಕು ಅಂತ ಅನಿಸಿಬಿಡುತ್ತೆ. ಇದೀಗ ಈ ರಸ್ತೆಯಲ್ಲಿ ಸಫಾರಿ ಮಾಡಿದ್ರೆ ಮತ್ತೆ ಕಾಡಿಗೆ ಬರಬೇಕು ಅನ್ನೋ ಆಸೆ ಕೂಡ ದೂರವಾಗಿ ಹೋಗಿ ಬಿಡುತ್ತೆ. ಸಫಾರಿ ರಸ್ತೆ ಅಷ್ಟೊಂದು ಹದಗೆಟ್ಟಿಹೋಗಿದ್ದರೂ ದುಬಾರಿ ಹಣ ಕೊಟ್ಟು ಸಫಾರಿ ಮಾಡಿದರೆ ನಿಜಕ್ಕು ನರಕಯಾತನೆ ಅನುಭವವಾಗಿ ಬಿಡುತ್ತದೆ ಎನ್ನುತ್ತಾರೆ ಮಧು, ವನ್ಯಜೀವಿ ಛಾಯಾಗ್ರಾಹಕ.

Also Read:  ಬಂಡೀಪುರ ಅರಣ್ಯದಲ್ಲಿ ಸೂಪರ್ ಸ್ಟಾರ್ ರಜಿನಿಕಾಂತ್ ವಾಸ್ತವ್ಯ, ಯಾಕೆ ಗೊತ್ತಾ!?

ಸಾಮಾನ್ಯ ಜನರು ಕೊಡಲಾಗದಷ್ಟು ದುಬಾರಿ ಹಣವನ್ನ ಸಫಾರಿಗೆ ಇಟ್ಟು ಇಲಾಖೆಯೇನೋ ಆದಾಯ ಗಳಿಸುತ್ತಿದೆ. ಅಷ್ಟೆ ಅಲ್ಲದೆ ಸಾಕಷ್ಟು ಅನುದಾನ ಸರ್ಕಾರದಿಂದ ಕೂಡ ಬರುತ್ತಿದೆ. ಅದನ್ನೆಲ್ಲ ಏನು ಮಾಡ್ತಿದ್ದಾರೆ ಅನ್ನೋ ಪ್ರಶ್ನೆ ಸಾರ್ವಜನಿಕರು ಕಾಡ್ತಿದೆ. ಈ ಬಗ್ಗೆ ಅಧಿಕಾರಿಗಳನ್ನ ಕೇಳಿದ್ರೆ, ಕಳೆದ ಆರು ತಿಂಗಳಿಂದ ಮಳೆಯಾಗುತ್ತಿರುವುದರಿಂದ ರಸ್ತೆ ಹದಗೆಟ್ಟಿದೆ. ಆದನ್ನು ಸರಿಪಡಿಸುತ್ತೇವೆ ಅನ್ನೋ ರೆಡಿಮೇಡ್ ಉತ್ತರ ನೀಡ್ತಿದ್ದಾರೆ.

ಒಟ್ಟು, ಬಂಡೀಪುರದಲ್ಲಿ ಸಫಾರಿ ಮಾಡಬೇಕು ಅಂತ ಪ್ರತಿದಿನ ಸಾವಿರಾರು ಪ್ರವಾಸಿಗರು ಖುಷಿಯಿಂದೇನೋ ಬಂಡೀಪುರಕ್ಕೆ ಹೋಗುತ್ತಿದ್ದಾರೆ. ಆದ್ರೆ ಆ ದುರಸ್ಥಿ ಕಾಣದ ರಸ್ತೆಗಳಿಂದ ಯಾಕಾದರೂ ಸಫಾರಿಗೆ ಬಂದ್ವಿ ಅಂತ ಬೇಸರದಿಂದ ಅಧಿಕಾರಿಗಳಿಗೆ ಹಿಡಿ ಶಾಪ ಹಾಕುತ್ತಿದ್ದಾರೆ.

ವರದಿ: ದಿಲೀಪ್ ಚೌಡಹಳ್ಳಿ, ಟಿವಿ 9, ಚಾಮರಾಜನಗರ

ವಿಡಿಯೋ ಸುದ್ದಿಗಳನ್ನು ವೀಕ್ಷಿಸಲು ಇಲ್ಲಿ ಕ್ಲಿಕ್ ಮಾಡಿ

Follow Us
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?