AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಬಂಡೀಪುರ ಹುಲಿ ಯೋಜನೆ ನಿರ್ದೇಶಕನ ಮೇಲೆ ಭ್ರಷ್ಟಾಚಾರ ಆರೋಪ; ತನಿಖೆಗೆ ಆಗ್ರಹಿಸಿದ ರೈತ ಸಂಘ

ಜಿಲ್ಲೆಯ ಬಂಡೀಪುರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ಟೆಂಡರ್ ಕರೆಯದೆ ಗೋಲ್ಮಾಲ್ ಮಾಡಿದ್ದಾರೆ. ಅರಣ್ಯಾಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟು ಉನ್ನತ ಮಟ್ಟದ ತನಿಖೆಗೆ ರೈತ ಸಂಘ ಆಗ್ರಹ ಮಾಡಿದೆ.

ಚಾಮರಾಜನಗರ: ಬಂಡೀಪುರ ಹುಲಿ ಯೋಜನೆ ನಿರ್ದೇಶಕನ ಮೇಲೆ ಭ್ರಷ್ಟಾಚಾರ ಆರೋಪ; ತನಿಖೆಗೆ ಆಗ್ರಹಿಸಿದ ರೈತ ಸಂಘ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗೋಲ್ಮಾಲ್
TV9 Web
| Updated By: ಕಿರಣ್ ಹನುಮಂತ್​ ಮಾದಾರ್|

Updated on:Mar 04, 2023 | 10:34 AM

Share

ಚಾಮರಾಜನಗರ: ಜಿಲ್ಲೆಯ ಬಂಡೀಪುರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೌದು ಬಂಡೀಪುರದಲ್ಲಿ ಟೆಂಡರ್ ಕರೆಯದೆ ಗೋಲ್ಮಾಲ್ ಮಾಡಲಾಗಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ಮೇಲೆ ಆರೋಪವಿದೆ. ಸಫಾರಿ ಬಸ್ ವಿನ್ಯಾಸಕ್ಕೆ ಟೆಂಡರ್ ಕರೆಯದೆ 21 ಲಕ್ಷ ರೂಪಾಯಿ ಚೆಕ್ ಕೊಟ್ಟಿದ್ದಾಗಿ ಹಾಗೂ ಟೆಂಡರ್ ಕರೆಯದೆ 60 ಲಕ್ಷ ರೂ ವೆಚ್ಚದಲ್ಲಿ ಅತಿಥಿ ಗೃಹ ಹಾಗೂ ಕಚೇರಿ ನವೀಕರಣ ಮಾಡಿದ್ದಾಗಿ ಆರೋಪ ಮಾಡಲಾಗಿದೆ.

5 ಲಕ್ಷ ರೂ ಮೇಲ್ಪಟ್ಟ ಕಾಮಗಾರಿಗೆ ಟೆಂಡರ್ ಕರೆಯಬೇಕು ಎಂಬುದು ಕರ್ನಾಟಕ ಪಾರದರ್ಶಕ ಕಾಯ್ದೆ ನಿಯಮ. ಆದರೆ 2 ಸಫಾರಿ ಬಸ್‌ಗಳ ಬಾಡಿ ವಿನ್ಯಾಸಕ್ಕೆ ಯಾವುದೇ ಟೆಂಡರ್ ಕರೆಯದೆ 21,20,400 ರೂಪಾಯಿ ಚೆಕ್ ನೀಡಿ, ನಂತರ ನಾಮಕಾವಸ್ತೆಗೆ ಟೆಂಡರ್ ಪ್ರಕ್ರಿಯೆ ಕರೆಯಲಾಗಿದೆಯಂತೆ. ಲಂಟಾನ ತೆರವು, ಹುಲುಗಾವಲು ನಿರ್ಮಾಣ, ರಸ್ತೆ ನಿರ್ವಹಣೆ, ಮೀನುಮರಿ ಸಾಕಾಣಿಕೆ ತರಬೇತಿ, ಪೀಠೋಪಕರಣ ಖರೀದಿ ಟೋಪಿ, ಜರ್ಕಿನ್, ಶೂ, ಡಸ್ಟ್ ಬಿನ್ ಖರೀದಿಯಲ್ಲೂ ಭಾರೀ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಕೆಲವೆಡೆ ಕಾಮಗಾರಿ ನಡೆಸದೆ ಹಣ ಡ್ರಾ ಮಾಡಿದ್ದು ಜೊತೆಗೆ ಎಸ್‌ಬಿ‌ಐ ನೀಡಿದ ಸಿಎಸ್ಆರ್ ನಿಧಿಯಲ್ಲಿ ಸರಿಯಾಗಿ ಗಿಡ ನೆಡದೆ 18 ಲಕ್ಷ ಹಣವನ್ನ ಗುಳುಂ ಮಾಡಲಾಗಿದೆಯಂತೆ ಅದಕ್ಕೋಸ್ಕರ ಅರಣ್ಯಾಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟು ಉನ್ನತ ಮಟ್ಟದ ತನಿಖೆಗೆ ರೈತ ಸಂಘ ಆಗ್ರಹ ಮಾಡಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sat, 4 March 23

ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ಬೌಲಿಂಗ್‌ನಲ್ಲಿ ಪಾಕ್ ನಾಯಕನ ವಿಕೆಟ್ ಎಗರಿಸಿದ ವೈಭವ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ರಾಜಕೀಯಕ್ಕೆ ಬಂದ್ರೆ ಸ್ಟೈಲ್ ಆಗಿ ಬರ್ತೀನಿ: ಸುದೀಪ್
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಬಿಬಿಎಲ್ ಚೊಚ್ಚಲ ಪಂದ್ಯದಲ್ಲಿ ಮುಗ್ಗರಿಸಿದ ಬಾಬರ್ ಆಝಂ
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಶಿವಾಜಿ ಇಲ್ಲದಿದ್ದರೆ ಎಲ್ಲರ ಸುನ್ನತಿ ಆಗುತ್ತಿತ್ತು: ಯತ್ನಾಳ್
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ಪ್ರೀತಿಸಿ ಮೋಸ: ಪ್ರಿಯಕರನ ಮದ್ವೆಗೆ ನುಗ್ಗಿ ರಣಚಂಡಿ ಅವತಾರ ತಾಳಿದ ಪ್ರೇಯಿಸಿ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ರಾತ್ರಿಯಾದ್ರೆ ಸಾಕು ಬೆಡ್ ರೂಂ ಬಳಿ ಸೈಕೋ ಪ್ರತ್ಯಕ್ಷ! ಬೇಸತ್ತ ವೈದ್ಯೆ
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!
ಕಾಮಚೇಷ್ಟೆ ಮಾಡ್ತಿದ್ದ ಸೈಕೋಪಾತ್​​​ಗೆ ಮಹಿಳೆಯರಿಂದ ಬಿಸಿ ಬಿಸಿ ಕಜ್ಜಾಯ!