AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಾಮರಾಜನಗರ: ಬಂಡೀಪುರ ಹುಲಿ ಯೋಜನೆ ನಿರ್ದೇಶಕನ ಮೇಲೆ ಭ್ರಷ್ಟಾಚಾರ ಆರೋಪ; ತನಿಖೆಗೆ ಆಗ್ರಹಿಸಿದ ರೈತ ಸಂಘ

ಜಿಲ್ಲೆಯ ಬಂಡೀಪುರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ಟೆಂಡರ್ ಕರೆಯದೆ ಗೋಲ್ಮಾಲ್ ಮಾಡಿದ್ದಾರೆ. ಅರಣ್ಯಾಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟು ಉನ್ನತ ಮಟ್ಟದ ತನಿಖೆಗೆ ರೈತ ಸಂಘ ಆಗ್ರಹ ಮಾಡಿದೆ.

ಚಾಮರಾಜನಗರ: ಬಂಡೀಪುರ ಹುಲಿ ಯೋಜನೆ ನಿರ್ದೇಶಕನ ಮೇಲೆ ಭ್ರಷ್ಟಾಚಾರ ಆರೋಪ; ತನಿಖೆಗೆ ಆಗ್ರಹಿಸಿದ ರೈತ ಸಂಘ
ಬಂಡೀಪುರ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗೋಲ್ಮಾಲ್
TV9 Web
| Edited By: |

Updated on:Mar 04, 2023 | 10:34 AM

Share

ಚಾಮರಾಜನಗರ: ಜಿಲ್ಲೆಯ ಬಂಡೀಪುರದಲ್ಲಿ ಬ್ರಹ್ಮಾಂಡ ಭ್ರಷ್ಟಾಚಾರ ಆಗಿದೆ ಎಂಬ ಗಂಭೀರ ಆರೋಪ ಕೇಳಿಬಂದಿದೆ. ಹೌದು ಬಂಡೀಪುರದಲ್ಲಿ ಟೆಂಡರ್ ಕರೆಯದೆ ಗೋಲ್ಮಾಲ್ ಮಾಡಲಾಗಿದೆ ಎಂದು ಬಂಡೀಪುರ ಹುಲಿ ಯೋಜನೆ ನಿರ್ದೇಶಕ ರಮೇಶ್ ಕುಮಾರ್ ಮೇಲೆ ಆರೋಪವಿದೆ. ಸಫಾರಿ ಬಸ್ ವಿನ್ಯಾಸಕ್ಕೆ ಟೆಂಡರ್ ಕರೆಯದೆ 21 ಲಕ್ಷ ರೂಪಾಯಿ ಚೆಕ್ ಕೊಟ್ಟಿದ್ದಾಗಿ ಹಾಗೂ ಟೆಂಡರ್ ಕರೆಯದೆ 60 ಲಕ್ಷ ರೂ ವೆಚ್ಚದಲ್ಲಿ ಅತಿಥಿ ಗೃಹ ಹಾಗೂ ಕಚೇರಿ ನವೀಕರಣ ಮಾಡಿದ್ದಾಗಿ ಆರೋಪ ಮಾಡಲಾಗಿದೆ.

5 ಲಕ್ಷ ರೂ ಮೇಲ್ಪಟ್ಟ ಕಾಮಗಾರಿಗೆ ಟೆಂಡರ್ ಕರೆಯಬೇಕು ಎಂಬುದು ಕರ್ನಾಟಕ ಪಾರದರ್ಶಕ ಕಾಯ್ದೆ ನಿಯಮ. ಆದರೆ 2 ಸಫಾರಿ ಬಸ್‌ಗಳ ಬಾಡಿ ವಿನ್ಯಾಸಕ್ಕೆ ಯಾವುದೇ ಟೆಂಡರ್ ಕರೆಯದೆ 21,20,400 ರೂಪಾಯಿ ಚೆಕ್ ನೀಡಿ, ನಂತರ ನಾಮಕಾವಸ್ತೆಗೆ ಟೆಂಡರ್ ಪ್ರಕ್ರಿಯೆ ಕರೆಯಲಾಗಿದೆಯಂತೆ. ಲಂಟಾನ ತೆರವು, ಹುಲುಗಾವಲು ನಿರ್ಮಾಣ, ರಸ್ತೆ ನಿರ್ವಹಣೆ, ಮೀನುಮರಿ ಸಾಕಾಣಿಕೆ ತರಬೇತಿ, ಪೀಠೋಪಕರಣ ಖರೀದಿ ಟೋಪಿ, ಜರ್ಕಿನ್, ಶೂ, ಡಸ್ಟ್ ಬಿನ್ ಖರೀದಿಯಲ್ಲೂ ಭಾರೀ ಭ್ರಷ್ಟಾಚಾರ ಆರೋಪ ಕೇಳಿಬಂದಿದೆ. ಕೆಲವೆಡೆ ಕಾಮಗಾರಿ ನಡೆಸದೆ ಹಣ ಡ್ರಾ ಮಾಡಿದ್ದು ಜೊತೆಗೆ ಎಸ್‌ಬಿ‌ಐ ನೀಡಿದ ಸಿಎಸ್ಆರ್ ನಿಧಿಯಲ್ಲಿ ಸರಿಯಾಗಿ ಗಿಡ ನೆಡದೆ 18 ಲಕ್ಷ ಹಣವನ್ನ ಗುಳುಂ ಮಾಡಲಾಗಿದೆಯಂತೆ ಅದಕ್ಕೋಸ್ಕರ ಅರಣ್ಯಾಧಿಕಾರಿಗಳನ್ನು ಅಮಾನತ್ತಿನಲ್ಲಿಟ್ಟು ಉನ್ನತ ಮಟ್ಟದ ತನಿಖೆಗೆ ರೈತ ಸಂಘ ಆಗ್ರಹ ಮಾಡಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 10:01 am, Sat, 4 March 23

ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಮೋದಿಯಿಂದ ಆದಂಪುರ ವಿಮಾನ ನಿಲ್ದಾಣಕ್ಕೆ ಸಂತ ರವಿದಾಸ್ ಎಂದು ಮರುನಾಮಕರಣ
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಪಕ್ಕದಲ್ಲಿ ಬೋರ್​ವೆಲ್ ಕೊರೆದಿದ್ದಕ್ಕೆ ಮನೆಯ ನೆಲವನ್ನೂ ಸೀಳಿ ಚಿಮ್ಮಿದ ನೀರು
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಬೋಗಸ್ ಮಾಡವ್ರೆ, ಯಶ್ ಹೆಸರು ಹಾಳು ಮಾಡ್ತಾವ್ರೆ: ಯಶ್ ತಾಯಿ ಆರೋಪ
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ಫಿಲಂ ಚೇಂಬರ್ ನೂತನ ಅಧ್ಯಕ್ಷೆ ಜಯಮಾಲ ಹಾಕಿಕೊಂಡಿರುವ ಯೋಜನೆಗಳೇನು?
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ದೇವದತ್ ಪಡಿಕ್ಕಲ್ ಶತಕ; ಕ್ವಾರ್ಟರ್ ಫೈನಲ್​ಗೇರಿದ ಕರ್ನಾಟಕ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಮದ್ವೆಯಾಗಿ 5 ವರ್ಷವಾದರೂ ಅವ್ನ ಕೈಯಲ್ಲಿ ಮಗು ಮಾಡಿಕೊಳ್ಳಲಾಗಿಲ್ಲ
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಕೇಂದ್ರ ಬಜೆಟ್ ಬಗ್ಗೆ ವ್ಯಂಗ್ಯ ಮಾಡುತ್ತಲ್ಲೇ ಕಟುವಾಗಿ ಟೀಕಿಸಿದ ಸಿಎಂ!
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಆಸ್ಟ್ರೇಲಿಯನ್ ಓಪನ್ ಗೆದ್ದು ಇತಿಹಾಸ ನಿರ್ಮಿಸಿದ ಕಾರ್ಲೋಸ್ ಅಲ್ಕರಾಝ್
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಚಿಮುಲ್ ಚುನಾವಣೆ: ಮತದಾರರಿಗೆ ಲಕ್ಷ ಲಕ್ಷ ನಗದು, ಬೆಳ್ಳಿ ತಟ್ಟೆ!
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ
ಟ್ಯಾಕ್ಸ್‌ ಟೆರರಿಸಂ: ಐಟಿ ದಾಳಿ ವಿರುದ್ಧ ತಿರುಗಿಬಿದ್ದ ಮೋಹನ್ ದಾಸ್ ಪೈ